ಅ.8 ರಂದು ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ರಾಷ್ಟ್ರಪತಿ ಆಗಮನ: ಹೆಲಿಪ್ಯಾಡ್‌ಗೆ ಸಿದ್ಧತೆ


Team Udayavani, Oct 4, 2021, 7:25 PM IST

ram-nath

ಶೃಂಗೇರಿ : ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಶ್ರೀ ಶಾರದಾ ಪೀಠಕ್ಕೆ ಅ.8 ರಂದು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ ನಿಲುಗಡೆಗಾಗಿ ಗಾಂಧಿ ಮೈದಾನದಲ್ಲಿ ಹೆಲಿಪ್ಯಾಡ್‌ ನಿರ್ಮಾಣಕ್ಕೆ ಭರದ ಸಿದ್ಧತೆ ನಡೆಸಲಾಗುತ್ತಿದೆ. ಮೂರು ಹೆಲಿಕಾಪ್ಟರ್‌ ಇಳಿಯಲು ಅವಶ್ಯವಾಗಿರುವ ಹೆಲಿಪ್ಯಾಡ್‌ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ.

ಭಾನುವಾರದಿಂದ ಪ್ರವಾಸಿ ವಾಹನಗಳನ್ನು ಗಾಂಧಿ ಮೈದಾನದ ಒಂದು ಪಾರ್ಶ್ವದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಗಾಂ ಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳು, ಹೋಟೆಲ್‌, ರಸ್ತೆ ಬದಿ ವ್ಯಾಪಾರದ 25 ಕ್ಕೂ ಹೆಚ್ಚು ಅಂಗಡಿಗಳ ತೆರವು ಕಾರ್ಯಚರಣೆ ನಡೆಯುತ್ತಿದೆ. ಅ.4ರ ಸಂಜೆಯೊಳಗೆ ಎಲ್ಲಾ ಅಂಗಡಿಗಳನ್ನು ತೆರವು ಮಾಡುವಂತೆ ತಾಲೂಕು ಆಡಳಿತ ಮೌಖೀಕವಾಗಿ ಸೂಚಿಸಿದೆ. ಗಾಂಧಿ ಮೈದಾನದಲ್ಲಿ ಈ ವರ್ಷ ಹಾಕಲಾಗಿದ್ದ 20 ವಿದ್ಯುತ್‌ ಕಂಬಗಳನ್ನು ತೆಗೆಯಲಾಗಿದೆ.

ವಿದ್ಯುದ್ದೀಪ ಅಳವಡಿಸಲು ಹಾಗೂ ಸಿಸಿ ಕ್ಯಾಮರಾ ಅಳವಡಿಸಲು ಈ ವರ್ಷ ಕಂಬಗಳನ್ನು ಹಾಕಲಾಗಿತ್ತು. ಅಂಗಡಿ, ಹೋಟೆಲ್‌ಗ‌ಳು ತಾತ್ಕಾಲಿಕ ಶೀಟ್‌ ಅಳವಡಿಸಿ ನಿರ್ಮಿಸಲಾಗಿದ್ದು, ಇದೀಗ ಹೆಲಿಕಾಪ್ಟರ್‌ ನಿಲುಗಡೆ ಸಂದರ್ಭದಲ್ಲಿ ಶೀಟುಗಳು ಹಾರಿಹೋಗುವ ಸಂದರ್ಭ ಹಾಗೂ ಭದ್ರತೆ ದೃಷ್ಟಿಯಿಂದ ಎಲ್ಲಾ ಅಂಗಡಿಗಳನ್ನು ತೆರವು ಮಾಡಿಸಲಾಗುತ್ತಿದೆ. ಅಂಗಡಿ ವರ್ತಕರು ಸ್ವಯಂಪ್ರೇರಿತರಾಗಿ ತೆರವು ಮಾಡುತ್ತಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ವರ್ತಕ ವಿಜೇಶ್‌ ಕಾಮತ್‌ ಪ್ರತಿಕ್ರಿಯೆ ನೀಡಿ, ರಾಷ್ಟ್ರಪತಿ ಇಲ್ಲಿಗೆ ಆಗಮಿಸುತ್ತಿರುವುದು ಸಂತಸದ ವಿಚಾರವಾಗಿದೆ. ತಾಲೂಕು ಆಡಳಿತದ ಸೂಚನೆಯಂತೆ ನಾವು ನಮ್ಮ ಅಂಗಡಿಯನ್ನು ಸ್ವಯಂಪ್ರೇರಿತರಾಗಿ ತೆರವು ಮಾಡುತ್ತಿದ್ದೇವೆ. ಈಗಾಗಲೇ ಕಾಯಂ ಹೆಲಿಪ್ಯಾಡ್‌ ಇರುವ ಕೊರಡಕಲ್ಲು ಹೆಲಿಪ್ಯಾಡ್‌ ಅಭಿವೃದ್ಧಿಗೊಳಿಸಿದರೆ ಅಲ್ಲಿ ಮೂರು ಹೆಲಿಕ್ಯಾಪ್ಟರ್‌ ಇಳಿಸುವ ಅವಕಾಶವಿದೆ. ಈ ಬಗ್ಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ವಾಹನ ನಿಲುಗಡೆಗೆ ಬದಲಿ ವ್ಯವಸ್ಥೆ-ವಾಹನ ನಿಲುಗಡೆಗೆ ಈಗಾಗಲೇ ಬಸ್‌ ನಿಲ್ದಾಣದ ಸಮೀಪ ವಸತಿ ಬಡಾವಣೆ ಹಾಗೂ ಜೆಸಿಬಿಎಂ ಕಾಲೇಜು ಮೈದಾನ ಬಳಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜೆಸಿಬಿಎಂ ಕಾಲೇಜು ಮೈದಾನದಲ್ಲಿ ವಾಹನ ನಿಲುಗಡೆಯಾದರೂ ಶ್ರೀಮಠಕ್ಕೆ 2 ಕಿಮೀ ದೂರವಿದೆ. ಇದರಿಂದ ಪ್ರವಾಸಿಗರಿಗೆ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಮಳೆ-ಶಾಹಿನ್‌ ಚಂಡಮಾರುತದ ಪ್ರಭಾವದಿಂದ ತಾಲೂಕಿನಲ್ಲಿ ಮಳೆಯಾಗುತ್ತಿದ್ದು, ಗಾಂಧಿ ಮೈದಾನದಲ್ಲಿ ಹೊಂಡ,ಗುಂಡಿಯಲ್ಲಿ ನೀರು ನಿಂತಿದೆ. ಹವಾಮಾನ ಇಲಾಖೆ ಪ್ರಕಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.