ಸ್ಥಳೀಯಾಡಳಿತ ಸಂಸ್ಥೆಗಳಿಗೆ “ಹೋಂ ಕ್ವಾರಂಟೈನ್‌’ ನಿಗಾ ಕರ್ತವ್ಯದ ಒತ್ತಡ

ಆಡಳಿತಾತ್ಮಕ ಕೆಲಸಗಳ ಮೇಲೆ ಪರಿಣಾಮ ಸಾಧ್ಯತೆ

Team Udayavani, Jun 30, 2020, 6:21 AM IST

ಸ್ಥಳೀಯಾಡಳಿತ ಸಂಸ್ಥೆಗಳಿಗೆ “ಹೋಂ ಕ್ವಾರಂಟೈನ್‌’ ನಿಗಾ ಕರ್ತವ್ಯದ ಒತ್ತಡ

ಸಾಂದರ್ಭಿಕ ಚಿತ್ರ..

ಮಹಾನಗರ: ಹೋಂ ಕ್ವಾರಂಟೈನ್‌ನಲ್ಲಿರುವವರ ಮೇಲೆ ನಿಗಾ ಇಡುವ, ಅವರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಡುವ ಕರ್ತವ್ಯದ ಒತ್ತಡ ಈಗ ಸ್ಥಳೀಯಾಡಳಿತ ಸಂಸ್ಥೆಗಳ ಮೇಲೆ ಬಿದ್ದಿದೆ. ಇದು ಆಡಳಿತ ವ್ಯವಸ್ಥೆಯ ಒಟ್ಟು ನಿರ್ವಹಣೆಯ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡಬಹುದೇ ಎಂಬ ಆತಂಕ ಮೂಡಿದೆ.

ಇತ್ತೀಚಿನವರೆಗೆ ಜಿಲ್ಲಾಡಳಿತವೇ ತನ್ನ ವಿವಿಧ ತಂಡಗಳ ಮೂಲಕ ನೇರವಾಗಿ ಸಾಂಸ್ಥಿಕ ಕ್ವಾರಂಟೈನ್‌, ಹೋಂ ಕ್ವಾರಂಟೈನ್‌ ಮೇಲೆ ನಿಗಾ ವಹಿಸುತ್ತಿತ್ತು. ಸ್ಥಳೀಯಾಡಳಿತ ಸಂಸ್ಥೆಗಳು ಸಹಕಾರ ನೀಡುತ್ತಿದ್ದವು. ಆದರೆ ಪ್ರಸ್ತುತ ಸ್ಥಳೀಯಾಡಳಿತ ಸಂಸ್ಥೆಗಳಾದ ಗ್ರಾ.ಪಂ., ಪಾಲಿಕೆ, ಪುರಸಭೆ, ಪಟ್ಟಣ ಪಂ.ಗಳಿಗೆ ಹೆಚ್ಚಿನ ಜವಾಬ್ದಾರಿವಹಿಸಲಾಗಿದೆ.

ಇದರಿಂದಾಗಿ ಸ್ಥಳೀಯಾಡಳಿತ ಸಂಸ್ಥೆಗಳು ತಮ್ಮ ದಿನನಿತ್ಯದ ಆಡಳಿತಾತ್ಮಕ ಕೆಲಸದ ಜತೆಗೆ ಹೋಂ ಕ್ವಾರಂಟೈನ್‌ ಕರ್ತವ್ಯವನ್ನು ಕೂಡ ಮಾಡುತ್ತಿವೆ. ಹೋಂ ಕ್ವಾರಂಟೈನ್‌ಗೊಳಗಾಗುವವರ ಸಂಖ್ಯೆ ಹೆಚ್ಚಾದರೆ ಕೆಲವು ಗ್ರಾ.ಪಂ.ಗಳಲ್ಲಿ ಪಿಡಿಒ, ವಿ.ಎ.ಗಳು ಕೆಲಸದ ಒತ್ತಡದಿಂದಾಗಿ ಸಾರ್ವಜನಿಕರಿಗೆ ಲಭ್ಯವಾಗುವುದು ಕೂಡ ಅಪರೂಪವಾಗುವ ಸಾಧ್ಯತೆಗಳಿವೆ.

ಪ್ರತಿದಿನ ಭೇಟಿ ಕಡ್ಡಾಯ
ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಡಿಒ ಅಥವಾ ವಿ.ಎ.ಗಳು ತಮ್ಮ ವ್ಯಾಪ್ತಿಯ ಹೋಂ ಕ್ವಾರಂಟೈನ್‌ ಮನೆಗಳಿಗೆ ಪ್ರತಿದಿನವೂ ಭೇಟಿ ನೀಡುವುದನ್ನು ಸರಕಾರ ಕಡ್ಡಾಯಗೊಳಿಸಿದೆ. ಅವರಿಗೆ ಅಸಾಧ್ಯವಾದರೆ ಪಂಚಾಯತ್‌ನ ಸಿಬಂದಿಯನ್ನು ಕಳುಹಿಸಿಕೊಡುತ್ತಿದ್ದಾರೆ.

ಮಹಾನಗರ ಪಾಲಿಕೆಯ ಉಪ ಆಯುಕ್ತರು, ಪುರಸಭೆ, ಪಟ್ಟಣ ಪಂಚಾಯತ್‌ ವ್ಯಾಪ್ತಿಗಳಲ್ಲಿ ಮುಖ್ಯಾಧಿಕಾರಿಯವರು ಹೋಂ ಕ್ವಾರಂಟೈನ್‌ನ ಒಟ್ಟು ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಪಾಲಿಕೆಯಿಂದ 80 ಸಿಬಂದಿ ಮಹಾನಗರ ಪಾಲಿಕೆವ್ಯಾಪ್ತಿಯಲ್ಲಿ ಹೋಂ ಕ್ವಾರಂಟೈನ್‌ಗಳ ಮೇಲೆ ನಿಗಾ ಇಡುವುದಕ್ಕಾಗಿ ಪಾಲಿಕೆಯ ವಿವಿಧ ಇಲಾಖೆಗಳ ಸುಮಾರು 80 ಮಂದಿಯನ್ನು ನಿಯೋಜಿಸಲಾಗಿದೆ. ಒಟ್ಟು ಮೇಲುಸ್ತುವಾರಿಯನ್ನು ಪಾಲಿಕೆ ಉಪಾಯುಕ್ತ ಸಂತೋಷ್‌ ಕುಮಾರ್‌ ಅವರು ನಿರ್ವಹಿಸುತ್ತಿದ್ದಾರೆ.

ಅಗತ್ಯವಿದ್ದರೆ ಊಟದ ವ್ಯವಸ್ಥೆ
ಸೀಲ್‌ಡೌನ್‌ ಮಾಡಲಾದ ಮನೆಯ ಅಕ್ಕಪಕ್ಕದವರಿಗೂ ಮಾಹಿತಿ ನೀಡಲಾಗುತ್ತದೆ. ಅವರ ಆರೋಗ್ಯದ ಬಗ್ಗೆ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ನಿಗಾ ವಹಿಸುತ್ತಾರೆ. ಹೆಚ್ಚಾಗಿ ಹೋಂ ಕ್ವಾರಂಟೈನ್‌ನಲ್ಲಿರುವವರಿಗೆ ಮನೆಯವರು ಅಥವಾ ಕುಟುಂಬಿಕರು ಊಟ ಒದಗಿಸಿಕೊಡುತ್ತಾರೆ. ಒಂದು ವೇಳೆಅಂತಹ ವ್ಯವಸ್ಥೆ ಇಲ್ಲದಿದ್ದರೆ ಸ್ಥಳೀಯ ಗ್ರಾ.ಪಂ. ಅಥವಾ ಇತರ ಸ್ಥಳೀಯಾಡಳಿತಗಳ ಮೂಲಕ ಊಟ,ಅಗತ್ಯ ವಸ್ತುಗಳಿಗೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ.

ಉಲ್ಲಂಘನೆ ಪ್ರಕರಣ ಕಡಿಮೆ
ಜಿಲ್ಲೆಯ ಹೆಚ್ಚಿನ ಗ್ರಾ.ಪಂ., ಇತರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೋಂ ಕ್ವಾರಂಟೈನ್‌ನಲ್ಲಿರುವವರು ಇದ್ದಾರೆ. ಅವರ ಮೇಲೆ ಮನೆಯವರು, ಸ್ಥಳೀಯರು ಕೂಡ ನಿಗಾ ವಹಿಸುತ್ತಿದ್ದಾರೆ. ಸೋಂಕು ಹರಡುವ ಅಪಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಹಾಗಾಗಿ ಹೋಂ ಕ್ವಾರಂಟೈನ್‌ ಉಲ್ಲಂಘನೆಯ ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆ. ಹೋಂ ಕ್ವಾರಂಟೈನ್‌ ಮೇಲೆ ನಿಗಾ ಇಡುವುದು ಈಗ ನಮಗೆ ಹೆಚ್ಚುವರಿ ಕರ್ತವ್ಯ ಹೌದು. ಆದರೆ ಇದು ಅನಿವಾರ್ಯ. ಎಲ್ಲರ ಹಿತದೃಷ್ಟಿಯಿಂದಲೂ ಅಗತ್ಯ. ಇದನ್ನು ತುಂಬಾ ಜವಾಬ್ದಾರಿಯಿಂದಲೇ ನಿರ್ವಹಿಸುತ್ತಿದ್ದೇವೆ ಎನ್ನುತ್ತಾರೆ ದ.ಕ. ಜಿಲ್ಲೆಯ ಹಲವು ಮಂದಿ ಪಿಡಿಒಗಳು.

 ಪ್ರಕರಣ ದಾಖಲಿಸಲು ಅಧಿಕಾರ
ಹೋಂ ಕ್ವಾರಂಟೈನ್‌ ಸಮರ್ಪಕವಾಗಿ ನಡೆಯುವಂತೆ ನಿಗಾ ವಹಿಸುವ ಹೆಚ್ಚಿನ ಜವಾಬ್ದಾರಿಯನ್ನು ಸ್ಥಳೀಯಾಡಳಿತ ಸಂಸ್ಥೆಗಳಿಗೆ ನೀಡಲಾಗಿದೆ. ಹೋಂ ಕ್ವಾರಂಟೈನ್‌ ನಿಯಮ ಉಲ್ಲಂ ಸುವವರ ವಿರುದ್ಧ ಪ್ರಕರಣ ದಾಖಲಿಸುವ ಅಧಿಕಾರ ಇದುವರೆಗೆ ತಹಶೀಲ್ದಾರ್‌ ಅವರಿಗೆ ನೀಡಲಾಗಿತ್ತು. ಪ್ರಸ್ತುತ ಈ ಅಧಿಕಾರವನ್ನು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರು, ಪಾಲಿಕೆ ಆಯುಕ್ತರು, ಪುರಸಭೆ, ಪಟ್ಟಣ ಪಂಚಾಯತ್‌ಗಳ ಮುಖ್ಯಾಧಿಕಾರಿಯವರಿಗೂ ನೀಡಲಾಗಿದೆ.
– ಗುರುಪ್ರಸಾದ್‌, ತಹಶೀಲ್ದಾರ್‌, ಮಂಗಳೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.