Ayodhya: ಪ್ರಧಾನಿ ಮೋದಿ “ರಾಮ” ಪಯಣಕ್ಕೆ ತೆರೆ
- ಪ್ರಾಣ ಪ್ರತಿಷ್ಠೆಗೆ ಮುನ್ನಾದಿನ ಧನುಷ್ಕೋಡಿ, ಅರಿಚಲ್ ಮುನ್ನೈಗೆ ಭೇಟಿ- ಶ್ರೀ ಕೋದಂಡರಾಮಸ್ವಾಮಿ ದೇಗುಲದಲ್ಲಿ ಪೂಜೆ
Team Udayavani, Jan 21, 2024, 9:51 PM IST
ರಾಮೇಶ್ವರಂ: ತಮಿಳುನಾಡಿನ ಅರಿಚಲ್ ಮುನ್ನೈನಲ್ಲಿರುವ ಶ್ರೀ ರಾಮನ ದೇಗುಲ ಭೇಟಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ದಕ್ಷಿಣ ಭಾರತದ ಆಧ್ಯಾತ್ಮಿಕ ಪಯಣಕ್ಕೆ ತೆರೆಬಿದ್ದಿದೆ.
ರಾಮಾಯಣದೊಂದಿಗೆ ನಂಟು ಹೊಂದಿರುವ ವಿವಿಧ ದೇಗುಲಗಳಿಗೆ ಕಳೆದೊಂದು ವಾರದಲ್ಲಿ ಪ್ರಧಾನಿ ಮೋದಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅದರಂತೆ, ರಾಮಮಂದಿರದ ಪ್ರಾಣ ಪ್ರತಿಷ್ಠೆಗೆ ಮುನ್ನಾದಿನವಾದ ಭಾನುವಾರ ಅವರು ತಮಿಳುನಾಡಿನ ಧನುಷ್ಕೋಡಿ ಮತ್ತು ಅರಿಚಲ್ ಮುನ್ನೈಗೆ ಹೋಗುವ ದಾರಿಯಲ್ಲಿ ಶ್ರೀ ಕೋದಂಡರಾಮಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕೋದಂಡರಾಮಸ್ವಾಮಿ ದೇಗುಲದಲ್ಲಿ ಬಿಲ್ಲು-ಬಾಣ ಹಿಡಿದು ನಿಂತಿರುವ ರಾಮನ ವಿಗ್ರಹವನ್ನು ಪೂಜಿಸಲಾಗುತ್ತದೆ.
ಅಲ್ಲಿಂದ ಅರಿಚಲ್ ಮುನ್ನೈಗೆ ತೆರಳಿದ ಮೋದಿ, ಅಲ್ಲಿನ ಸಮುದ್ರಕ್ಕೆ ಹೂವುಗಳನ್ನು ಅರ್ಪಿಸಿ, ರಾಷ್ಟ್ರ ಲಾಂಛನವಿರುವ ಸ್ತಂಭಕ್ಕೂ ಪುಷ್ಪನಮನ ಸಲ್ಲಿಸಿದರು. ಜತೆಗೆ, ಬೀಚ್ನಲ್ಲಿ ಪ್ರಾಣಾಯಾಮ ಮಾಡಿದ್ದೂ ಕಂಡುಬಂತು.
ದೆಹಲಿಗೆ ಕಳಶ ಹೊತ್ತೂಯ್ದ ಪ್ರಧಾನಿ:
ಕೋದಂಡರಾಮಸ್ವಾಮಿ ದೇಗುಲ ಮತ್ತು ಅರಿಚಲ್ ಮುನ್ನೈ ಭೇಟಿಯ ಬಳಿಕ ನೇರವಾಗಿ ಮಧುರೈಗೆ ಹೋದ ಪ್ರಧಾನಿ ಮೋದಿ, ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ತೆರಳಿದರು. ತಮಿಳುನಾಡಿನ ಪವಿತ್ರ ಜಲವುಳ್ಳ ಕಳಶವನ್ನೂ ಮೋದಿ ತಮ್ಮೊಂದಿಗೆ ಒಯ್ದರು ಎಂದು ದೇಗುಲದ ಅರ್ಚಕರು ತಿಳಿಸಿದ್ದಾರೆ.
ಶನಿವಾರ ಪ್ರಧಾನಿ ಮೋದಿಯವರು ತಮಿಳುನಾಡಿನ ಶ್ರೀರಂಗಂನಲ್ಲಿರುವ ಶ್ರೀ ರಂಗನಾಥಸ್ವಾಮಿ ಮತ್ತು ರಾಮೇಶ್ವರದ ಅರುಳ್ಮಿಗು ರಾಮನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದರು. ಅದಕ್ಕೂ ಮೊದಲು, ಅಂದರೆ ಕಳೆದ ವಾರ, ರಾಮಾಯಣದೊಂದಿಗೆ ನಂಟು ಹೊಂದಿರುವ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇಗುಲ ಮತ್ತು ಕೇರಳದ ತ್ರಿಪ್ರಯಾರ್ ರಾಮಸ್ವಾಮಿ ದೇಗುಲಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
ರಾಮಸೇತುವಿರುವ ಸ್ಥಳವೇ ಅರಿಚಲ್ ಮುನ್ನೆ
ಅರಿಚಲ್ ಮುನ್ನೈ ಎನ್ನುವುದು ರಾಮಸೇತುವಿರುವ ಸ್ಥಳ. ಇದು ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ದ್ವೀಪದ ದಕ್ಷಿಣ ತುದಿಯಲ್ಲಿದೆ. ಸೀತೆಯನ್ನು ಅಪಹರಣ ಮಾಡಿದ ರಾವಣನ ಸಂಹಾರಕ್ಕಾಗಿ ಶ್ರೀರಾಮನು ವಾನರ ಸೇನೆಯ ಸಹಾಯದಿಂದ ರಾಮಸೇತುವನ್ನು ನಿರ್ಮಿಸಿದ್ದು ಇದೇ ಪ್ರದೇಶದಲ್ಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ