Politics: ಮಾತಿಗೆ ತಪ್ಪಿದ ಪ್ರಧಾನಿ ಮೋದಿ ಸರಕಾರ: ಸಿಎಂ ಟೀಕೆ

`ಯುವನಿಧಿ' ಯೋಜನೆಯಡಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Team Udayavani, Dec 26, 2023, 11:37 PM IST

siddu imp 1

ಬೆಂಗಳೂರು: ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಲ್ಲಿ ಎಲ್ಲ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾತಿಗೆ ತಪ್ಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ವಾಗ್ಧಾಳಿ ನಡೆಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಯುವನಿಧಿ’ ಅಡಿ ನಿರುದ್ಯೋಗ ಭತ್ಯೆಗಾಗಿ ಪದವೀಧರರು ಮತ್ತು ಡಿಪ್ಲೊಮಾ ಪೂರೈಸಿದವರಿಂದ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವನಿಧಿಗೆ ಚಾಲನೆ ನೀಡುವ ಮೂಲಕ ಚುನಾವಣೆ ಪೂರ್ವ ಹೇಳಿದ್ದ ಎಲ್ಲ ಐದು ಗ್ಯಾರಂಟಿಗಳನ್ನು ನಾವು ಈಡೇರಿಸಿದ್ದೇವೆ. ಜತೆಗೆ ರಾಜ್ಯದ ಆರ್ಥಿಕ ಸದೃಢತೆಯನ್ನೂ ಕಾಯ್ದುಕೊಂಡಿದ್ದೇವೆ. ಆದರೆ, ನೀವು (ಪ್ರಧಾನಿ ಮೋದಿ ಅವರಿಗೆ) ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಹತ್ತು ವರ್ಷವಾಯಿತು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮೆ ಮಾಡುವುದಾಗಿ ಹೇಳಿದ್ದಿರಿ. ಹಾಗಿದ್ದರೆ, ಮಾತು ತಪ್ಪಿದವರು ಯಾರು? ನಮ್ಮದು ನುಡಿದಂತೆ ನಡೆಯುವ ಸರಕಾರ. ನಿಮ್ಮದು ಮಾತಿಗೆ ತಪ್ಪಿದ ಸರಕಾರ’ ಎಂದು ತರಾಟೆಗೆ ತೆಗೆದುಕೊಂಡರು.

2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಪೈಕಿ ಶೇ. 10ರಷ್ಟು ಕೂಡ ಈಡೇರಿಸಿಲ್ಲ. ಆದರೆ, ನಾವು 2013-17ರ ಅವಧಿಯಲ್ಲೂ ಎಲ್ಲ ಭರವಸೆಗಳನ್ನು ಈಡೇರಿಸಿದ್ದೆವು. ಈ ಅವಧಿಯಲ್ಲಂತೂ ಕೇವಲ ಆರು ತಿಂಗಳಲ್ಲಿ ಪ್ರಮುಖ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಇದೇ ನಮಗೂ ಮತ್ತು ನಿಮಗೂ (ಬಿಜೆಪಿಗೆ) ಇರುವ ವ್ಯತ್ಯಾಸ ಎಂದು ತೀಕ್ಷ್ಣವಾಗಿ ಹೇಳಿದರು.

ಗ್ಯಾರಂಟಿಗಳನ್ನು ನೀಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇವರೇನು ದೊಡ್ಡ ಆರ್ಥಿಕ ತಜ್ಞರೇ? ಈಗ ಗ್ಯಾರಂಟಿ ಜಾರಿಯಾಗುವುದರ ಜತೆಗೆ ರಾಜ್ಯವೂ ಆರ್ಥಿಕವಾಗಿ ಸದೃಢವಾಗಿದೆ. ಬಜೆಟ್‌ನಲ್ಲಿ ಹಣವನ್ನೂ ಹಂಚಿಕೆ ಮಾಡಲಾಗಿದೆ. ಪ್ರಸಕ್ತ ಸಾಲಿಗೆ ಈ ಯೋಜನೆಗಳಿಗೆ 39 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದ ಅವರು, ನನ್ನ ಪ್ರಕಾರ ದೇಶ ಕಂಡ ಇದುವರೆಗಿನ ಪ್ರಧಾನ ಮಂತ್ರಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳುವ ಪ್ರಧಾನಿ ನರೇಂದ್ರ ಮೋದಿ’ ಎಂದು ಆರೋಪಿಸಿದರು.

ಕವಿಯಾದ ಡಿಕೆಶಿ; ಕಿವಿಯಾದ ಯುವಸಮೂಹ
ಸಾಮಾನ್ಯವಾಗಿ ರಾಜಕೀಯ ನಾಯಕರು ಭಾಗವಹಿಸುವ ಕಾರ್ಯಕ್ರಮಗಳು ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆ ಆಗುತ್ತವೆ. ಅದಕ್ಕೆ ಆಯಾ ಪಕ್ಷಗಳ ಕಾರ್ಯಕರ್ತರು ಸಾಕ್ಷಿಯಾಗುತ್ತಾರೆ. ಆದರೆ, ಮಂಗಳವಾರ ನಡೆದ ಈ ಕಾರ್ಯಕ್ರಮದಲ್ಲಿ ಚಿತ್ರಣ ಕೊಂಚ ಬದಲಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೆಲಹೊತ್ತಿನ ಮಟ್ಟಿಗೆ ಕವಿಗಳಾದರು; ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ಸಮುದಾಯ ಕಿವಿಯಾಯಿತು.

ಡಿ.ಕೆ.ಶಿವಕುಮಾರ್‌ ಅವರ ಭಾಷಣ ಗ್ಯಾರಂಟಿಗಳ ಕುರಿತಾಗಿದ್ದರೂ, ಅದನ್ನು ಪ್ರಸ್ತುತಪಡಿಸಿದ ಪರಿ ಭಿನ್ನವಾಗಿತ್ತು. ಇದಕ್ಕಾಗಿ ತಾವೇ ರಚಿಸಿದ ಕವನವನ್ನೇ ವಾಚಿಸಿದರು. ಅದರಲ್ಲಿ ಗ್ಯಾರಂಟಿಗಳಿಂದ ಪಕ್ಷಕ್ಕೆ ದೊರೆತ ಶಕ್ತಿ, ವಿಪಕ್ಷಗಳ ಪೀಕಲಾಟ ಎಲ್ಲವೂ ಸೇರಿತ್ತು.

ಕೊಟ್ಟ ಮಾತು ಉಳಿಸಿಕೊಂಡ ಕೈ’ಗೆ ಶಕ್ತಿ ಬಂತು, ಐದು ಬೆರಳು ಸೇರಿ ಒಂದು ಮುಷ್ಠಿ ಆಯಿತು, ಐದು ಗ್ಯಾರಂಟಿ ಸೇರಿ ಕೈ’ ಗಟ್ಟಿಯಾಯಿತು, ಅರಳಿದ ಕಮಲ ಇದನ್ನು ನೋಡಿ ಉದುರಿಹೋಯಿತು, ಅತ್ತ-ಇತ್ತ ನೋಡಿ ತೆನೆ ಹೊತ್ತ ಮಹಿಳೆಯು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ನೋಡಿ, ತೆನೆ ಬಿಸಾಡಿಹೋದಳು, ಐದು ಬೆರಳು ಸೇರಿ ಕೈ’ ಗಟ್ಟಿಯಾಯಿತು, ಮುಷ್ಠಿಯಾಯಿತು…’ ಎಂದು ಡಿ.ಕೆ. ಶಿವಕುಮಾರ್‌ ಕವನ ವಾಚನ ಮಾಡಿದರು. ಇದಕ್ಕೆ ಯುವಸಮುದಾಯ ಕರತಾಡನ ಶಿಳ್ಳೆಯೊಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ಯುವಕ-ಯುವತಿಯರಿಗೆ ಶಿಸ್ತಿನ ಪಾಠ, ಉಪಕಾರದ ಸ್ಮರಣೆ ಬಗ್ಗೆ ಕಿವಿಮಾತನ್ನೂ ಉಪಮುಖ್ಯಮಂತ್ರಿ ಹೇಳಿದರು.

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.