Mysore: ಮೈಸೂರಿಗೂ ಮೆಟ್ರೋ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ
Team Udayavani, Oct 20, 2023, 11:43 PM IST
ಹೊಸದಿಲ್ಲಿ/ಬೆಂಗಳೂರು: ಮುಂಬರುವ ವರ್ಷಗಳಲ್ಲಿ ಅರಮನೆ ನಗರಿ ಮೈಸೂರು ಸಹಿತ ರಾಜ್ಯದ ಹಲವು ಪ್ರಮುಖ ನಗರಗಳಲ್ಲೂ ಮೆಟ್ರೋ ರೈಲುಗಳು ಓಡಾಡಲಿವೆ!
ಪ್ರಧಾನಿ ನರೇಂದ್ರ ಮೋದಿ ಈ ಸುಳಿವನ್ನು ನೀಡಿದ್ದಾರೆ. ಬೆಂಗಳೂರಿನ ಮಾದರಿಯಲ್ಲಿ ಇತರ ನಗರಗಳಲ್ಲೂ ಮೆಟ್ರೋ ಸೇವೆಗಳನ್ನು ವಿಸ್ತರಿಸುವ ಯೋಚನೆ ಇದೆ ಎಂದಿದ್ದಾರೆ.
ಶುಕ್ರವಾರ “ನಮ್ಮ ಮೆಟ್ರೋ’ ಮಿಸ್ಸಿಂಗ್ ಲಿಂಕ್ಗಳಾದ ಬೈಯಪ್ಪನಹಳ್ಳಿ- ಕೆ.ಆರ್. ಪುರಂ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ವಿಸ್ತರಿತ ಮಾರ್ಗವನ್ನು ಉ. ಪ್ರದೇಶದ ಸಾಹಿಬಾಬಾದ್ನಿಂದಲೇ ಲೋಕಾರ್ಪಣೆ ಗೊಳಿಸಿ ಅವರು ಮಾತನಾಡಿದರು.
ಮೆಟ್ರೋ ಮೂರನೇ ಹಂತ
“ನಮ್ಮ ಮೆಟ್ರೋ”ದ 3ನೇ ಹಂತದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಶುಕ್ರವಾರ ಮೆಟ್ರೋ ಮಾರ್ಗ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬೆಂಗಳೂರು ಮೆಟ್ರೋ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧದ ಸಮಗ್ರ ಯೋಜನಾ ವರದಿ (ಡಿಪಿಆರ್)ಯನ್ನು ಈಗಾಗಲೇ ಅನುಮೋದನೆಗಾಗಿ ಕಳುಹಿಸಿದೆ. ಇದಕ್ಕೆ ಶೀಘ್ರ ಅನುಮೋದನೆ ನೀಡಬೇಕು ಎಂದರು. ಇದಲ್ಲದೆ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ “3ಎ’ಗೆ ಕೂಡ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ