ಐಸಿಸಿ ಕಿವುಡರ ವಿಶ್ವಕಪ್‌ -2022:ಭಾರತ ತಂಡದಲ್ಲಿ ಕುಂದಾಪುರದ ಪೃಥ್ವಿರಾಜ್‌ ಶೆಟ್ಟಿಗೆ ಸ್ಥಾನ

ತಂಡದಲ್ಲಿ ಸ್ಥಾನ ಪಡೆದ ಏಕೈಕ ಕನ್ನಡಿಗ; ಗುರಿ-ಸಾಧನೆಗೆ ಅಡ್ಡಿಯಾಗದ ನ್ಯೂನತೆ

Team Udayavani, May 10, 2022, 7:35 AM IST

ಐಸಿಸಿ ಕಿವುಡರ ವಿಶ್ವಕಪ್‌ -2022:ಭಾರತ ತಂಡದಲ್ಲಿ ಕುಂದಾಪುರದ ಪೃಥ್ವಿರಾಜ್‌ ಶೆಟ್ಟಿಗೆ ಸ್ಥಾನ

ಕುಂದಾಪುರ: ಮುಂಬರುವ ಸೆಪ್ಟಂಬರ್‌ನಲ್ಲಿ ಕತಾರ್‌ನ ದೋಹಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕಿವುಡರ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಭಾರತದ ಅಂತಿಮ 15 ಮಂದಿಯ ತಂಡವನ್ನು ಪ್ರಕಟಿಸಲಾಗಿದ್ದು, ಕುಂದಾಪುರ ಮೂಲದ ಪೃಥ್ವಿರಾಜ್‌ ಶೆಟ್ಟಿ ಹುಂಚನಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವಕಪ್‌ಗೆ ಆಯ್ಕೆಯಾದ ರಾಜ್ಯದ ಏಕೈಕ ಕ್ರಿಕೆಟಿಗರಾಗಿದ್ದಾರೆ.

ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಗೋಳಿಹೊಳೆ ಗ್ರಾಮದ ಹುಂಚನಿಯ ದಿ| ಸುಭಾಶ್ಚಂದ್ರ ಶೆಟ್ಟಿ ಹಾಗೂ ಶೀಲಾವತಿ ದಂಪತಿಯ ಪುತ್ರನಾಗಿರುವ ಪೃಥ್ವಿರಾಜ್‌ ಅವರು ವೇಗದ ಬೌಲರ್‌ ಮಾತ್ರವಲ್ಲದೆ, ಕೆಳ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ ಆಗಿ ಮಿಂಚುವ ಸಾಮರ್ಥ್ಯ ಹೊಂದಿದ್ದಾರೆ. 31 ವರ್ಷ ಪ್ರಾಯದ ಪೃಥ್ವಿರಾಜ್‌ ಆಟವಾಡುವ ಬಳಗದಲ್ಲಿ ಸ್ಥಾನ ಪಡೆಯುವ ವಿಶ್ವಾಸ ಹೊಂದಿದ್ದಾರೆ.

ಏಕೈಕ ಕನ್ನಡಿಗ
ಕಳೆದ ವರ್ಷ ಅಂತಿಮ 41 ಮಂದಿಯ ಸಂಭಾವ್ಯ ತಂಡವನ್ನು ಅಂತಿಮಗೊಳಿಸಲಾಗಿದ್ದು, ಅದರಲ್ಲಿ ಪೃಥ್ವಿರಾಜ್‌ ಅವರೊಂದಿಗೆ ರಾಜ್ಯದ ಇನ್ನಿಬ್ಬರು ಆಟಗಾರರಾದ ಅನ್ಸಿಲ್‌ ಪಿಂಟೋ ಹಾಗೂ ಶೋಯಿಬ್‌ ಮಹಮ್ಮದ್‌ ಸ್ಥಾನ ಪಡೆದಿದ್ದರು. ಆದರೆ ಅಂತಿಮ 15 ಸದಸ್ಯರ ತಂಡದ ಆಯ್ಕೆಯಲ್ಲಿ ಪೃಥ್ವಿರಾಜ್‌ ಅವರಿಗೆ ಮಾತ್ರ ಅದೃಷ್ಟ ಒಲಿದು ಬಂದಿದೆ. ದಿಲ್ಲಿಯಲ್ಲಿ ಕಳೆದ 4 ದಿನಗಳಿಂದ ನಡೆದ ಆಯ್ಕೆ ಶಿಬಿರದ ಮೂಲಕ ತಂಡವನ್ನು ಆಯ್ಕೆ ಮಾಡಲಾಗಿದೆ. ಇನ್ನು 15 ದಿನಗಳ ಕಾಲ ಆಯ್ಕೆಯಾದ 15 ಮಂದಿಗೆ ಅಲ್ಲಿಯೇ ತರಬೇತಿ ನಡೆಯಲಿದೆ.

ಸಾಧನೆಗೆ ಅಡ್ಡಿಯಾಗದ ನ್ಯೂನತೆ
ಪೃಥ್ವಿರಾಜ್‌ ಹುಟ್ಟು ಕಿವುಡರಾಗಿದ್ದರೂ, ಕ್ರಿಕೆಟ್‌ನಲ್ಲಿ ಸಾಧನೆ ಮಾಡಬೇಕು ಎನ್ನುವ ಹಂಬಲಕ್ಕೆ ಈ ನ್ಯೂನತೆ ಅಡ್ಡಿಯಾಗಲೇ ಇಲ್ಲ. ವಿಶೇಷ ಕ್ರಿಕೆಟ್‌ ಟೂರ್ನಿಗಳಲ್ಲಿ ಮಾತ್ರವಲ್ಲದೆ ಎಲ್ಲರಂತೆ ಎಂಪಿಲ್‌ನಲ್ಲಿ ಐಕಾನ್‌ ಆಟಗಾರನಾಗಿ, ಕುಂದಾಪುರದ ಟಾರ್ಪಡೋಸ್‌ ತಂಡದ ಆಟಗಾರರಾಗಿಯೂ ಮಿಂಚಿದ್ದಾರೆ. ಕರ್ನಾಟಕ ಕಿವುಡರ ಕ್ರಿಕೆಟ್‌ ತಂಡದ ಆಟಗಾರನಾಗಿ, ಕರ್ನಾಟಕ ತಂಡದ ನಾಯಕನಾಗಿದ್ದಾರೆ.

ಹೊಸದಿಲ್ಲಿಯ ಆಯ್ಕೆ ಶಿಬಿರದಲ್ಲಿರುವ ಪೃಥ್ವಿರಾಜ್‌ ಶೆಟ್ಟಿಯವರು “ಉದಯವಾಣಿ’ ಜತೆ ಮಾತನಾಡಿದ್ದು, ಆಯ್ಕೆಯಾದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಅಂತಿಮ 15ರ ತಂಡಕ್ಕೆ ಆಯ್ಕೆಯಾದ ಬಗ್ಗೆ ಹೇಗನ್ನಿಸುತ್ತಿದೆ?
ತುಂಬಾ ಖುಷಿಯಾಗುತ್ತಿದೆ. ಈ ಸಂತಸವನ್ನು ಹೇಗೆ ವ್ಯಕ್ತಪಡಿಸಬೇಕು ಅನ್ನುವುದೇ ತಿಳಿಯುತ್ತಿಲ್ಲ. ಪದಗಳೇ ಇಲ್ಲ.

ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿದೆಯೇ?
ಆ ನಿಟ್ಟಿನಲ್ಲಿ ಕಠಿನ ಪರಿಶ್ರಮ ಪಡುತ್ತಿದ್ದೇನೆ. ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದೇನೆ. ಖಂಡಿತ ಅವಕಾಶ ಸಿಗುವ ವಿಶ್ವಾಸವಿದೆ.

 ನ್ಯೂನತೆ ಮೆಟ್ಟಿನಿಂತು ಈ ಮಟ್ಟಕ್ಕೆ ಸಾಧನೆ ಮಾಡಿರುವ ಬಗ್ಗೆ ?
ನನಗೆ ಚಿಕ್ಕಂದಿನಿಂದಲೂ ಕ್ರಿಕೆಟ್‌ ಆಟವೆಂದರೆ ಅತೀವ ಇಷ್ಟ. ನನ್ನ ನ್ಯೂನತೆ ಬಗ್ಗೆ ಯಾವತ್ತಿಗೂ ಯೋಚಿಸಿಲ್ಲ. ಕ್ರಿಕೆಟ್‌ನಲ್ಲಿ ಈ ಮಟ್ಟಕ್ಕೆ ಬೆಳೆಯಲು ಪೋಷಕರು, ಮನೆಯವರು, ಸಂಬಂಧಿಕರು, ಸ್ನೇಹಿತರು, ಕೋಚ್‌ಗಳು, ಅವಕಾಶ ನೀಡಿದ ತಂಡಗಳ ಪ್ರೋತ್ಸಾಹ, ಸಹಕಾರವೇ ಕಾರಣ. ಅವರೆಲ್ಲರೂ ನನ್ನೊಂದಿಗಿದ್ದರಿಂದ ಇಂದು ಈ ಸಾಧನೆ ನನ್ನಿಂದ ಸಾಧ್ಯವಾಗಿದೆ.

ಭಾರತ ತಂಡ ಹೇಗಿದೆ? ಬಲಾಡ್ಯ ತಂಡಗಳು ಯಾವುವು?
ಭಾರತ ತಂಡ ಎಲ್ಲ ವಿಭಾಗಗಳಲ್ಲೂ ಸಶಕ್ತವಾಗಿದ್ದು, ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ವಿಶ್ವಕಪ್‌ ಗೆಲ್ಲುವ ದೃಢ ವಿಶ್ವಾಸವಿದೆ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.