ಸರಕಾರದ ಸೂಚನೆ ಉಲ್ಲಂಘಿಸಿ ಶುಲ್ಕ ವಸೂಲಿಗಿಳಿದ ಖಾಸಗಿ ಶಾಲೆಗಳು?
ಮುಂದಿನ ಶೈಕ್ಷಣಿಕ ವರ್ಷ ಶುಲ್ಕ ಹೆಚ್ಚಿಸದಂತೆ ಶಿಕ್ಷಣ ಇಲಾಖೆಯಿಂದ ನಿಗಾ
Team Udayavani, Apr 18, 2020, 6:10 AM IST
ಸಾಂದರ್ಭಿಕ ಚಿತ್ರ..
ಬೆಂಗಳೂರು: ಶಾಲೆಗಳ ಪ್ರವೇಶ ಹಾಗೂ ಶುಲ್ಕ ವಸೂಲಿಯನ್ನು ರಾಜ್ಯ ಸರಕಾರ ತಾತ್ಕಾಲಿಕವಾಗಿ ಮುಂದೂಡಿದ್ದರೂ, ಖಾಸಗಿ ಶಾಲೆಗಳು ಶುಲ್ಕ ವಸೂಲಾತಿ ಆರಂಭಿಸಿವೆ ಎಂಬ ದೂರುಗಳು ಕೇಳಲಾರಂಭಿಸಿವೆ.
ಶಿಕ್ಷಣ ಇಲಾಖೆ 2020-21ನೇ ಸಾಲಿಗೆ ಪ್ರವೇಶ ಪಡೆಯುವ ಪ್ರಕ್ರಿಯೆಯನ್ನು ಸದ್ಯದ ಮಟ್ಟಿಗೆ ಮುಂದೂಡಿದ್ದರೂ ಕೆಲವು ಪ್ರತಿಷ್ಠಿತ ಶಾಲೆಗಳು ಆನ್ಲೈನ್ ತರಗತಿ ನಡೆಸುವ ನೆವದಲ್ಲಿ ಪಾಲಕರಿಂದ ಶುಲ್ಕ ವಸೂಲಿಗೆ ಮುಂದಾಗಿವೆ.
ಶಾಲೆಗಳು ಪಾಲಕರಿಗೆ ಮೊಬೈಲ್, ಇಮೇಲ್ ಸಂದೇಶ ಕಳುಹಿಸಿ ಮುಂದಿನ ಶೈಕ್ಷಣಿಕ ಶುಲ್ಕ ಪಾವತಿಸುವಂತೆ ಡೆಡ್ಲೈನ್ ಕಳುಹಿಸಿದ ಬಗ್ಗೆ ದೂರಲಾಗಿದೆ.
ಲಾಕ್ಡೌನ್ನಿಂದಾಗಿ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದ್ದು ಈ ಬಾರಿ 2020-21ನೇ ವರ್ಷದ ತರಗತಿ ನಿಗದಿತ ಸಮಯಕ್ಕೆ ಆರಂಭಿಸಲು ಸಾಧ್ಯವಿಲ್ಲ. ಇದರಿಂದಾಗಿ ಎ.22ರಿಂದ ಆನ್ಲೈನ್ ತರಗತಿ ಆರಂಭಿಸುತ್ತೇವೆ. ಮೊಬೈಲ್ ಆ್ಯಪ್ ಮೂಲಕ ಇ ಬುಕ್ಸ್ಗಳೂ ದೊರೆಯಲಿವೆ. ಆದ್ದರಿಂದ ಶುಲ್ಕ ಎ.22ರಿಂದ ಶುಲ್ಕ ಪಾವತಿಸುವಂತೆ ಸಂದೇಶದಲ್ಲಿ ತಿಳಿಸಲಾಗಿದೆ.
ನಿಯಮವೇನು?
ಲಾಕ್ಡೌನ್ ಚಾಲ್ತಿಯಲ್ಲಿರುವುದರಿಂದ ಶಿಕ್ಷಣ ಇಲಾಖೆ ಸೂಚನೆ ವರೆಗೆ 2020-21 ನೇ ಶೈಕ್ಷಣಿಕ ವರ್ಷ ಆರಂಭಿಸುವಂತಿಲ್ಲ. ಪಾಲಕರಿಂದ ಶುಲ್ಕ ಪಡೆದಿದ್ದರೆ ಹಿಂತಿರುಗಿಸಬೇಕು. ಇಲ್ಲವಾದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಹೇಳಲಾಗಿತ್ತು. ಆದರೂ ಶಾಲೆಗಳು ಇದನ್ನು ಮೀರಿ ನಡೆಯುತ್ತಿವೆ ಎನ್ನಲಾಗಿತ್ತು.
ಇಲಾಖೆಯಿಂದ ನಿಗಾ
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚುವರಿ ಶುಲ್ಕ ಅಥವಾ ಹೆತ್ತವರಿಂದ ದುಬಾರಿ ಶುಲ್ಕ ಪಡೆಯುವ ಶಾಲಾಡಳಿತ ಮಂಡಳಿಗಳ ಮೇಲೆ ನಿಗಾ ಇಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ರೀತಿಯ ಸಿದ್ಧತೆ ಮಾಡುತ್ತಿದೆ. ಜಿಲ್ಲಾ ಹಂತದ ಸಮಿತಿಗಳ ಮೂಲಕ ಹೆಚ್ಚುವರಿ ಶುಲ್ಕಕ್ಕೆ ಕಡಿವಾಣ ಹಾಕಲಿದೆ. ಅಲ್ಲದೇ, ಈ ಸಂಬಂಧ ಮಕ್ಕಳ ಪಾಲಕ, ಪೋಷಕರು ದೂರು ನೀಡಿದ ತತ್ಕ್ಷಣವೇ ಪರಿಶೀಲಿಸಿ, ಮುಂದಿನ ಕ್ರಮ ತಗೆದುಕೊಳ್ಳಲಿದ್ದೇವೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಮುಂದಿನ ವರ್ಷ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡುವುದಿಲ್ಲ. ಪ್ರವೇಶ ಪ್ರಕ್ರಿಯೆ ಮತ್ತು ಶುಲ್ಕ ಸ್ವೀಕಾರಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಅಧಿಕೃತ ಸೂಚನೆ ನೀಡಲಾಗುತ್ತದೆ. ಹೆಚ್ಚುವರಿ ಶುಲ್ಕ ವಸೂಲಿ ಮತ್ತು ಡೊನೇಷನ್ ಮೇಲೂ ನಿಗಾ ಇಡಲಿದ್ದೇವೆ.
-ಉಮಾಶಂಕರ್,
ಪ್ರ. ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ