ಸರಕಾರದ ಸೂಚನೆ ಉಲ್ಲಂಘಿಸಿ ಶುಲ್ಕ ವಸೂಲಿಗಿಳಿದ ಖಾಸಗಿ ಶಾಲೆಗಳು?

ಮುಂದಿನ ಶೈಕ್ಷಣಿಕ ವರ್ಷ ಶುಲ್ಕ ಹೆಚ್ಚಿಸದಂತೆ ಶಿಕ್ಷಣ ಇಲಾಖೆಯಿಂದ ನಿಗಾ

Team Udayavani, Apr 18, 2020, 6:10 AM IST

ಸರಕಾರದ ಸೂಚನೆ ಉಲ್ಲಂಘಿಸಿ ಶುಲ್ಕ ವಸೂಲಿಗಿಳಿದ ಖಾಸಗಿ ಶಾಲೆಗಳು?

ಸಾಂದರ್ಭಿಕ ಚಿತ್ರ..

ಬೆಂಗಳೂರು: ಶಾಲೆಗಳ ಪ್ರವೇಶ ಹಾಗೂ ಶುಲ್ಕ ವಸೂಲಿಯನ್ನು ರಾಜ್ಯ ಸರಕಾರ ತಾತ್ಕಾಲಿಕವಾಗಿ ಮುಂದೂಡಿದ್ದರೂ, ಖಾಸಗಿ ಶಾಲೆಗಳು ಶುಲ್ಕ ವಸೂಲಾತಿ ಆರಂಭಿಸಿವೆ ಎಂಬ ದೂರುಗಳು ಕೇಳಲಾರಂಭಿಸಿವೆ.

ಶಿಕ್ಷಣ ಇಲಾಖೆ 2020-21ನೇ ಸಾಲಿಗೆ ಪ್ರವೇಶ ಪಡೆಯುವ ಪ್ರಕ್ರಿಯೆಯನ್ನು ಸದ್ಯದ ಮಟ್ಟಿಗೆ ಮುಂದೂಡಿದ್ದರೂ ಕೆಲವು ಪ್ರತಿಷ್ಠಿತ ಶಾಲೆಗಳು ಆನ್‌ಲೈನ್‌ ತರಗತಿ ನಡೆಸುವ ನೆವದಲ್ಲಿ ಪಾಲಕರಿಂದ ಶುಲ್ಕ ವಸೂಲಿಗೆ ಮುಂದಾಗಿವೆ.

ಶಾಲೆಗಳು ಪಾಲಕರಿಗೆ ಮೊಬೈಲ್‌, ಇಮೇಲ್‌ ಸಂದೇಶ ಕಳುಹಿಸಿ ಮುಂದಿನ ಶೈಕ್ಷಣಿಕ ಶುಲ್ಕ ಪಾವತಿಸುವಂತೆ ಡೆಡ್‌ಲೈನ್‌ ಕಳುಹಿಸಿದ ಬಗ್ಗೆ ದೂರಲಾಗಿದೆ.

ಲಾಕ್‌ಡೌನ್‌ನಿಂದಾಗಿ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದ್ದು ಈ ಬಾರಿ 2020-21ನೇ ವರ್ಷದ ತರಗತಿ ನಿಗದಿತ ಸಮಯಕ್ಕೆ ಆರಂಭಿಸಲು ಸಾಧ್ಯವಿಲ್ಲ. ಇದರಿಂದಾಗಿ ಎ.22ರಿಂದ ಆನ್‌ಲೈನ್‌ ತರಗತಿ ಆರಂಭಿಸುತ್ತೇವೆ. ಮೊಬೈಲ್‌ ಆ್ಯಪ್‌ ಮೂಲಕ ಇ ಬುಕ್ಸ್‌ಗಳೂ ದೊರೆಯಲಿವೆ. ಆದ್ದರಿಂದ ಶುಲ್ಕ ಎ.22ರಿಂದ ಶುಲ್ಕ ಪಾವತಿಸುವಂತೆ ಸಂದೇಶದಲ್ಲಿ ತಿಳಿಸಲಾಗಿದೆ.

ನಿಯಮವೇನು?
ಲಾಕ್‌ಡೌನ್‌ ಚಾಲ್ತಿಯಲ್ಲಿರುವುದರಿಂದ ಶಿಕ್ಷಣ ಇಲಾಖೆ ಸೂಚನೆ ವರೆಗೆ 2020-21 ನೇ ಶೈಕ್ಷಣಿಕ ವರ್ಷ ಆರಂಭಿಸುವಂತಿಲ್ಲ. ಪಾಲಕರಿಂದ ಶುಲ್ಕ ಪಡೆದಿದ್ದರೆ ಹಿಂತಿರುಗಿಸಬೇಕು. ಇಲ್ಲವಾದರೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಹೇಳಲಾಗಿತ್ತು. ಆದರೂ ಶಾಲೆಗಳು ಇದನ್ನು ಮೀರಿ ನಡೆಯುತ್ತಿವೆ ಎನ್ನಲಾಗಿತ್ತು.

ಇಲಾಖೆಯಿಂದ ನಿಗಾ
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚುವರಿ ಶುಲ್ಕ ಅಥವಾ ಹೆತ್ತವರಿಂದ ದುಬಾರಿ ಶುಲ್ಕ ಪಡೆಯುವ ಶಾಲಾಡಳಿತ ಮಂಡಳಿಗಳ ಮೇಲೆ ನಿಗಾ ಇಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ರೀತಿಯ ಸಿದ್ಧತೆ ಮಾಡುತ್ತಿದೆ. ಜಿಲ್ಲಾ ಹಂತದ ಸಮಿತಿಗಳ ಮೂಲಕ ಹೆಚ್ಚುವರಿ ಶುಲ್ಕಕ್ಕೆ ಕಡಿವಾಣ ಹಾಕಲಿದೆ. ಅಲ್ಲದೇ, ಈ ಸಂಬಂಧ ಮಕ್ಕಳ ಪಾಲಕ, ಪೋಷಕರು ದೂರು ನೀಡಿದ ತತ್‌ಕ್ಷಣವೇ ಪರಿಶೀಲಿಸಿ, ಮುಂದಿನ ಕ್ರಮ ತಗೆದುಕೊಳ್ಳಲಿದ್ದೇವೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಮುಂದಿನ ವರ್ಷ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡುವುದಿಲ್ಲ. ಪ್ರವೇಶ ಪ್ರಕ್ರಿಯೆ ಮತ್ತು ಶುಲ್ಕ ಸ್ವೀಕಾರಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಅಧಿಕೃತ ಸೂಚನೆ ನೀಡಲಾಗುತ್ತದೆ. ಹೆಚ್ಚುವರಿ ಶುಲ್ಕ ವಸೂಲಿ ಮತ್ತು ಡೊನೇಷನ್‌ ಮೇಲೂ ನಿಗಾ ಇಡಲಿದ್ದೇವೆ.
-ಉಮಾಶಂಕರ್‌,
ಪ್ರ. ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.