ಕಾಶಿಯಾತ್ರೆಗೆ ಬಯೋಮೆಟ್ರಿಕ್‌ ಕಾಟ

ಸಹಾಯಧನ ಪಡೆಯಲು ಹರಸಾಹಸ ; ನಿಬಂಧನೆಗಳಿಂದ ಕಾಶಿ ವಿಶ್ವನಾಥ ದರ್ಶನಕ್ಕಿಂತ ಕಠಿಣ

Team Udayavani, Jul 26, 2022, 3:31 PM IST

11

ಹುಬ್ಬಳ್ಳಿ: ಕಾಶಿ ಯಾತ್ರೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯಾತ್ರಿಗಳಿಗೆ ಸಹಾಯಧನ ಘೋಷಿಸಿದ್ದು, ಕಾಶಿ ಯಾತ್ರೆ ಸಹಾಯಧನ ಪಡೆಯಲು ವಿಧಿಸಿರುವ ನಿಬಂಧನೆಗಳು ಕಾಶಿ ವಿಶ್ವನಾಥ ದರ್ಶನಕ್ಕಿಂತ ಕಠಿಣವಾಗಿದ್ದು, ವಾರಣಾಸಿಯಲ್ಲಿರುವ ರಾಜ್ಯದ ಛತ್ರದಲ್ಲಿ ಬಯೋಮೆಟ್ರಿಕ್‌ ದೃಢೀಕರಣ ಪಡೆಯವುದು ಸಾಹಸದ ಕಾರ್ಯವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯಾದ ಕಾಶಿ ಕಾರಿಡಾರ್‌ಗೆ ರಾಜ್ಯದ ಯಾತ್ರಿಗಳ ಭೇಟಿಗೆ ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ 5000 ರೂ. ಸಹಾಯಧನ ಘೋಷಿಸಿದೆ. ಈ ಕುರಿತು ಮುಜರಾಯಿ ಇಲಾಖೆಯಿಂದ ಅಧಿಕೃತ ಆದೇಶ ಕೂಡ ಹೊರಡಿಸಲಾಗಿದೆ. ಇದಕ್ಕಾಗಿ 2022ನೇ ಸಾಲಿನ ಬಜೆಟ್‌ನಲ್ಲಿ 15 ಕೋಟಿ ರೂ. ಮೀಸಲಿಡಲಾಗಿದ್ದು, ಇದಕ್ಕಾಗಿ ಕೆಲವೊಂದು ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ. ಸಹಾಯಧನಕ್ಕೆ ಆಪೇಕ್ಷಿಸುವವರು ವಾರಣಾಸಿಯ ಹುನಾಮನ ಘಾಟ್‌ನಲ್ಲಿರುವ ರಾಜ್ಯ ಸರ್ಕಾರಿ ವಸತಿ ಗೃಹ(ರಾಜ್ಯ ಛತ್ರ) ವ್ಯವಸ್ಥಾಪಕರಿಂದ ಬಯೋಮೆಟ್ರಿಕ್‌ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯ. ಈ ನಿಯಮ ಯಾತ್ರಿಗಳಿಗೆ ವಿಶ್ವನಾಥನ ದರ್ಶನಕ್ಕಿಂತ ದುಸ್ತರವಾಗಿದೆ. ಈ ಪ್ರಮಾಣ ಪತ್ರ ಪಡೆಯುವುದಕ್ಕಾಗಿಯೇ ಕಚೇರಿಗೆ ಅಲೆದಾಡಿದ ಯಾತ್ರಿಕರು ರೋಸಿ ಹೋಗಿ ವಾಪಸ್ಸಾಗಿರುವ ಘಟನೆ ನಡೆದಿವೆ.

ಬಯೋಮೆಟ್ರಿಕ್‌ ಕಡ್ಡಾಯ: ರಾಜ್ಯದ ಮೂಲಕ ನಿವಾಸಿಗಳಾಗಿರುವ ಅರ್ಹ ಯಾತ್ರಾರ್ಥಿಗಳು ಸಹಾಯಧನಕ್ಕೆ ಅರ್ಹರು. ಜು.1ರಿಂದ ಯಾತ್ರೆ ಕೈಗೊಳ್ಳುವವರು ಕಾಶಿ ಯಾತ್ರೆ ಕೈಗೊಂಡ ಬಗ್ಗೆ ವಾರಣಾಸಿಯಲ್ಲಿರುವ ಕರ್ನಾಟಕ ರಾಜ್ಯದ ಛತ್ರದ ಕಚೇರಿಯಲ್ಲಿ ಬಯೋಮೆಟ್ರಿಕ್‌ ದೃಢೀಕರಣ ಪಡೆಯಬೇಕು. ಒಂದು ವೇಳೆ ಈ ದೃಢೀಕರಣ ಪತ್ರ ಇರದಿದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸಲ್ಲ ಎಂಬುದನ್ನು ಸರ್ಕಾರಿ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ವಿಪರ್ಯಾಸ ಎಂದರೆ ಬಯೋಮೆಟ್ರಿಕ್‌ ತೆಗೆದುಕೊಂಡು ದೃಢೀಕರಣ ಪತ್ರ ನೀಡುವವರಿಲ್ಲ ಎಂಬುದು ಕಾಶಿಯಲ್ಲಿ ಪ್ರಮಾಣ ಪತ್ರ ಪಡೆಯಲು ಪರದಾಡಿದವರ ಅಸಮಾಧಾನವಾಗಿದೆ.

ಅರ್ಧ ದಿನ ಕಳೆದರೂ ಸಿಗಲಿಲ್ಲ: ಮೊದಲು ಅರ್ಜಿ ಸಲ್ಲಿಸಿದವರಿಗೆ ಅರ್ಹರಿಗೆ ಮೊದಲ ಆದ್ಯತೆ ಎನ್ನುವ ನಿಯಮ ಆದೇಶದಲ್ಲಿದ್ದು, ಹುಬ್ಬಳ್ಳಿಯಿಂದ ಕಾಶಿಯಾತ್ರೆಗೆ ತೆರಳಿರುವ 60 ಯಾತ್ರಿಕರು ಪ್ರಮಾಣಪತ್ರ ಪಡೆಯಲು ಪರದಾಡಿದ ಸಮಸ್ಯೆಯನ್ನು “ಉದಯವಾಣಿ’ಗೆ ವಿವರಿಸಿದ್ದಾರೆ. ರಾಜ್ಯ ಸರ್ಕಾರದ ಛತ್ರದಲ್ಲಿ ಓರ್ವ ವ್ಯವಸ್ಥಾಪಕ, ಇನ್ನೋರ್ವ ಗುತ್ತಿಗೆ ಆಧಾರದ ಮೇಲಿರುವ ನೌಕರ ಮಾತ್ರ. ಸರ್ಕಾರ ಇಂತಹದೊಂದು ಆದೇಶ ಮಾಡಿದೆ. ನಮ್ಮ ಬಯೋಮೆಟ್ರಿಕ್‌ ದೃಢೀಕರಣ ನೀಡಬೇಕೆಂದು ಕೇಳಿದರೂ ಕೊಡಲಿಲ್ಲ. ಇಲ್ಲಿ ಏನಿದ್ದರೂ ಕರ್ನಾಟಕದಿಂದ ಬರುವವರಿಗೆ ರೂಮಿನ ಸೌಲಭ್ಯ ಕೊಡುವುದಷ್ಟೇ ನಮ್ಮ ಕೆಲಸ. ಉಳಿದ ವಿಚಾರ ನಮಗೆ ತಿಳಿದಿಲ್ಲ ಎನ್ನುವ ಉತ್ತರ ನೀಡುತ್ತಿದ್ದಾರೆ. ನಾವು ಹೋದಾಗ ಸುಮಾರು 500ಕ್ಕೂ ಹೆಚ್ಚು ಜನರು ಪ್ರಮಾಣ ಪತ್ರ ಪಡೆಯಲು ಆಗಮಿಸಿದ್ದರು.

ದ್ವಂದ್ವ ನೀತಿ ಏಕೆ?

ಜೂ.30ಕ್ಕಿಂತ ಮೊದಲು ಕಾಶಿ ಯಾತ್ರೆ ಕೈಗೊಂಡವರಿಗೆ ಈ ಬಯೋಮೆಟ್ರಿಕ್‌ ತಾಪತ್ರಯವಿರಲಿಲ್ಲ. ಕಾಶಿ ವಿಶ್ವನಾಥ ಸ್ವಾಮಿ ದರ್ಶನಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಹಾಗೂ ಹಿಂದಿರುಗಿದ ಟಿಕೆಟ್‌, ಛಾಯಾಚಿತ್ರ, ಪೂಜಾ ರಶೀದಿ, ದೇವಾಲಯಕ್ಕೆ ತೆರಳಿ/ಮರಳಿದ ಬಗ್ಗೆ ಯಾವುದಾದರೂ ದಾಖಲೆಗಳನ್ನು ಖುದ್ದಾಗಿ ಬೆಂಗಳೂರಿನಲ್ಲಿರುವ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಕಚೇರಿಗೆ ಸಲ್ಲಿಬೇಕಾಗಿದ್ದು, 5000 ಸಾವಿರ ರೂ. ಸಹಾಯಧನ ಪಡೆಯಲು ಬೀದರ ಸೇರಿದಂತೆ ಇತರೆ ಜಿಲ್ಲೆಯವರು ಬೆಂಗಳೂರಿಗೆ ಹೋಗುವುದು ಸುಲಭವೇ ಎನ್ನುವ ಪ್ರಶ್ನೆಯಿದೆ. ಇನ್ನೂ ಜು.1ರ ನಂತರದಲ್ಲಿನ ಯಾತ್ರಿಗಳು ಅಲ್ಲಿನ ಬಯೋಮೆಟ್ರಿಕ್‌ ದೃಢೀಕರಣ ಪಡೆದು ಆನ್‌ ಲೈನ್‌/ಖುದ್ದಾಗಿ/ ನೋಂದಾಯಿತ ಅಂಚೆ ಮೂಲಕ ಆಯುಕ್ತರ ಕಚೇರಿಗೆ ಸಲ್ಲಿಸಬೇಕಾಗಿದೆ.

ವಾರಣಾಸಿಯ ಕರ್ನಾಟಕ ಛತ್ರದಲ್ಲಿರುವ ಅವ್ಯವಸ್ಥೆ ನೋಡಿದರೆ ಸರ್ಕಾರ ಕೇವಲ ಪ್ರಚಾರಕ್ಕೆ ಮಾಡಿದ ಯೋಜನೆ ಎನ್ನುವ ಭಾವನೆ ಮೂಡಿಸಿದೆ. ಕಚೇರಿಯಲ್ಲಿ ವ್ಯವಸ್ಥಾಪಕರಿಲ್ಲ, ಪ್ರಮಾಣ ಪತ್ರ ಕೇಳಿದರೆ ಎಲ್ಲವೂ ಅಧಿಕಾರಿಗಳಿಗೆ ಗೊತ್ತು ಎನ್ನುವ ಹಾರಿಕೆ ಉತ್ತರ. ವ್ಯವಸ್ಥಾಪಕರ ಬಗ್ಗೆ ಕೇಳಿದರೆ ತಿರುಪತಿಯ ಉಸ್ತುವಾರಿಯಿದೆ ಅಲ್ಲಿಗೆ ಹೋಗಿದ್ದಾರೆ ಎನ್ನುವ ಉತ್ತರ ಸಿಕ್ಕಿತು. ಅರ್ಧ ದಿನ ಕಳೆದರೂ ಬಯೋಮೆಟ್ರಿಕ್‌ ತೆಗೆದುಕೊಳ್ಳಲಿಲ್ಲ. ಸಚಿವ ಪ್ರಹ್ಲಾದ ಜೋಶಿ ಅವರ ಪತ್ರಕ್ಕೆ ಸೀಲು ಹಾಕಿ ಕೊಡುವಂತೆ ಕೇಳಿದರೂ ಅದು ಕ್ಯಾರೇ ಎನ್ನಲಿಲ್ಲ. –ಬಿ.ಎ.ಪಾಟೀಲ, ಅಧ್ಯಕ್ಷರು, ಸರ್ಕಾರಿ ನಿವೃತ್ತ

ನೌಕರರ ಮತ್ತು ಹಿರಿಯ ನಾಗರಿಕರ ಸಂಘ ಖಾಸಗಿ ಟ್ರಾವೆಲ್ಸ್‌ಗಳಲ್ಲಿ ಪ್ಯಾಕೇಜ್‌ ಮೂಲಕ ಯಾತ್ರೆ ಕೈಗೊಂಡಿರುತ್ತೇವೆ. ಯಾತ್ರೆಗೆ ಪೂರಕವಾಗಿ ಸಮಯ ಹಾಗೂ ದಿನಗಳನ್ನು ನಿಗದಿ ಮಾಡಿರುತ್ತಾರೆ. ಇಂತಹ ಸಂದರ್ಭದಲ್ಲಿ ಬಯೋಮೆಟ್ರಿಕ್‌ ದೃಢೀಕರಣ ಸಾಧ್ಯವೇ. ಇದಕ್ಕಾಗಿ ಗಂಟೆಗಟ್ಟಲೆ ಸಾಲಾಗಿ ನಿಲ್ಲಬೇಕು. ಈ ಹಿಂದೆ ಹೋದವರಿಗೆ ಒಂದು ನಿಯಮ ನಂತರ ಮತ್ತೂಂದು ಸರಿಯಲ್ಲ. ಕಚೇರಿಯಲ್ಲಿ ನೋಡಿದಾಗ ಬಯೋಮೆಟ್ರಿಕ್‌ ವ್ಯವಸ್ಥೆ ಇರಲಿಲ್ಲ. ಯಾತ್ರೆ ಮಾಡಿದ್ದೇವೆ ಎನ್ನುವ ಕಾರಣಕ್ಕೆ ಛತ್ರದ ವ್ಯವಸ್ಥಾಪಕ ಖುರ್ಚಿ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದೇವೆ. ಮೊದಲು ಈ ಅವೈಜ್ಞಾನಿಕ ನಿಯಮ ತೆಗೆಯಬೇಕು. –ಈರಪ್ಪ ಕಾಡಪ್ಪನವರ, ಹುಬ್ಬಳ್ಳಿ ನಿವಾಸಿ

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.