ಪಂಜಳ: ತೋಡಿಗೆ ಸೇತುವೆ ಇಲ್ಲದೆ ಸಮಸ್ಯೆ

ಸುತ್ತು ಬಳಸಿ ಸಂಚಾರ;  ಹಲವು ವರ್ಷಗಳ ಬೇಡಿಕೆಗೆ ಸಿಕ್ಕಿಲ್ಲ ಮನ್ನಣೆ

Team Udayavani, Feb 17, 2022, 5:20 AM IST

ಪಂಜಳ: ತೋಡಿಗೆ ಸೇತುವೆ ಇಲ್ಲದೆ ಸಮಸ್ಯೆ

ಸುಬ್ರಹ್ಮಣ್ಯ: ತೋಡಿಗೆ ಸೇತುವೆ ನಿರ್ಮಿಸುವಂತೆ ಹಲವು ವರ್ಷಗಳಿಂದ ಆಗ್ರಹಿಸಿದರೂ ಬೇಡಿಕೆ ಈಡೇರದ ಕಾರಣ ಇಂದಿಗೂ ಜನತೆ ಸಮಸ್ಯೆ ಅನುಭವಿಸುತ್ತಿದ್ದು, ಸುತ್ತು ಬಳಸಿ ಸಂಚರಿಸುವ ಪರಿಸ್ಥಿತಿ ಬಂದೊದಗಿದೆ.

ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಬಳಿಯ ಪಂಜಳದಲ್ಲಿ ಹರಿಯುತ್ತಿರುವ ಕೇಪಿಸಾರ್‌ ತೋಡಿಗೆ ಸೇತುವೆ ನಿರ್ಮಿ ಸಬೇಕೆಂಬ ಬೇಡಿಕೆ ಕೆಲವು ದಶಕಗಳಿಂದ ವ್ಯಕ್ತವಾಗುತ್ತಿದೆ. ಹಲವು ಬಾರಿ ಮನವಿ, ಬೇಡಿಕೆ ಸಲ್ಲಿಸಿದರೂ ಇಲ್ಲಿಗೆ ಸೇತುವೆ ನಿರ್ಮಿ ಸಲು ಸಂಬಂಧಿಸಿದವರು ಮುಂದಾಗದೇ ಇರುವ ಬಗ್ಗೆ ಇಲ್ಲಿನ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೂಜಿಬಾಳ್ತಿಲ ಭಾಗದ ಶಾಲೆ, ಬೆಥನಿ ವಿದ್ಯಾಸಂಸ್ಥೆಗಳಿಗೆ ತೆರಳುವ ವಿದ್ಯಾ ರ್ಥಿಗಳು, ಜನರು ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದ್ದು, ಬೇಸಗೆಯಲ್ಲಿ ತೋಡಿನಲ್ಲಿ ನೀರು ಇಲ್ಲದೇ ಸಂಚಾರಕ್ಕೆ ಸಮಸ್ಯೆ ಯಾಗುವುದಿಲ್ಲ. ಆದರೆ ಮಳೆಗಾಲದಲ್ಲಿ ತೋಡು ತುಂಬಿ ಹರಿಯುತ್ತಿರುವುದರಿಂದ ಜನರು, ವಿದ್ಯಾರ್ಥಿಗಳು ಹಲವು ಕಿ.ಮೀ. ಸುತ್ತು ಬಳಸಿ ಸಂಚರಿಸಬೇಕಾಗಿದೆ.

ದಶಕದ ಬೇಡಿಕೆ
ಇಲ್ಲಿ ಹರಿಯುವ ತೋಡಿಗೆ ಸೇತುವೆ ನಿರ್ಮಿಸುವಂತೆ ಹಲವು ದಶಕಗಳಿಂದ ಈ ಭಾಗದ ಸ್ಥಳೀಯರು ಜನಪ್ರತಿನಿಧಿಗಳು, ಸಂಬಂಧಿಸಿದವರಿಗೆ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಅಲ್ಲದೇ ಆ ಭಾಗದ ಜಾಗದವರು ಅವಕಾಶ ನೀಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿ ಸರ್ವಋತು ಸೇತುವೆ ನಿರ್ಮಾಣಗೊಂಡಲ್ಲಿ ಮಳೆಗಾಲದಲ್ಲಿ ಸುತ್ತುಬಳಸಿ ಸಂಚರಿಸುವುದಕ್ಕೆ ಕಡಿವಾಣ ಬೀಳಲಿದೆ.

ಇಲ್ಲಿ ಪ.ಜಾ. ಕಾಲನಿ ಹಾಗೂ ಜನವಸತಿ ಪ್ರದೇಶವಿದ್ದು, ತೋಡಿನ ಆಚೆ ಭಾಗದಲ್ಲೂ ಜನವಾಸ ಪ್ರದೇಶವಿದೆ. ಕಡಬ, ಕೊಲ್ಯದಕಟ್ಟ, ವಿಮಲಗಿರಿ, ಉಕ್ಕಿನಡ್ಕ ಭಾಗದಿಂದ ಪೇರಡ್ಕ, ನೂಜಿಬಾಳ್ತಿಲ, ರೆಂಜಿಲಾಡಿ, ಬೆಥನಿ ಸಂಪರ್ಕಕಕ್ಕೆ ಕೊಂಡಿಯಂತಿರುವ ಇಲ್ಲಿ ಸೇತುವೆ ನಿರ್ಮಾಣವಾಗಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಸ್ಥಳೀಯರು.

ವಿದ್ಯಾರ್ಥಿಗಳಿಗೂ ಸಮಸ್ಯೆ
ಇಲ್ಲಿ ಸೇತುವೆ ಇಲ್ಲದೆ ಹತ್ತಿರದಲ್ಲಿರುವ ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಮಳೆಗಾಲದಲ್ಲಿ ಸುತ್ತು ಬಳಸಿ ಸಂಚರಿಸುತ್ತಿದ್ದಾರೆ. ಸಮಯದ ಜತೆಗೆ ಖರ್ಚು ವೆಚ್ಚದ ಹೊರೆಯೂ ಪಾಲಕರ ಮೇಲೆ ಬೀಳುತ್ತಿದೆ. ಕುಬಲಾಡಿ ಕಾಲನಿ ಹಾಗೂ ಈ ಭಾಗದಿಂದಲೂ 8-10 ಮಕ್ಕಳು ಹೊಳೆಯ ಆ ಭಾಗದ ಕಾರ್ಖಳ ಶಾಲೆ ಹೋಗುತ್ತಿದ್ದು, ಮಳೆಗಾಲದಲ್ಲಿ ತೊಂದರೆಯಾಗಿತ್ತಿದೆ ಎನ್ನುತ್ತಾರೆ ಪಾಲಕರು.

ಸಂಬಂಧಿಸಿದವರು ಸ್ಪಂದಿಸಿ
ಬಹು ವರ್ಷಗಳ ಬೇಡಿಕೆ ಈಡೇರಿಸಬೇಕು. ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದಕ್ಕೂ ಪ್ರಯೋಜನವಾಗಿಲ್ಲ. ಇಲ್ಲಿನ ಸಮಸ್ಯೆ ಅರಿತು ಸಂಬಂಧಿಸಿದವರು ಶೀಘ್ರ ಸ್ಪಂದಿಸಲಿ.
-ವಸಂತ ಕುಬಲಾಡಿ,
ಸದಸ್ಯರು ಗ್ರಾ.ಪಂ. ನೂಜಿಬಾಳ್ತಿಲ.

ಜನತೆಗೆ ಸಂಕಷ್ಟ
ಇಲ್ಲಿ ಬಹುಬೇಡಿಕೆಯ ಸೇತುವೆ ನಿರ್ಮಾಣವಾದಲ್ಲಿ ಜನತೆಯ ಸಂಕಷ್ಟ ನಿವಾರಣೆಯಾಗಲಿದೆ. ಸೇತುವೆ ಇಲ್ಲದೆ ಸುತ್ತು ಬಳಸಿ ಸಂಚರಿಸುವ ಅನಿವಾರ್ಯತೆ ಸ್ಥಳೀಯರದ್ದು. ಕೂಡಲೇ ಇಲ್ಲಿ ಸೇತುವೆ ನಿರ್ಮಾಣವಾಗಲಿ ಎಂಬುದು ನಮ್ಮ ಬೇಡಿಕೆ.
-ಸಜಿ ಒ.ಕೆ.,
ಸ್ಥಳೀಯರು, ನೂಜಿಬಾಳ್ತಿಲ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.