ದೇಶದಲ್ಲಿ ಸರಕು ವಿಮಾನ ಉತ್ಪಾದನೆ; ಗುಜರಾತ್‌ನ ವಡೋದರಾದಲ್ಲಿ ಹೊಸ ಘಟಕ ಸ್ಥಾಪನೆ

ಐರೋಪ್ಯ ಒಕ್ಕೂಟದ ಹೊರಭಾಗದಲ್ಲಿ ಇದೇ ಮೊದಲ ಬಾರಿಗೆ  ಸಿ-295 ವಿಮಾನಗಳನ್ನು ಉತ್ಪಾದಿಸಲಾಗುತ್ತಿದೆ.

Team Udayavani, Oct 28, 2022, 12:38 PM IST

ದೇಶದಲ್ಲಿ ಸರಕು ವಿಮಾನ ಉತ್ಪಾದನೆ; ಗುಜರಾತ್‌ನ ವಡೋದರಾದಲ್ಲಿ ಹೊಸ ಘಟಕ ಸ್ಥಾಪನೆ

ನವದೆಹಲಿ: ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್‌ (ಟಿಎಎಸ್‌ಎಲ್‌) ಮತ್ತು ಏರ್‌ಬಸ್‌ ನಡುವೆ ಸಿ-295 ಮಾದರಿಯ ವಿಮಾನ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದ ಉಂಟಾಗಿದೆ. ಒಟ್ಟು 21,935 ಕೋಟಿ ರೂ. ಮೊತ್ತದ ಡೀಲ್‌ ಇದಾಗಿದೆ.

ಗುಜರಾತ್‌ನ ವಡೋದರಾದಲ್ಲಿ ಅದನ್ನು ಉತ್ಪಾದಿಸಲಾಗುತ್ತದೆ. ಭಾನುವಾರ (ಅ.30) ನಡೆಯುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಭಾರತೀಯ ವಾಯುಪಡೆ (ಐಎಎಫ್)ಗಾಗಿ ಈ ವಿಮಾನಗಳು ಲಭ್ಯವಾಗಲಿವೆ.

ಈ ಬಗ್ಗೆ ನವದೆಹಲಿಯಲ್ಲಿ ಮಾಹಿತಿ ನೀಡಿದ ರಕ್ಷಣಾ ಖಾತೆ ಕಾರ್ಯದರ್ಶಿ ಡಾ.ಅಜಯ ಕುಮಾರ್‌ ಭಾರತೀಯ ವಾಯುಪಡೆಯನ್ನು ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಗುಜರಾತ್‌ನ ವಡೋದರಾದಲ್ಲಿ ಸ್ಥಾಪಿಸಲಾಗುವ ಘಟಕದಲ್ಲಿ ಸರಕು ಸಾಗಣೆ ವಿಮಾನವನ್ನು ಉತ್ಪಾದಿಸಲಾಗುತ್ತದೆ. ದೇಶೀಯ ವಿಮಾನ ಉತ್ಪಾದನಾ ಕ್ಷೇತ್ರದಲ್ಲಿ ಇದೊಂದು ಪ್ರಮುಖ ಯೋಜನೆಯಾಗಲಿದೆ. ಜತೆಗೆ ಈ ಘಟಕದಿಂದ ವಿದೇಶಗಳಿಗೆ ರಫ್ತು ಮಾಡುವ ನಿಟ್ಟಿನಲ್ಲಿಯೂ ವಿಮಾನಗಳ ಉತ್ಪಾದನೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌ ಜತೆಗೆ ಕೇಂದ್ರ ಸರ್ಕಾರ ಸಿ-295 ಮಾದರಿಯ ಸರಕು ಸಾಗಣೆ ವಿಮಾನ ಖರೀದಿ ಮಾಡುವ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಉದ್ದೇಶಿತ ವಿಮಾನಗಳು ಸದ್ಯ ಐಎಎಫ್ ಹೊಂದಿರುವ ಆ್ಯವ್ರೋ-748 ಸರಕು ಸಾಗಣೆ ವಿಮಾನಗಳ ಸ್ಥಾನದಲ್ಲಿ ಹೊಸತು ಬರಲಿವೆ.

ಇದು ಪ್ರಥಮ: ಮಿಲಿಟರಿ ಉದ್ದೇಶಕ್ಕಾಗಿ ದೇಶದಲ್ಲಿ ಇದೇ ಮೊದಲ ಬಾರಿಗೆ ಖಾಸಗಿ ಕಂಪನಿಯಿಂದ ವಿಮಾನ ತಯಾರಿಸಲಾಗುತ್ತದೆ. ಭಾರತದಲ್ಲಿ ಟಾಟಾ ಸಮೂಹ ವಿಮಾನ ಉತ್ಪಾದನೆ ಮಾಡಲಿದೆ. ಒಪ್ಪಂದದ ಅನ್ವಯ ಏರ್‌ಬಸ್‌ ಸ್ಪೇನ್‌ನ ಸೆವೆಲ್ಲೆ ಘಟಕದಿಂದ 16 ಯುದ್ಧ ವಿಮಾನಗಳನ್ನು ನಾಲ್ಕು ವರ್ಷಗಳ ಅವಧಿಯಲ್ಲಿ ನೀಡಲಿದೆ. ಅಂದರೆ, 2023 ಸೆಪ್ಟೆಂಬರ್‌ ಮತ್ತು 2025ರ ಆಗಸ್ಟ್‌ ಒಳಗಾಗಿ ಈ ವಿಮಾನಗಳು ಲಭ್ಯವಾಗಲಿದೆ.ಉಳಿದ 40 ಯುದ್ಧ ವಿಮಾನಗಳನ್ನು ಗುಜರಾತ್‌ನ ವಡೋದರಾದಲ್ಲಿ ಸ್ಥಾಪಿಸಲಾಗುವ ಹೊಸ ಘಟಕದಲ್ಲಿ ಉತ್ಪಾದಿಸಲಾಗುತ್ತದೆ. ಈ ವಿಮಾನವನ್ನು ನಾಗರಿಕ ಉದ್ದೇಶಗಳಿಗಾಗಿ ಕೂಡ ಬಳಕೆ ಮಾಡಲು ಅವಕಾಶ ಇದೆ. ಐರೋಪ್ಯ ಒಕ್ಕೂಟದ ಹೊರಭಾಗದಲ್ಲಿ ಇದೇ ಮೊದಲ ಬಾರಿಗೆ  ಸಿ-295 ವಿಮಾನಗಳನ್ನು ಉತ್ಪಾದಿಸಲಾಗುತ್ತಿದೆ.

ವಡೋದರಾ ಘಟಕದಲ್ಲಿ ಉತ್ಪಾದನೆಯಾಗುವ ವಿಮಾನಗಳು ಸ್ಪೇನ್‌ನ ಸೆವೆಲ್ಲೆ ಘಟಕದಲ್ಲಿ ಉತ್ಪಾದನೆಯಾಗುವ ವಿಮಾನಗಳಷ್ಟೇ ಗುಣಮಟ್ಟವನ್ನು ಹೊಂದಿರಲಿದೆ ಎಂದು ರಕ್ಷಣಾ ಕಾರ್ಯದರ್ಶಿ ಅಜಯ ಕುಮಾರ್‌ ಹೇಳಿದ್ದಾರೆ.

ದೇಶೀಯ ಉತ್ಪನ್ನಗಳ ಬಳಕೆ
ವಡೋದರಾ ಘಟಕದಲ್ಲಿ ಉತ್ಪಾದಿಸಲಾಗುವ ಹೊಸ ಮಾದರಿಯ ವಿಮಾನಗಳಿಗೆ ಭಾರತ್‌ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮತ್ತು ಭಾರತ್‌ ಡೈನಾಮಿಕ್ಸ್‌ ಲಿಮಿಟೆಡ್‌ ಉತ್ಪಾದಿಸಿದ ಇಲೆಕ್ಟ್ರಾನಿಕ್ಸ್‌ ವಸ್ತುಗಳನ್ನೇ ಬಳಕೆ ಮಾಡಲಾಗುತ್ತದೆ. ಒಟ್ಟು 56 ವಿಮಾನಗಳಿಗೆ ಅವುಗಳನ್ನು ಬಳಕೆ ಮಾಡಲಾಗುತ್ತದೆ ಎಂದು ಐಎಎಫ್ ಉಪ ಮುಖ್ಯಸ್ಥ ಏರ್‌ ಮಾರ್ಷಲ್‌ ಸಂದೀಪ್‌ ಸಿಂಗ್‌ ಗೇಳಿದ್ದಾರೆ. ಐಎಎಫ್ ಗೆ ಬೇಕಾಗಿರುವ ವಿಮಾನಗಳ ಉತ್ಪಾದನೆ ಪೂರ್ತಿಗೊಂಡ ಬಳಿಕ ಕಂಪನಿಗೆ ಉಳಿದ ವಿಮಾನಗಳನ್ನು ರಫ್ತು ಮಾಡಲೂ ಅವಕಾಶ ನೀಡಲಾಗುತ್ತದೆ ಎಂದರು.

ವಿಶೇಷತೆಗಳೇನು?
* ಮೊದಲ ಬಾರಿಗೆ ದೇಶದಲ್ಲಿ ರಕ್ಷಣಾ ಉದ್ದೇಶಕ್ಕಾಗಿ ಖಾಸಗಿ ಕಂಪನಿಯಿಂದ ವಿಮಾನ ಉತ್ಪಾದನೆ
* ಐರೋಪ್ಯ ಒಕ್ಕೂಟದಿಂದ ಮೊದಲ ಬಾರಿಗೆ ಸಿ-295 ಉತ್ಪಾದನೆ ಮಾಡಲು ಸಿದ್ಧತೆ
* 16-ನಾಲ್ಕು ವರ್ಷಗಳಲ್ಲಿ ಸಿಗುವ ವಿಮಾನಗಳು
* 40-ವಡೋದರಾದಲ್ಲಿ ಉತ್ಪಾದನೆ ಯಾಗಲಿರುವ ವಿಮಾನಗಳು
* 21,935 ಕೋಟಿ ರೂ.- ಯೋಜನೆಯ ಒಟ್ಟು ಮೌಲ್ಯ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.