ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ


Team Udayavani, Dec 4, 2021, 8:07 PM IST

ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ

ಮಣಿಪಾಲ : ಮಾಸ್ಟರ್ ಫಿಲ್ಮ್ ಮೇಕರ್ ಸತ್ಯಜಿತ್ ರೇ ಅವರು ಜಾಗತೀಕರಣದಿಂದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ‘ಭವಿಷ್ಯ’ವೆನಿಸುವಂತ ಮಾತುಗಳನ್ನಾಡಿ ಮಧ್ಯಮ ವರ್ಗದ ‘ಅಸ್ತಿತ್ವವಾದಿ ಹೋರಾಟ’ಗಳನ್ನು ತಮ್ಮ ಅನೇಕ ಚಲನಚಿತ್ರಗಳಲ್ಲಿ ಸೆರೆಹಿಡಿದಿದ್ದಾರೆ ಎಂದು ರಾಷ್ಟ್ರೀಯ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಚಲನಚಿತ್ರ ವಿಮರ್ಶಕ ಪ್ರೊ.ಎನ್ ಮನು ಚಕ್ರವರ್ತಿ ಹೇಳಿದರು.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ಸತ್ಯಜಿತ್ ರೇ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರೇ ಸ್ಮರಣಾರ್ಥ ಉಪನ್ಯಾಸದಲ್ಲಿ ಪ್ರೊ.ಚಕ್ರವರ್ತಿ ಮಾತನಾಡುತ್ತಿದ್ದರು. ಸತ್ಯಜಿತ್ ರೇ ಅವರ ಮಹಾನಗರ್, ನಾಯಕ್, ಪ್ರತಿಧ್ವನಿ, ಸೀಮಾಬಧ್ ಮುಂತಾದ ಅನೇಕ ಚಲನಚಿತ್ರಗಳಲ್ಲಿ ಬಂಡವಾಳಶಾಹಿ ಜಾಗತೀಕರಣದ ಸ್ವರೂಪವನ್ನು ಉಲ್ಲೇಖಿಸಿದ್ದಾರೆ ಎಂದರು.

ರೇ ಅವರ ಚಲನಚಿತ್ರವೊಂದರ ಸಂಭಾಷಣೆಯನ್ನು ಉಲ್ಲೇಖಿಸಿದ ಅವರು- ಮನುಷ್ಯ ಚಂದ್ರನ ಮೇಲೆ ಪಾದಾರ್ಪಣೆ ಮಾಡಿರುವುದಕ್ಕಿಂತಲೂ, ನ್ಯಾಯ ಮತ್ತು ಸಮಾನತೆ ಪ್ರಜ್ಞೆಯ ಉಗಮವೇ ಆಧುನಿಕ ಯುಗದ ಉನ್ನತ ಸಾಧನೆ ಎಂದು ರೇ ನಂಬಿದ್ದರು. ರೇ ಅವರ ಮಹಿಳಾ ಪಾತ್ರಗಳು ಗಟ್ಟಿತನದ ಮತ್ತು ವಿಭಿನ್ನ ಪಾತ್ರಗಳು; ವಾಸ್ತವವಾಗಿ, ಪ್ರಬಲ ಪುರುಷವಾದಿ ನಿರೂಪಣೆಗಿಂತ ಭಿನ್ನವಾದವು ಎಂದು ಹೇಳಿದರು.

ರಾಜಾರಾಮ್ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾ ಸಾಗರ್ ಮತ್ತು ಗುರುದೇವ್ ರವೀಂದ್ರನಾಥ ಠಾಗೋರ್ ಮತ್ತು ಮಹಾತ್ಮ ಗಾಂಧಿಯವರ ಬೌದ್ಧಿಕ ಪರಂಪರೆಯನ್ನು ಮೈಗೂಡಿಸಿಕೊಂಡ ರೇ ವಸಾಹತುಶಾಹಿ, ರಾಷ್ಟ್ರೀಯತೆ, ಮಹಿಳೆಯರು, ಶಿಕ್ಷಣ, ಆಧುನಿಕತೆ, ಯುದ್ಧ ಮತ್ತು ಶಾಂತಿ ಇತ್ಯಾದಿಗಳ ಬಗ್ಗೆ ತಮ್ಮದೇ ಅಭಿಪ್ರಾಯಗಳನ್ನು ರೂಪಿಸಿಕೊಂಡಿದ್ದರು. ಅವರ ಘರೆ ಬೈರೆ, ಶತ್ರಂಜ್ ಕೆ ಕಿಲಾಡಿ ಮುಂತಾದ ಚಿತ್ರಗಳಲ್ಲಿ ಅವು ಪ್ರತಿಬಿಂಬಿತವಾಗಿದೆ ಎಂದರು.

ಅಮಾನವೀಯ ಜಾಗತೀಕರಣ ಪ್ರಕ್ರಿಯೆಯಲ್ಲಿ ಸಿದ್ಧ ಪಾಲುದಾರರಾಗುತ್ತಿರುವವರನ್ನು ಟೀಕಿಸಿದ ಪ್ರೊ.ಚಕ್ರವರ್ತಿ, ರೇ ಚಲನಚಿತ್ರಗಳ ಮೂಲಕ ಅವರ ಅಭಿಪ್ರಾಯವನ್ನು ಉದಾಹರಿಸಿ, ಶೋಷಿತರ ದುಃಖದ ಭಾರದ ಶ್ರೀಮಂತಿಕೆ ಸಲ್ಲದು ಎಂದು ಹೇಳಿದರು.

ಇದನ್ನೂ ಓದಿ : 3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

ಇದಕ್ಕೂ ಮುನ್ನ ಮಾತನಾಡಿದ ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ, ರೇ ತಮ್ಮ ಕಾಲದ ನೈಜತೆಯನ್ನು ‘ವಾಸ್ತವಿಕತೆಯನ್ನು’ ಸಿನಿಮೀಯ ವಿಧಾನದಲ್ಲಿ ಸೆರೆಹಿಡಿದು, ಮಹಾನ್ ಚಲನಚಿತ್ರ ನಿರ್ದೇಶಕರಾಗಿ ಹೊರಹೊಮ್ಮಿ, ಅಭಿಜಾತ ಕೃತಿಗಳನ್ನು ನಿರ್ಮಿಸಿದ್ದಾರೆ ಎಂದರು.

ಪ್ರೊ ಫಣಿರಾಜ್ ಮಾತನಾಡಿ ರೇ ತಮ್ಮ ಮಾನವತಾವಾದ ಮತ್ತು ಆಧುನಿಕತಾವಾದದೊಂದಿಗೆ ಸಮಕಾಲೀನರಾಗಿ ಉಳಿದಿದ್ದಾರೆ ಎಂದು ಹೇಳಿದರು.

ಮನಸ್ವಿನಿ ಶ್ರೀರಂಗಂ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಚಲನಚಿತ್ರ ಲೇಖಕಿ ಮೈಥಿಲಿ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.