Law: ವಕೀಲರ ಮೇಲಿನ ಹಿಂಸಾಚಾರ ನಿಷೇಧ ಮಸೂದೆಗೆ ಅಂಗೀಕಾರ
ನ್ಯಾಯವಾದಿಗಳ ಮೇಲಿನ ಹಲ್ಲೆ ಜಾಮೀನುರಹಿತ ಪ್ರಕರಣ ಎಂದು ಪರಿಗಣನೆ: ಎಚ್.ಕೆ.ಪಾಟೀಲ್
Team Udayavani, Dec 14, 2023, 11:07 PM IST
ಬೆಳಗಾವಿ: ನ್ಯಾಯವಾದಿಗಳ ಮೇಲಿನ ಹಲ್ಲೆ ಹಾಗೂ ಹಿಂಸಾಚಾರ ತಡೆಯುವುದಕ್ಕಾಗಿ ಜಾರಿಗೆ ತಂದಿರುವ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆತಿದೆ.
ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿ ಸಿದ ಮಸೂದೆಗೆ ಸದನ ಒಕ್ಕೊರಲಿನಿಂದ ಬೆಂಬಲ ವ್ಯಕ್ತಪಡಿಸಿದೆ. ಬಹುಕಾಲದಿಂದ ವಕೀಲರು ಸಲ್ಲಿಸಿದ್ದ ಮನವಿಗೆ ಈ ಮೂಲಕ ಸರಕಾರ ಮನ್ನಣೆ ನೀಡಿದೆ. ನ್ಯಾಯ ವಾದಿಗಳು ಯಾವುದೇ ಭಯ ಅಥವಾ ಪ್ರಭಾವಕ್ಕೆ ಒಳಗಾಗದೇ ಮುಕ್ತವಾಗಿ ತಮ್ಮ ಸೇವೆ ಸಲ್ಲಿಸಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಈ ಕಾಯ್ದೆ ಜಾರಿಗೆ ತರಲಾಗಿದೆ. ಹಲ್ಲೆಗೊಳಗಾದ ನ್ಯಾಯವಾದಿಗಳಿಗೆ ವಕೀಲರ ಕಲ್ಯಾಣ ನಿಧಿಯಿಂದ ನ್ಯಾಯಾಲಯ ನಿಗದಿ ಮಾಡಿದ ಹಣವನ್ನು ಪರಿಹಾರವಾಗಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪಾಟೀಲ್ ವಿವರಿಸಿದರು. ಇದರ ಜತೆಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಮಸೂದೆ, ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಗೂ ಸದನ ಒಪ್ಪಿಗೆ ನೀಡಿದೆ.
ಕಾಯ್ದೆಯಲ್ಲಿ ಏನಿದೆ ?
ಈ ಕಾಯ್ದೆ ಪ್ರಕಾರ ವಕೀಲರ ಮೇಲೆ ಹಲ್ಲೆ ನಡೆಸುವುದನ್ನು ಜಾಮೀನುರಹಿತ ಪ್ರಕರಣ ಎಂದು ಪರಿಗಣನೆ. ಹಲ್ಲೆ ಆರೋಪ ಸಾಬೀತಾದರೆ ಆರೋಪಿಗೆ 6 ತಿಂಗಳಿಂದ 3 ವರ್ಷಗಳ ವರೆಗಿನ ಕಾರಾಗೃಹ ವಾಸ, 1 ಲಕ್ಷ ರೂ. ದಂಡ.ಅಪರಾಧ ಸಂದರ್ಭದಲ್ಲಿ ನ್ಯಾಯವಾದಿಯನ್ನು ಪೊಲೀಸರು ಬಂಧಿಸಿದರೆ 24 ಗಂಟೆಯೊಳಗಾಗಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಬಂಧನದ ವಿಚಾರ ತಿಳಿಸಬೇಕು. ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಕಡಿಮೆ ಇಲ್ಲದ ನ್ಯಾಯಾಲಯದ ಮೂಲಕ ವಿಚಾರಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ