ಬನಾರಸ್ ಸಿನಿಮಾ ಪ್ರಚಾರ; ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬನಾರಸ್ ಹೀರೋ
ಸಿನಿಮಾ ಟ್ರೈಲರ್, ಪೋಸ್ಟರ್, ಹಾಡುಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗಿದೆ
Team Udayavani, Oct 17, 2022, 11:23 AM IST
ಬನಾರಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಚಿತ್ರತಂಡ ತಮ್ಮದೇ ಆದ ಶೈಲಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ನಾಯಕ ಝೈದ್ ಖಾನ್, ನಟಿ ಸೋನಲ್ ಮೊಂತೆರೋ ಹಾಗೂ ಕಲಾವಿದರ ತಂಡ ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ ಮೂಲಕ ಚಿತ್ರದ ಕುರಿತ ಮಾಹಿತಿಗಳನ್ನು ಹಂಚಿಕೊಳ್ತಿದೆ.
ಇದೇ ಸಮಯದಲ್ಲಿ ಆಯಾ ಭಾಗಗಳಲ್ಲಿ ಸಿಗುವಂಥ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೂ ಭೇಟಿ ಕೊಟ್ಟು ಆಶೀರ್ವಾದ ಪಡೆಯುವ ಜೊತೆಗೆ ಸಿನಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ನಾಯಕಿ ಸೋನಲ್ ಹಾಗೂ ಸಾಂಪ್ರದಾಯಿಕ ಧಿರಿಸು ಧರಿಸಿದ ನಾಯಕ ನಟ ಝೈದ್ ಖಾನ್ ತಿರುಪತಿ ತಿರುಮಲೇಶ್ವರನ ದರ್ಶನ ಪಡೆದುಕೊಂಡಿದ್ದಾರೆ.
ತದ ನಂತರ ಝೈದ್ ಮತ್ತು ಸೋನಲ್ ನೆಲ್ಲೂರಿನ ಪ್ರಸಿದ್ಧ ದರ್ಗಾವೊಂದಕ್ಕೂ ಭೇಟಿ ನೀಡಿದ್ದಾರೆ. ಜಯತೀರ್ಥ ನಿರ್ದೇಶನದ ಬನಾರಸ್ ಈಗಾಗಲೇ ಒಂದಿಷ್ಟು ಅಭಿಮಾನಿ ಬಳಗವನ್ನ ಸಂಪಾದಿಸಿಕೊಂಡಿದೆ. ಟ್ರೈಲರ್, ಮೋಷನ್ ಪೋಸ್ಟರ್, ಹಾಡುಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗಿದೆ. ಪಂಚ ಭಾಷೆಗಳಲ್ಲೂ ತೆರೆಕಾಣುತ್ತಿರುವ ಕನ್ನಡ ಪ್ರಧಾನ ಬನಾರಸ್ ಚಿತ್ರದ ಮೇಲೆ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ, ನುರಿತ ಕಲಾವಿದರು, ತಾಂತ್ರಿಕ ವರ್ಗವನ್ನ ಒಟ್ಟುಗೂಡಿಸಿ , ತಿಲಕ್ ರಾಜ್ ಬಲ್ಲಾಳ್ ಅವರ ಅದ್ದೂರಿ ನಿರ್ಮಾಣದೊಂದಿಗೆ ತಯಾರದ ಬನಾರಸ್ ಇದೇ ನವೆಂಬರ್ 4 ರಂದು ದೇಶದಾದ್ಯಂತ ಬಿಡುಗಡೆಯಾಗಲಿದೆ.
ಚೊಚ್ಚಲ ಚಿತ್ರವಾದ್ರೂ ಈಗಾಗಲೇ ರಿಲೀಸ್ ಆದ ಝಲಕ್ ಗಳಲ್ಲೇ ಝೈದ್ ಮೋಡಿ ಮಾಡಿ, ಭರವಸೆಯನ್ನ ಹೆಚ್ಚಿಸಿಕೊಂಡಿದ್ದಾರೆ. ಈ ಮೂಲಕ ಸಿನಿರಂಗದಲ್ಲಿ ಗಟ್ಟಿಯಾಗಿ ನೆಲೆಯೂರುವ ನಿರೀಕ್ಷೆ ಹುಟ್ಟುಹಾಕಿರುವ ಝೈದ್ ಖಾನ್ ಈ ಪ್ರಚಾರ ಕಾರ್ಯಗಳೊಂದಿಗೆ ಪರಭಾಷಾ ಪ್ರೇಕ್ಷಕರ ವಲಯದಲ್ಲಿಯೂ ಬನಾರಸ್ ಚರ್ಚೆ ಹುಟ್ಟು ಹಾಕುವಂತೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ