ಗೋ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಎಂ.ಎಸ್. ಕಾಳಿಂಗರಾಜ್
Team Udayavani, Oct 15, 2021, 5:09 PM IST
ಸೊರಬ: ಸನಾತನ ಹಿಂದೂ ಸಂಸ್ಕೃತಿಯಲ್ಲಿ ಗೋವುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗಟ್ಟಿನಿಂದ ಜಾಗೃತರಾಗಬೇಕಿದೆ ಎಂದು ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಹೇಳಿದರು.
ತಾಲೂಕಿನ ಉದ್ರಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಗೋ ಪೂಜೆ ಹಾಗೂ ಗ್ರಾಮದಲ್ಲಿ ಗೋ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗೋವಿಗೆ ಭಾರತೀಯರು ಅತ್ಯಂತ ಪೂಜನೀಯ ಸ್ಥಾನ ನೀಡಲಾಗಿದ್ದು, ಮೂಕ್ಕೋಟಿ ದೇವತೆಗಳನ್ನು ಗೋ ಮಾತೆಯಲ್ಲಿ ಕಾಣುತ್ತೇವೆ. ಇಂತಹ ಗೋ ಮಾತೆಯ ರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕು. ಈ ಮೂಲಕ ಹಿಂದೂ ಧರ್ಮದ ರಕ್ಷಣೆಯೇ ನಮ್ಮ ಗುರಿಯಾಗಿದ್ದು, ಧರ್ಮದ ಅಸ್ತಿತ್ವ ಮತ್ತು ಹಿಂದೂಗಳ ಭಾವನೆಗಳನ್ನು ಉಳಿಸಿ, ಮುಂದಿನ ಪೀಳಿಗೆ ನೀಡಬೇಕಾದ ಮಹತ್ವದ ಹೊಣೆಯನ್ನು ಹೊರಬೇಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ದುಸ್ಥಿತಿ ಅನಾವರಣ: ಅಶ್ವತ್ಥನಾರಾಯಣ
ತಾಯಿಯ ಹಾಲನ್ನು ಮಗು ಒಂಬತ್ತು ತಿಂಗಳು ಮಾತ್ರ ಕುಡಿಯುತ್ತದೆ. ಆದರೆ, ಗೋ ಮಾತೆ ಮನುಷ್ಯನ ಜೀವಿತಾವಧಿಯ ವರೆಗೆ ಹಾಲನ್ನು ನೀಡುತ್ತಾಳೆ. ಆದ್ದರಿಂದ ಗೋವನ್ನು ಮಹಾತಾಯಿ ಎಂದು ಕರೆಯಬಹುದು. ದೇಶದ ಸಂಸ್ಕೃತಿಗೆ ಜಗತ್ತೇ ಗೌರವ ನೀಡುತ್ತಿದೆ. ಸಾವಿರಾರು ವರ್ಷಗಳ ಅನೇಕ ದಾಳಿಗಳನ್ನು ಎದುರಿಸಿದರೂ ಸಹ ಹಿಂದೂ ಧರ್ಮ ಉಳಿದಿದೆ ಎಂದರೆ, ದೇಶದ ಸಾಧು ಸಂತರ ಹಾಗೂ ಋಷಿಮುನಿಗಳ ಕೊಡುಗೆ ಸಾಕಷ್ಟಿದೆ ಎಂದರು.
ಆರಂಭದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳೊಂದಿಗೆ ಗೋ ಮಾತೆಯ ಮೆರವಣಿಗೆ ಮಾಡಲಾಯಿತು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಎಚ್.ಎಲ್. ಚಂದನ್, ನಗರ ಕಾರ್ಯದರ್ಶಿ ರವಿ ಗುಡಿಗಾರ್, ಬಜರಂಗದಳ ನಗರ ಸಂಚಾಲಕ ಶಶಿಕುಮಾರ್, ಉದ್ರಿ ಗ್ರಾಮದ ಕಾರ್ಯಕರ್ತರಾದ ಗಣೇಶ್ ಬಳೆಗಾರ, ಪವನ್, ಜಾನಕ, ಅಜಿತ್, ಕೆ.ಬಿ. ಚಂದ್ರಶೇಖರ್, ಮಾರುತಿ, ಬಿ.ಕೆ. ರವಿ, ಎಸ್.ಪಿ. ರಾಜೇಂದ್ರ, ರಮೇಶ್, ಭರತ್, ಕಿರಣ್, ವಿಜಯ್, ಅರುಣ್, ಎಸ್.ಕೆ. ಪವನ್, ಟಿ.ಬಿ. ಮಾರುತಿ, ಎಚ್.ಕೆ. ಶಶಿಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ