ಗೋಮಾಳಗಳ ರಕ್ಷಣೆ ಅತ್ಯಗತ್ಯ: ವಿಶ್ವಪ್ರಸನ್ನತೀರ್ಥ ಶ್ರೀಪಾದರು


Team Udayavani, Sep 30, 2021, 7:18 AM IST

ಗೋಮಾಳಗಳ ರಕ್ಷಣೆ ಅತ್ಯಗತ್ಯ: ವಿಶ್ವಪ್ರಸನ್ನತೀರ್ಥ ಶ್ರೀಪಾದರು

ಉಡುಪಿ: ಗ್ರಾಮ ಗ್ರಾಮ ಗಳಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಗೋವುಗಳಿಗಾಗಿ ಮೀಸಲಿಟ್ಟ ಗೋಮಾಳ ಭೂಮಿಯನ್ನು ಅವುಗಳಿ ಗಾಗಿಯೇ ಇರಿಸಿ ರಕ್ಷಿಸಬೇಕೆಂದು ಗೋ ಹಿತ ರಕ್ಷಣ ಒಕ್ಕೂಟ ಆಗ್ರಹಿಸಿದೆ.

ಉಡುಪಿ ಜಿಲ್ಲೆಯ 233 ಗ್ರಾಮಗಳಲ್ಲಿ ಸುಮಾರು 3,000 ಎಕ್ರೆ ಗೋಮಾಳ ಪ್ರದೇಶವಿದೆ. ಅವುಗಳಲ್ಲಿ ಕೆಲವು ಪರಾಭಾರೆಯಾಗಿವೆ. ಈ ಭೂಮಿಯ ಗಡಿಗುರುತು ಮಾಡಿ, ಗೋಮಾಳಗಳನ್ನು ಕೇವಲ ಗೋವುಗಳಿಗಾಗಿಯೇ ಮೀಸಲಿಡಬೇಕೆಂದು ಸರಕಾರವನ್ನು ಆಗ್ರಹಿಸ ಲಾಗಿದೆ ಎಂದು ಒಕ್ಕೂಟದ ಪರವಾಗಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಗೋವುಗಳಿಗೆ ಈಗ ಆಹಾರದ ಕೊರತೆ ಇದೆ. ಈಗ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಗೋಶಾಲೆ ನಿರ್ಮಾಣದ ಪ್ರಸ್ತಾವವಿದೆ. ಇದಕ್ಕೆ ಭೂಮಿಯ ಅವಶ್ಯವಿದೆ. ಗೋಶಾಲೆ, ಮೇವಿಗಾಗಿ ಗೋಮಾಳಗಳನ್ನು ರಕ್ಷಿಸಬೇಕಾಗಿದೆ ಎಂದರು.

ಸರಕಾರ ಒಂದು ಗೋವಿಗೆ 17.5 ರೂ. ದೈನಂದಿನ ಖರ್ಚು ಎಂದು ನಿಗದಿಪಡಿಸಿದೆ. ಇದು ಸಾಕೇ ಎಂದು ಪ್ರಶ್ನಿಸಿದಾಗ, ದೇಸೀ ಗೋ ತಳಿಗಳಿಗೆ ಸರಕಾರ ಈ ಮೊತ್ತವನ್ನು ನಿಗದಿಪಡಿಸಿದೆ. ಹಾಲಿಗಾಗಿ ದನವನ್ನು ಸಾಕಿದರೆ ಈ ಮೊತ್ತ ಸಾಕಾಗುವುದಿಲ್ಲ. ನಾವು ಗೋಶಾಲೆಯನ್ನು ಸಮಾಜದ ಸಹಕಾರದಿಂದ ನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:ಹಾನಗಲ್ ಉಪ ಚುನಾವಣೆ : ಮುಖಂಡರ ಜೊತೆ ಡಿಕೆಶಿ ಚರ್ಚೆ

ಒಕ್ಕೂಟದ ಸಂಚಾಲಕ ಗಣೇಶ ಕಿಣಿ ಬೆಳ್ವೆ, ಕಾರ್ಯದರ್ಶಿ ವಿಜಯಪ್ರಕಾಶ ಬೈಲಕೆರೆ, ಶ್ರೀನಿವಾಸ ಶೆಟ್ಟಿಗಾರ್‌ ಬಾಕೂìರು, ಡಾ| ಅಣ್ಣಯ್ಯ ಕುಲಾಲ್‌, ಸೂರ್ಯನಾರಾಯಣ ಗಾಣಿಗ ಮಟಪಾಡಿ, ಕೃಷ್ಣಾನಂದ ಚಾತ್ರ, ದೇವದಾಸ ಹೆಬ್ಟಾರ್‌ ಕಟ್ಟಿಂಗೇರಿ, ಭಾಸ್ಕರ ಶೆಟ್ಟಿ ನಾವುಂದ, ಶ್ರೀಧರ ಆಚಾರ್ಯ ಕುಮ್ರಗೋಡು, ಶಶಾಂಕ ಶಿವತ್ತಾಯ, ವಿಶ್ವನಾಥ ನಾಯ್ಕ ನಡೂರು, ಸುರೇಶ ಕೋಟೇಶ್ವರ, ಚಂದ್ರಶೇಖರ ಹೆಗ್ಡೆ ಶಾನಾಡಿ, ಪ್ರೀತಮಾ ಎಸ್‌. ರೈ ಬಸ್ರೂರು , ಶಂಕರ ಹೆಗ್ಡೆ ಜನ್ನಾಡಿ, ರಾಮ ಮಡಿವಾಳ ಕುಂಭಾಶಿ ಉಪಸ್ಥಿತರಿದ್ದರು.

ಹಟ್ಟಿಯಿಂದ ಗೋವುಗಳ ಕಳವು: ದೂರು
ನೀಡುವವರಿಗೆ ಕೋಮುವಾದಿ ಪಟ್ಟ !
ಗೋಕಳ್ಳತನದ ಕುರಿತು ಕೇಳಿದಾಗ, ಒಂದೆರಡು ಹಸುಗಳನ್ನು ಕಟ್ಟಿ ಬದುಕು ಸಾಗಿಸುವವರ ಗೋವುಗಳನ್ನು ಕಳವು ಮಾಡುತ್ತಿದ್ದಾರೆ. ಇದರ ಬಗ್ಗೆ ದೂರು ನೀಡಿದರೆ ಕೋಮುವಾದದ ಹಣೆಪಟ್ಟಿ ಕಟ್ಟುತ್ತಾರೆ. ಬಡವರ ಬದುಕಿಗೆ ತೊಂದರೆ ಕೊಟ್ಟಾಗ ಪ್ರತಿಭಟಿಸಿದರೆ ಈ ತೆರನಾಗಿ ಇನ್ನೊಂದು ರೂಪ ಕೊಡುತ್ತಿದ್ದಾರೆ ಎಂದು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ವಿಷಾದ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.