ಮನೆ ಹಕ್ಕು ಪತ್ರ ವಿತರಿಸದಿದ್ದರೆ ಪುರಸಭೆ ಎದುರು ಪ್ರತಿಭಟನೆ
Team Udayavani, Dec 10, 2020, 3:55 PM IST
ಧಾರವಾಡ: ಅಣ್ಣಿಗೇರಿಯಲ್ಲಿ ಬಡವರಿಗೆ ಒಂದು ತಿಂಗಳೊಳಗೆ ಆಶ್ರಯ ಮನೆ ಹಕ್ಕುಪತ್ರ ವಿತರಿಸದಿದ್ದರೆ ಪುರಸಭೆ ಎದುರು
ಪ್ರತಿಭಟಿಸುವುದಾಗಿ ನವಲಗುಂದ ಮಾಜಿ ಶಾಸಕ ಎನ್.ಹೆಚ್. ಕೋನರಡ್ಡಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವ ಅವರು, ಅಣ್ಣಿಗೇರಿ
ನಗರದಲ್ಲಿ ವಾಸಿಸಲು ಮನೆ ಇಲ್ಲದ ಸಾಕಷ್ಟು ಬಡವರು ನಾನು ಶಾಸಕನಿದ್ದಾಗ ನಿವೇಶನ ನೀಡಲು ಅರ್ಜಿ ಸಲ್ಲಿಸಿದ್ದರು. ಆಗ ಆಶ್ರಯ ಸಮಿತಿಯಲ್ಲಿ ನಿರ್ಧರಿಸಿ ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸರ್ವೇ ನಂ.198/1+2 ನೇದ್ದರ 18 ಎಕರೆ 26 ಗುಂಟೆ ಜಮೀನನ್ನು ಖರೀದಿಸಿ ನೂತನ ಪದ್ಧತಿಯಲ್ಲಿ ಲೇಜೌಟ್ ನಿರ್ಮಿಸಿ ಕೆಜಿಪಿ ಉತಾರ ಅನುಮೋದನೆ ತೆಗೆದುಕೊಂಡು ಎಲ್ಲ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸಿದ ನಂತರ ಉತಾರದಲ್ಲಿ ಫಲಾನುಭವಿಗಳ ಹೆಸರು ಬರುವಂತೆ ನಿರ್ಧರಿಸಿ ನನಗಿದ್ದ ಶಾಸನಬದ್ಧ ಅ ಧಿಕಾರ ಮೇಲೆ 650 ಫಲಾನುಭವಿಗಳನ್ನು ಆಶ್ರಯ ಸಮಿತಿಯಲ್ಲಿ ಆಯ್ಕೆ ಮಾಡಿದ್ದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಈಗ ತಾತ! ಆಕಾಶ್, ಶ್ಲೋಕಾ ದಂಪತಿಗೆ ಗಂಡು ಮಗು
ಆದರೀಗ ಅಣ್ಣಿಗೇರಿ ಪುರಸಭೆ ವತಿಯಿಂದ ತಿಳಿವಳಿಕೆ ನೋಟಿಸ್ನಲ್ಲಿ ಈಗಿನ ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಿದ
ಫಲಾನುಭವಿಗಳನ್ನು ಅನರ್ಹರೆಂದು ಗುರುತಿಸಲಾಗಿದ್ದು, ಫಲಾನುಭವಿಗಳನ್ನು ರದ್ದುಪಡಿಸಿ ಪುನಃ ಫಲಾನುಭವಿಗಳನ್ನು
ಆಯ್ಕೆ ಮಾಡಲು ಸಭೆ ನಿರ್ಧರಿಸಿದೆ ಎಂದು 650 ಫಲಾನುಭವಿಗಳಿಗೆ ನೋಟಿಸ್ ನೀಡಿ 7 ದಿನಗಳೊಳಗೆ ಸಂಬಂಧಿಸಿದ ಇಲಾಖೆಯಿಂದ ದೃಢೀಕರಣ ಪತ್ರ ಹಾಜರಪಡಿಸಲು ನೋಟಿಸ್ನಲ್ಲಿ ತಿಳಿಸಲಾಗಿದೆ. ಒಮ್ಮೆ ಆಶ್ರಯ ಸಮಿತಿಯಲ್ಲಿ ಆಯ್ಕೆಯಾದ
ಫಲಾನುಭವಿಗಳನ್ನು ರದ್ದುಪಡಿಸಲು ಬರಲ್ಲ. ಆ ರೀತಿ ಕ್ರಮ ಕೈಗೊಂಡರೆ ಈಗಾಗಲೇ ಹಂಚಿಕೆಯಾದ ಬಡ ಜನತೆಗೆ
ಅನ್ಯಾಯವಾಗುತ್ತದೆ. ಕಾರಣ ನೋಟಿಸ್ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಅಣ್ಣಿಗೇರಿಯಲ್ಲಿ ಬಂಗಾರಪ್ಪ ನಗರ
ನಿರ್ಮಾಣವಾದ ನಂತರ ಅಣ್ಣಿಗೇರಿ ಪುರಸಭೆಗೆ ಆಶ್ರಯ ಜಾಗವೇ ಇರಲಿಲ್ಲ. ಇದಲ್ಲದೇ ಆದಿವಾಸಿ ಜನಾಂಗದವರ ಚಿಕ್ಕಲಗಾರ
ಹಾಗೂ ಗೊಂದಳೆ ಸಮಾಜದ ಬಹುದಿನದ ಸಮಸ್ಯೆ ಬಗೆಹರಿಸಲು ನವಲಗುಂದ ರಸ್ತೆಯ ರೇಲ್ವೆ ಗೇಟ್ ಹತ್ತಿರ ಜನಾಬ ಮಾಬೂಸಾಬ ಮಹ್ಮದಸಾಬ ಗಾಡಗೋಳಿ ಇವರ ಸರ್ವೇ ನಂ.: 1070/4 ಕ್ಷೇತ್ರ 4 ಎಕರೆ ಜಮೀನು ಖರೀದಿಸಲು ಆಶ್ರಯ ಸಮಿತಿಯಲ್ಲಿ ನಿರ್ಧರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಇನ್ನು ಬಾಕಿ ಉಳಿದ ಫಲಾನುಭವಿಗಳಿಗೆ ಹೆಚ್ಚಿನ ಜಮೀನು ಖರೀದಿಸಿ ನಿವೇಶ ಹಂಚಿಕೆ ಮಾಡಲು ಮಜ್ಜಿಗುಡ್ಡ ರಸ್ತೆಯಲ್ಲಿ
ನಾಗುಬಾಯಿ ವಿನಾಯಕ ಗಳಗಿ ಇವರ ಸರ್ವೇ ನಂ.: 286/1 ಕ್ಷೇತ್ರ 15 ಎಕರೆ 37 ಗುಂಟೆ ಜಮೀನು ಹಾಗೂ ಬಾಯಕ್ಕ ಚಂದ್ರಣ್ಣ
ಹುಬ್ಬಳ್ಳಿ ಅವರ ಕುಟುಂಬಕ್ಕೆ ಸಂಬಂಧಿಸಿದ 10 ಎಕರೆ ಜಮೀನು ಖರೀದಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ರೀತಿ ಮನೆ ಇಲ್ಲದ ಎಲ್ಲ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕಿದೆ. ನಾನೇ ಶಾಸಕನಿದ್ದ ಅವಧಿಯಲ್ಲಿ ಹಕ್ಕುಪತ್ರ ನೀಡಲು ನಿರ್ಧರಿಸಿದ್ದೆ.
ಆದರೆ 2018 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಹಕ್ಕುಪತ್ರ ನೀಡಲು
ಸಾಧ್ಯವಾಗಲಿಲ್ಲ. ಈಗಾಗಲೇ ಆಯ್ಕೆಯಾದ ಫಲಾನುಭವಿಗಳಿಗೆ ಒಂದು ತಿಂಗಳೊಳಗೆ ಹಕ್ಕುಪತ್ರ ವಿತರಿಸಬೇಕು. ಇಲ್ಲವಾದಲ್ಲಿ
ಒಂದು ತಿಂಗಳ ನಂತರ ಅಣ್ಣಿಗೇರಿ ಪುರಸಭೆ ಎದುರುಗಡೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ