ಜನವಸತಿಯಿಂದ ತ್ಯಾಜ್ಯಘಟಕ ದೂರವಿರಿಸಿ : ಬೆಳ್ನಿ ಗ್ರಾಮಸ್ಥರ ಹಠಾತ್‌ ಪ್ರತಿಭಟನೆ


Team Udayavani, Jan 12, 2022, 8:30 PM IST

janavasati

ಭಟ್ಕಳ: ಬೆಳ್ನಿಯಲ್ಲಿ ಮಾವಿನಕುರ್ವೆ ಗ್ರಾಮ ಪಂಚಾಯತ್‌ನ ಘನ ತ್ಯಾಜ್ಯ ಘಟಕದ ಕಾಮಗಾರಿಗೆ ಪೊಲೀಸ್‌ ಬಲದೊಂದಿಗೆ ಬಂದಿದ್ದ ಗುತ್ತಿಗೆದಾರರನ್ನು ಊರಿನ ನಾಗರೀಕರು ಪ್ರತಿಭಟನೆ ನಡೆಸಿ ವಾಪಸ್‌ ಕಳುಹಿಸಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆಯಿತು.

ಮಾವಿನಕುರ್ವೆ ಗ್ರಾಪಂಗೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಳ್ನಿಯಲ್ಲಿರುವ ಜನ ವಸತಿ ಪ್ರದೇಶದಲ್ಲಿ ನಿವೇಶನ ಮಂಜೂರು ಮಾಡಲಾಗಿತ್ತು. ಈ ಹಿಂದೆಯೇ ಜನರು ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ಜನ ವಸತಿ ಪ್ರದೇಶದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡುವುದರಿಂದ ತೀವ್ರ ತೊಂದರೆಯಾಗಲಿದೆ, ಕುಡಿಯುವ ನೀರಿನ ಬಾವಿಗಳು ಹಾಳಾಗಲಿವೆ ಎಂದು ಮನವಿ ಸಲ್ಲಿಸಲಾಗಿತ್ತು.

ಆದರೂ ಸಹ ಮಾವಿನಕುರ್ವೆ ಗ್ರಾಪಂನಿಂದ ಬೆಳ್ನಿಯ ಸರ್ವೇ ನಂ. 111ರಲ್ಲಿ ಘನತ್ಯಾಜ್ಯ ಘಟಕ ನಿರ್ಮಿಸಲು ಉದ್ದೇಶಿಸಿ ಕಾಮಗಾರಿ ಆರಂಭಕ್ಕೆ ಪೊಲೀಸ್‌ ನೆರವಿನಿಂದ ಬಂದಾಗ ಜನರು ಪ್ರತಿಭಟಿಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಸಹಾಯಕ ಆಯುಕ್ತರು ಪರಿಶೀಲಿಸುವ ಭರವಸೆ ನೀಡಿದ್ದರಿಂದ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು. ಪಂಚಾಯತ್‌ ಅಧ್ಯಕ್ಷರು, ಸದಸ್ಯರ ಹಾಗೂ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖಂಡ ವಿಠಲ್‌ ನಾಯ್ಕ, ಬೆಳಿ°ಯಲ್ಲಿ ಕಸ ವಿಲೇವಾರಿ ಘಟಕ ನಡೆಸುವುದಕ್ಕೆ ಹಿಂದಿನಿಂದಲೂ
ಗ್ರಾಮಸ್ಥರ ವಿರೋಧವಿದೆ. ಈ ಬಗ್ಗೆ ಗ್ರಾಮಸ್ಥರು ಮನವಿ ಕೂಡ ಸಲ್ಲಿಸಿದ್ದಾರೆ. ಘನತ್ಯಾಜ್ಯ ಘಟಕವನ್ನು ಬೆಳ್ನಿಯಲ್ಲಿ ಮಾಡುವುದಕ್ಕಿಂತ ಯಾವುದಾದರೂ ಸೂಕ್ತ ಸ್ಥಳದಲ್ಲಿ ಪಂಚಾಯತ್‌ನವರು ಮಾಡಲು ಮುಂದಾಗಬೇಕು. ಇಂದು ತಾತ್ಕಾಲಿಕವಾಗಿ ಕಾಮಗಾರಿ ಸ್ಥಗಿತಗೊಂಡಿದ್ದು, ಆದಷ್ಟು ಶೀಘ್ರದಲ್ಲಿ ಬೇರೆಡೆಗೆ ಘನತ್ಯಾಜ್ಯ ಘಟಕವನ್ನು ಸ್ಥಳಾಂತರಿಸಬೇಕು.
ಮತ್ತೆ ಇಲ್ಲಿ ಕಾಮಗಾರಿ ನಡೆಸಬಾರದು ಎಂದು ಆಗ್ರಹಿಸಿದರು.

ಪ್ರತಿಭಟನಾನಿರತ ಸ್ಥಳಕ್ಕೆ ಆಗಮಿಸಿ ಮಾವಿನಕುರ್ವೆ ಗ್ರಾಪಂ ಅಧ್ಯಕ್ಷೆ ಸುಮಿತ್ರಾ ಗೊಂಡ, ಬೆಳ್ನಿಯಲ್ಲಿ ಸರಕಾರದಿಂದ ಘನತ್ಯಾಜ್ಯ ಘಟಕಕ್ಕೆ ಹಣ ಮಂಜೂರಿಯಾಗಿದೆ. ಇಲ್ಲಿ ಒಣಕಸ ಹೊರತುಪಡಿಸಿ ಯಾವುದೇ ರೀತಿಯ ಹಸಿಕಸ ಸಂಗ್ರಹಿಸಿ ಹಾಕುವುದಿಲ್ಲ. ಘನತ್ಯಾಜ್ಯ ವಿಲೇವಾರಿ ಘಟಕದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಸಮಜಾಯಿಸಿದರು. ಸಾರ್ವಜನಿಕರು ಬೆಳ್ನಿಯಲ್ಲಿ ಯಾವುದೇ ಕಾರಣಕ್ಕೂ ತ್ಯಾಜ್ಯವಿಲೇವಾರಿ ಘಟಕ ನಿರ್ಮಿಸುವುದು ಬೇಡ. ಒಂದೊಮ್ಮೆ ಜನಾಭಿಪ್ರಾಯಕ್ಕೆ ವಿರುದ್ಧವಾಗಿ ಕಾಮಗಾರಿ ಆರಂಭಿಸಿದರೆ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.