ಕೆಲಸ ಮಾಡಿದ್ರೂ ವೇತನ ನೀಡಿಲ್ಲ : ಪುರಸಭೆ ಮುಂದೆ ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ
Team Udayavani, Feb 12, 2022, 2:46 PM IST
ಬಾಗೇಪಲ್ಲಿ: ಒಂದು ರಜೆಯನ್ನೂ ನೀಡದೆ, ತಿಂಗಳ ಪೂರ್ತಿ ಕೆಲಸ ಮಾಡಿರುವ ವೇತನ, ಪಿಎಫ್ ಹಣ ನೀಡುವಂತೆ ಒತ್ತಾಯಿಸಿ ಗುತ್ತಿಗೆ ಆಧಾರದ ಪೌರ ಕಾರ್ಮಿಕರು ಪುರಸಭೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಾಧಿಕಾರಿ ಕೆ.ಮಧುಕರ್ಗೆ ಮನವಿ ಸಲ್ಲಿಸಿದರು.
ಪಟ್ಟಣದ ಪುರಸಭೆ ಕಚೇರಿ ಮುಂಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮೂಲಕ ಆಯ್ಕೆ ಆಗಿರುವ ಪೌರ ಕಾರ್ಮಿಕರು, ಕಸ ಸಾಗಾಣಿಕೆ ವಾಹನ ಚಾಲಕರು ತಮ್ಮ ವೇತನ, ಪಿಎಫ್ ಹಣ ನೀಡುವಂತೆ ಒತ್ತಾಯಿಸಿದರು.
ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ಗಳಿದ್ದು, ತಲಾ ಒಂದು ವಾರ್ಡ್ನ ಸ್ವತ್ಛತೆಗೆ ನಾಲ್ವರು ಕಾರ್ಮಿಕರ ಅಗತ್ಯ ಇದೆ. ಆದರೆ, ಗುತ್ತಿಗೆದಾರ ಒಬ್ಬ ಪೌರ ಕಾರ್ಮಿಕರಿಂದಲೇ ತಿಂಗಳ ಪೂರ್ತಿ ಕೆಲಸ ಮಾಡಿಸಿಕೊಂಡು, ಕಾರ್ಮಿಕರಿಗೆ ಸಕಾಲಕ್ಕೆ ವೇತನ, ಪಿಎಫ್ ಹಣ ನೀಡದೆ ವಂಚಿಸುತ್ತಿದ್ದಾರೆ. ವಿಶೇಷ ಹಬ್ಬ ಅಥವಾ ಅನಾರೋಗ್ಯಕ್ಕೆ ಗುರಿಯಾಗಿ ರಜೆ ಹಾಕಿದರೆ ವೇತನ ಕಡಿತಗೊಳಿಸುತ್ತಿದ್ದಾರೆ ಎಂದು ದೂರಿದರು.
ತಿಂಗಳ ಪೂರ್ತಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಒಂದು ದಿನವೂ ಸರ್ಕಾರಿ ರಜೆ ನೀಡುತ್ತಿಲ್ಲ. ಅನಿವಾರ್ಯ ಸಮಸ್ಯೆಗಳಿಂದ ರಜೆ ಹಾಕಿದರೆ ವೇತನ ನೀಡುವುದಿಲ್ಲ. ಒಂದು ತಿಂಗಳಲ್ಲಿ
ಕನಿಷ್ಠ ನಾಲ್ಕು ದಿನ ಸರ್ಕಾರಿ ರಜೆ ನೀಡಬೇಕು, ಒಂದು ವಾರ್ಡ್ನ ಸ್ವತ್ಛತೆಗೆ ನಾಲ್ವರು ಪೌರ ಕಾರ್ಮಿಕರನ್ನು ಅಯೋಜಿಸಿ ಹಲವು ವರ್ಷಗಳಿಂದ ಬಾಕಿ ಇಟ್ಟುಕೊಂಡಿರುವ ಪಿಎಫ್ ಹಣ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು, ಬಾಕಿ ಇರುವ ತಿಂಗಳ ವೇತನವನ್ನು ಬಿಡುಗಡೆ ಮಾಡಬೇಕೆಂದು ಪ್ರತಿಭಟನೆಕಾರರು ಅಧಿಕಾರಿಗಳನ್ನು ಒತ್ತಾಯಿಸಿದರು.
ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಎ.ನಂಜುಂಡ, ಪರಿಸರ ಅಭಿಯಂತರೆ ನಮಸ್ಕೃತ, ಸದಸ್ಯರಾದ ಸುಜಾತಾ ನರಸಿಂಹನಾಯ್ಡು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕಾರ್ಮಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ ನಂತರ ಪೌರ ಕಾರ್ಮಿಕರು ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?