ಶೌಚಗೃಹ ನಿರ್ಮಾಣ ವಿಚಾರ: ಸಭೆಯಲ್ಲಿ ಧರಣಿ ನಡೆಸಿದ ಜಿಪಂ ಸದಸ್ಯರು
Team Udayavani, Feb 12, 2021, 2:23 PM IST
ರಾಯಚೂರು: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಶೌಚಗೃಹ ನಿರ್ಮಾಣಕ್ಕೆ ಹಣ ಮಂಜೂರಾಗಿ ನಾಲ್ಕು ವರ್ಷ ಕಳೆದರೂ ಯಾಕೆ ಶೌಚಗೃಹ ನಿರ್ಮಿಸಿಲ್ಲ. ಜನರಿಗೆ ನಾವು ಹೇಗೆ ಮುಖ ತೋರಿಸಬೇಕು ಎಂದು ಆರೋಪಿಸಿ ಜಿಪಂ ಕೆಡಿಪಿ ಸಭೆಯಲ್ಲಿ ಸದಸ್ಯರಿಬ್ಬರು ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ನಡೆಯಿತು.
ಇಷ್ಟು ವರ್ಷ ಕೆಲಸ ಮಾಡದೆ ಈಗ ಗ್ರಾಪಂಗೆ ವಹಿಸಲು ಮುಂದಾಗಿರುವುದಕ್ಕೆ ಸದಸ್ಯರಾದ ಕೇಶವರೆಡ್ಡಿ, ಶಿವಜ್ಯೋತಿ ಆಕ್ರೋಶ ವ್ಯಕ್ತಪಡಿಸಿದರು. ಈ ನಡುವೆ ಅಧಿಕಾರಿಗಳ ಬೇಜವಾಬ್ದಾರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಕೂಡ ಗರಂ ಆದರು.
ಮಹಿಳಾ ಇಲಾಖೆ ಉಪ ನಿರ್ದೇಶಕ ವೀರಣಗೌಡ ಅವರನ್ನು ತರಾಟೆಗೆ ತೆಗೆದುಕೊಂಡು, 120 ಅಂಗನವಾಡಿ ಕೇಂದ್ರಗಳಿಗೆ ಶೌಚಗೃಹ ನಿರ್ಮಾಣಕ್ಕೆ ಹಣ ಬಿಡುಗಡೆ ಆಗಿದೆ. ಕಾಮಗಾರಿ ಮಾಡಬೇಕಿದ್ದ ಕ್ಯಾಶುಟಿಕ್ ಏಜೆನ್ಸಿ ಬೇಜವಾಬ್ದಾರಿ ವಹಿಸಿದ್ದಕ್ಕೆ ಸದಸ್ಯರು ಕೋಪಗೊಂಡಿದ್ದಾರೆ. 2016-17 ನೇ ಸಾಲಿನಲ್ಲಿ ಅನುದಾನ ಬಿಡುಗಡೆ ಆಗಿದ್ದು, ನಾಲ್ಕು ವರ್ಷದಿಂದ ಖಜಾನೆಯಲ್ಲಿಯೇ ಅನುದಾನ ಕೊಳೆಯುತ್ತಿದೆ. ನಿಮ್ಮ ವಿರುದ್ಧ ಯಾಕೆ ಕ್ರಮ ಜರುಗಿಸಬಾರದು ಎಂದರು. ಕೊನೆಗೆ ಸಿಇಒ ಸದಸ್ಯರ ಮನವೊಲಿಸಿ ಸಭೆ ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ