ಪಿಎಸ್ಐ ಅಕ್ರಮ ಪ್ರಕರಣ: ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ
Team Udayavani, May 7, 2022, 1:07 AM IST
ಕಲಬುರಗಿ: ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಪಿಎಸ್ಐ ಅಕ್ರಮ ಪ್ರಕರಣದ ತ್ವರಿತ ನ್ಯಾಯ ವಿಲೇವಾರಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ವಹಿಸಲು ಶೀಘ್ರವೇ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣವನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಸಿಐಡಿ ಅಧಿಕಾರಿಗಳ ಮೇಲೆ ಯಾವುದೇ ಒತ್ತಡ ಹಾಕಿಲ್ಲ. ಯಾರನ್ನೂ ಶಿಕ್ಷೆಯಿಂದ ತಪ್ಪಿಸುವ ಹರಕತ್ತು ಸರಕಾರಕ್ಕಿಲ್ಲ. ಆದರೂ ವಿರೋಧ ಪಕ್ಷಗಳು ಆರೋಪ ಮಾಡುವುದು ಸರಿಯಲ್ಲ ಎಂದರು.
ಗೂಂಡಾ ಕಾಯ್ದೆ?
ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಹಲವು ಕಾಯ್ದೆಗಳ ತಿದ್ದುಪಡಿ ಮಾಡಲು ಉನ್ನತ ಅಧಿಕಾರಿಗಳ ತಂಡದ ಜತೆ ಸಮಾಲೋಚನೆ ನಡೆದಿದೆ. ಗೂಂಡಾ ಕಾಯ್ದೆ ಅಡಿಯಲ್ಲೂ ಶಿಕ್ಷೆ ಪ್ರಮಾಣ ನಿಗದಿಗೆ ಮುಂದಾಲೋಚನೆ ನಡೆದಿದೆ ಎಂದು ತಿಳಿಸಿದರು.
ಸರಕಾರ ಬಿದ್ದರೂ ಪರವಾಗಿಲ್ಲ
ರಾಜ್ಯ ಸರಕಾರ ಬಿದ್ದು ಹೋದರೂ ಪರವಾಗಿಲ್ಲ. ನಮ್ಮ ಸರಕಾರದಲ್ಲಿ ಪಿಎಸ್ಐ ಅಕ್ರಮದ ಕಿಂಗ್ಪಿನ್ ಯಾರು ಅಂತಾ ಬಯಲು ಮಾಡಿ ಎಂದು ಮೊದಲು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ ಆರಗ, ಬರೀ ಹಿಟ್ ಆ್ಯಂಡ್ ರನ್ ಮಾಡಬಾರದು. ಕಿಂಗ್ಪಿನ್ ಯಾರು ಎಂದು ಹೇಳಿ. ದಾಖಲೆಗಳಿದ್ದರೆ ನಮಗೆ ಕೊಡಿ, ನಾವು ತನಿಖೆ ನಡೆಸುತ್ತೇವೆ. ಇದರಿಂದ ಸರಕಾರ ಬಿದ್ದರೂ ಪರವಾಗಿಲ್ಲ. ಯಾರೇ ಆರೋಪಿಗಳಿದ್ದರೂ ಕ್ರಮಕ್ಕೆ ಸಿದ್ಧ ಎಂದರು.
ತನಿಖೆಗೆ ಬೆನ್ನು ತೋರಿದ ಪ್ರಿಯಾಂಕ್!
ಮಾಜಿ ಸಚಿವರೂ ಆಗಿದ್ದ ಪ್ರಿಯಾಂಕ್ ಖರ್ಗೆ ತನಿಖೆಗೆ ಬೆನ್ನು ತೋರಿಸಿ ಓಡಿದ್ದಾರೆ. ಅವರ ಇಬ್ಬರು ಆಪ್ತರೇ ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ಪಿನ್. ಅವರನ್ನು ತಮ್ಮ ಪಕ್ಷದಲ್ಲಿಯೇ ಇಟ್ಟುಕೊಂಡು ನಮ್ಮ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ನಿಮ್ಮ ಬಳಿಯಲ್ಲಿ ಅಕ್ರಮ ಸಾಬೀತು ಮಾಡುವ ದಾಖಲೆಗಳು ಇದ್ದರೆ ಸರಕಾರಕ್ಕೆ ಕೊಡಿ. ಅದರಂತೆಯೇ ತನಿಖೆ ಮಾಡಿಸೋಣ. ಅದರೊಂದಿಗೆ ತನಿಖೆಗೆ ಸಹಕಾರ ಕೊಡಿ. ಆದು ಬಿಟ್ಟು ಸುಖಾ ಸುಮ್ಮನೆ ಬಿಜೆಪಿ ವಿರುದ್ಧ, ಸರಕಾರದ ವಿರುದ್ಧ ಆರೋಪ ಮಾಡಿ ಕಾಲಹರಣ ಮಾಡುವುದರಿಂದ ಏನೂ ಪ್ರಯೋಜನವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ