PSI ಹಗರಣ: ಕುಮಾರಸ್ವಾಮಿ, ಅಶ್ವತ್ಥನಾರಾಯಣ ಪರ ವಕೀಲರು ಹಾಜರು
Team Udayavani, Dec 27, 2023, 10:50 PM IST
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮಾಹಿತಿ ಅಥವಾ ಸಾಕ್ಷ್ಯಗಳಿದ್ದರೆ ಸಲ್ಲಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ| ಅಶ್ವತ್ಥನಾರಾಯಣ ಅವರ ಪರ ವಕೀಲರು ನ್ಯಾ| ಬಿ. ವೀರಪ್ಪ ನೇತೃತ್ವದ ವಿಚಾರಣ ಆಯೋಗದ ಮುಂದೆ ಬುಧವಾರ ಹಾಜರಾಗಿ ವಕಾಲತ್ತು ಹಾಕಿದರು.
ತಮ್ಮ ಕಕ್ಷಿದಾರರಿಗೆ ನೀಡಲಾಗಿರುವ ಸಮನ್ಸ್ಗೆ ಉತ್ತರಿಸಲು ಕಾಲವಕಾಶ ಬೇಕು ಎಂದು ಕೋರಿದರು. ಅದಕ್ಕೊಪ್ಪಿ, ನಿಮ್ಮ ಬಳಿ ಸಾಕ್ಷಿ-ದಾಖಲೆ ಗಳೇನಾದರೂ ಇದ್ದರೆ ಅದನ್ನು ಮುಂದಿನ ವಿಚಾರಣೆಯಲ್ಲಿ ಆಯೋ ಗಕ್ಕೆ ಸಲ್ಲಿಸಬಹುದು ಎಂದು ಸೂಚಿಸಿದ ನ್ಯಾ| ಬಿ. ವೀರಪ್ಪ ವಿಚಾರಣೆಯನ್ನು ಜ. 3ಕ್ಕೆ ಮುಂದೂಡಿದರು.
ಯಾರನ್ನೂ ವಿಚಾರಿಸಬಹುದು: ಪರಮೇಶ್ವರ್
ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ಹೊಣೆಯನ್ನು ನ್ಯಾ| ಬಿ. ವೀರಪ್ಪ ನೇತೃತ್ವದ ವಿಚಾರಣ ಆಯೋಗಕ್ಕೆ ಒಪ್ಪಿಸಲಾಗಿದೆ. ಅವರು ಯಾರನ್ನು ಬೇಕಾದರೂ ಕರೆಸಿ ವಿಚಾರಣೆ ಮಾಡಬಹುದು. ಅವರು ಎಲ್ಲ ಆಯಾಮ ಗಳಿಂದಲೂ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುತ್ತಾರೆ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಅವರಿಗೆ ಅನ್ಯಾಯ ಆಗಬಾರದು ಎಂಬುದು ನಮ್ಮ ಉದ್ದೇಶ. ಕೆಸೆಟ್ ಪರೀಕ್ಷೆ ಮೂಲ ಪರೀಕ್ಷಾ ಕೇಂದ್ರಗಳ ಬದಲಿಗೆ ಸುಪ್ರೀಂಕೋರ್ಟ್ ಆದೇಶದ ಮೇರೆಗೆ 54 ಸಾವಿರ ಅಭ್ಯರ್ಥಿಗಳು ಇರುವುದರಿಂದ ಪಾರದರ್ಶಕವಾಗಿರಲು ಬೆಂಗಳೂರಿನಲ್ಲಿಯೇ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕಲಬುರಗಿ, ವಿಜಯಪುರ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್