ಏ.10ರೊಳಗೆ ಪಿಯು ಮೌಲ್ಯಮಾಪನ ಪೂರ್ಣ


Team Udayavani, Mar 28, 2019, 7:22 AM IST

1-ssd

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಏ.10ರೊಳಗೆ ಪ್ರಕ್ರಿಯೆ ಪೂರ್ಣಗೊಂಡು, ಏಪ್ರಿಲ್‌ ಅಂತ್ಯಕ್ಕೆ ಫ‌ಲಿತಾಂಶ ನೀಡಲಾಗುತ್ತದೆ ಎಂದು ಪಿಯು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫ‌ರ್‌ ತಿಳಿಸಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಮಂಗಳವಾರ ಬೆಳಗ್ಗೆ ಏಕಕಾಲದಲ್ಲಿ ಆನ್‌ಲೈನ್‌ ಮೂಲಕ ಅಂಕ ಅಪ್‌ಲೋಡ್‌ಗೆ ಲಿಂಕ್‌ ಓಪನ್‌ಮಾಡಿರುವುದರಿಂದ ನೆಟ್‌ವರ್ಕ್‌ ಸಮಸ್ಯೆಯಾಗಿತ್ತು. ಮಾಧ್ಯಾಹ್ನದೊಳಗೆ ಆ ರೀತಿಯ ಎಲ್ಲ ಸಮಸ್ಯೆಯನ್ನು ಬಗೆಹರಿಸಿದ್ದೆವು. ಹೀಗಾಗಿ ಸರ್ವರ್‌ ಸಂಬಂಧಿಸಿದ ಯಾವುದೇ ಸಮಸ್ಯೆ ಇಲ್ಲ. ಮೌಲ್ಯಮಾಪಕರಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ ಎಂದು ವಿವರ ನೀಡಿದರು. ಮೌಲ್ಯಮಾಪನ ಪ್ರಕ್ರಿಯೆಗೆ ಉಪನ್ಯಾಸಕರು ನಿಯಮಿತವಾಗಿ ಬರುತ್ತಿದ್ದಾರೆ. ಏ.10ರೊಳಗೆ ಸಂಪೂರ್ಣ ಪ್ರಕ್ರಿಯೆ ಮುಗಿಸಲಿದ್ದೇವೆ. ಏಪ್ರಿಲ್‌ ಅಂತ್ಯದೊಳಗೆ ಫ‌ಲಿತಾಂಶ ನೀಡಲಿದ್ದೇವೆ ಎಂದರು.

25 ಸಾವಿರ ವಿದ್ಯಾರ್ಥಿಗಳು ಗೈರು
ಬುಧವಾರ ನಡೆದ ದ್ವಿತೀಯ ಭಾಷೆ ಇಂಗ್ಲಿಷ್‌ ಪರೀಕ್ಷೆಗೆ 8,00,640 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 7,74,803 ವಿದ್ಯಾರ್ಥಿಗಳು ಹಾಜರಾಗಿದ್ದು, 25,837 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷಾ ಅಕ್ರಮದಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ಒರ್ವ ವಿದ್ಯಾರ್ಥಿಯನ್ನು ಡಿಬಾರ್‌ ಮಾಡಲಾಗಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಫ‌ಲಿತಾಂಶ ಸರಿಪಡಿಸಲು ಆಗ್ರಹ
ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಫ‌ಲಿತಾಂಶದಲ್ಲಿ ಸಾಕಷ್ಟು ಗೊಂದಲವಿದೆ. ಆದಷ್ಟು ಬೇಗ ಸರಿಪಡಿಸಿ ಎಂದು ಕೆಲವು ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕರಾಗಲು ಶಿಕ್ಷಕರ ಅರ್ಹತಾ ಪರೀಕ್ಷೆಗೆ(ಟಿಇಟಿ)
ಕಡ್ಡಾಯವಾಗಿದೆ. ಇತ್ತೀಚೆಗೆ ನಡೆಸಿದ ಟಿಇಟಿಯಲ್ಲಿ ಸುಮಾರು 60 ಸಾವಿರ ಅಭ್ಯರ್ಥಿ ಪರೀಕ್ಷೆ ಬರೆದಿದ್ದರು.

ಕೇಂದ್ರೀಕೃತ ದಾಖಲಾತಿ ಘಟಕವು ಪರೀಕ್ಷೆ ನಡೆಸಿ, ಫ‌ಲಿತಾಂಶ ಪ್ರಕಟಿಸಿತ್ತು. ಆದರೆ, ಫ‌ಲಿತಾಂಶದಲ್ಲಿ ಸಾಕಷ್ಟು ಗೊಂದಲವಿದೆ ಎಂದು ಕೆಲವು ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ಪತ್ರಿಕೆ-2ರ ಕೆಲವೊಂದು ಪ್ರಶ್ನೆಗಳು ಗೊಂದಲ ಮಯವಾಗಿದ್ದು, ಸರಿ ಉತ್ತರವನ್ನು ತಪ್ಪು ಎಂದು ನಮೂದಿಸಿದ್ದಾರೆ. ಪುಸ್ತಕದಲ್ಲಿ ಇರುವ ಉತ್ತರವನ್ನೇ ಬರೆದಿದ್ದರೂ ಕೇಂದ್ರೀಕೃತ ದಾಖಲಾತಿ ಘಟಕದಿಂದ ತಪ್ಪು ಹೇಳುತ್ತಿದ್ದಾರೆ. ಇದರಿಂದಾಗಿ ಒಂದೆರೆಡು ಅಂಕದಲ್ಲಿ ನೂರಾರು ವಿದ್ಯಾರ್ಥಿಗಳು ಭವಿಷ್ಯವನ್ನೇ ಕಳೆದುಕೊಳ್ಳುತ್ತಿದ್ದಾರೆ.

ಹೀಗಾಗಿ ಫ‌ಲಿತಾಂಶವನ್ನು ಪುನರ್‌ ಪರಿಶೀಲಿಸಬೇಕು ಎಂದು ಹಲವು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. ಸಮಸ್ಯೆ ಸರಿಪಡಿಸಲು ಕೆಲವರು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು
ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.