ಎಳೆಯ ಮನಸುಗಳಲ್ಲಿ ಪರೀಕ್ಷಾ ಆತಂಕ; ಗೊಂದಲದ ಗೂಡಾಯ್ತು 5-8 ಪರೀಕ್ಷಾ ಪ್ರಶ್ನೆಗಳು!


Team Udayavani, Mar 31, 2023, 4:05 PM IST

8-sirsi

ಶಿರಸಿ: ರಾಜ್ಯದಲ್ಲಿ ಒಂದೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆಗಳು ಆರಂಭವಾಗಿದ್ದರೆ, ಇನ್ನೊಂದಡೆ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಪಬ್ಲಿಕ್ ಪರೀಕ್ಷೆಗಳಲ್ಲಿನ ಪ್ರಶ್ನೆಗಳು ಮಕ್ಕಳಿಗೆ ಗೊಂದಲ ಸೃಷ್ಟಿಸುತ್ತಿವೆ.

ಈಗಾಗಲೇ ಮೂರು ಭಾಷಾ ಹಾಗೂ ಒಂದು ಪಠ್ಯ ವಿಷಯ ಪರೀಕ್ಷೆಗಳು ನಡೆದಿದ್ದು, ಶುಕ್ರವಾರ ಹಾಗೂ ಶನಿವಾರ ಇನ್ನೆರಡು ವಿಷಯಗಳ ಮೇಲೆ ಪರೀಕ್ಷೆ ನಡೆಯಲಿವೆ.

ಆದರೆ, ಸರಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಕೋವಿಡ್ ಕಾಲಘಟ್ಟದಲ್ಲಿ ಕೊರತೆ ಬಿದ್ದ ವಿಷಯಗಳ ಮೇಲಿನ ಕಲಿಕಾ ಚೇತರಿಕೆ ಪಾಠ ಪ್ರವಚನ ನೀಡಿದ್ದರೆ, ಖಾಸಗಿ ಶಾಲೆಗಳು ಪಠ್ಯ ಆಧರಿತ ಶಿಕ್ಷಣ ನೀಡಿದ್ದವು.

ರಾಜ್ಯ ಸರಕಾರ ವಾರ್ಷಿಕ ಶೈಕ್ಷಣಿಕ ವೇಳಾ ಪಟ್ಟಿ ಹೊರತುಪಡಿಸಿ ನಿಗದಿಗೊಳಿಸಿದ ಪಬ್ಲಿಕ್ ಪರೀಕ್ಷೆಯನ್ನು ಶೈಕ್ಷಣಿಕ ಗುಣಮಟ್ಟದ ಮಾಪನಕ್ಕೆ ನಿರ್ಧರಿಸಿತು. ಆದರೆ, ಪಠ್ಯ ಹಾಗೂ ಕಲಿಕಾಚೇತರಿಕೆಯ ಪಾಠದ ಗೊಂದಲದ ಆದೇಶಗಳ ಕಾರಣದಿಂದ ಪರೀಕ್ಷೆಗಳೂ ಮಕ್ಕಳಲ್ಲಿ ಗೊಂದಲವಾಗಿ ನಡೆಯುವಂತೆ ಆಗಿದೆ.

ಮೊನ್ನೆ ನಡೆದ 5-8 ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ಹಾಗೂ ಆಂಗ್ಲ ಭಾಷೆಗೆ ಸಂಬಂಧಿಸಿ ಕಲಿಕಾ ಚೇತರಿಕೆಯ ಪ್ರಶ್ನೆಗಳು ಬಂದಿದ್ದವು. ಸಂಸ್ಕೃತ ಹಾಗೂ ಗುರುವಾರ ನಡೆದ ಪರೀಕ್ಷೆಯಲ್ಲಿ ಪಠ್ಯಕ್ಕೆ ಸಂಬಂಧಿಸಿ ಪ್ರಶ್ನೆಗಳು ಬಂದಿದ್ದವು. ಇದರಿಂದ ಮೊದಲೆರಡು ದಿನ ಕಲಿಕಾ ಚೇತರಿಕೆ ಕಲಿತ ಶಾಲಾ ಮಕ್ಕಳಿಗೆ ಉಳಿದೆರಡು ದಿನ ಪಠ್ಯ ಕಲಿತ ಮಕ್ಕಳಿಗೆ ಪ್ರಶ್ನೆಗಳು ಸುಲಭವಾಗಿದ್ದವು.

ಈ ಮಧ್ಯೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪಬ್ಲಿಕ್ ಪರೀಕ್ಷೆ ಘೋಷಣೆ ಆದ ಬಳಿಕ ನೀಡಲಾಗಿತ್ತಾದರೂ ಗುರುವಾರದ ಗಣಿತ ಪರೀಕ್ಷಾ ಮಾದರಿಗೂ ಸಂಬಂಧವಿಲ್ಲವಾಗಿದೆ ಎಂಬುದು ದೂರಾಗಿದೆ.

ಇಲಾಖೆಯ ಉನ್ನತ ಅಧಿಕಾರಿಗಳು ಕೂಡ ಕಲಿಕಾ ಚೇತರಿಕೆ ಹಾಗೂ ಪಠ್ಯದ ಪ್ರಶ್ನೆಗಳನ್ನು ಬದಲಿಯಾಗಿ ನೀಡಲಾಗುತ್ತದೆ ಎಂದು ಹೇಳಿದ್ದರೂ ಪಠ್ಯದಲ್ಲೇ ಬದಲಿ ಪ್ರಶ್ನೆ ನೀಡಿದ್ದೂ ಬೆಳಕಿಗೆ ಬಂದಿದೆ.

ಕಲಿಕಾ ಚೇತರಿಕೆ ಹಾಗೂ ಪಠ್ಯ ಪ್ರಶ್ನೆ ಸಂಬಂಧಿಸಿ ಕೋರ್ಟ್‌ ಗೆ ಹೋಗಿ ಮುಂದೂಡಲಾಗಿತ್ತು. ಎಲ್ಲರೂ ತೇರ್ಗಡೆ ಎಂದು ಸರಕಾರದ ನಿಯಮ ಹೇಳಿದ್ದರೂ ಪ್ರಶ್ನೆ ಪತ್ರಿಕೆಯಲ್ಲಿ ಕಲಿಯದ ಪಾಠಗಳೇ ಬಿದ್ದು ಮಕ್ಕಳ ಆತ್ಮ ಸ್ಥೈರ್ಯ ಕುಗ್ಗಿಸುವಂತೆ ಆಗಿದೆ ಎನ್ನುತ್ತಾರೆ ಅನೇಕ ಪಾಲಕರು.

ಕೋವಿಡ್ ನಂತರ ಪೂರ್ಣ ಪ್ರಮಾಣದಲ್ಲಿ ತರಗತಿಗೆ ತೆರಳಿದ ಈ ಮಕ್ಕಳಿಗೆ ಈ ವರ್ಷ ಪರೀಕ್ಷೆ ಇನ್ನಷ್ಟು ಉತ್ಸಾಹ ನೀಡಬೇಕಿತ್ತು. ಆದರೆ, ಐದು ಹಾಗೂ ಎಂಟನೇ ವರ್ಗದ ಮಕ್ಕಳನ್ನು ಪರೀಕ್ಷಾ ಗೊಂದಲ ಸೃಷ್ಟಿಸಿದೆ ಎಂಬುದು ಶಿಕ್ಷಣಾಭಿಮಾನಿಗಳ ಅಸಮಧಾನವಾಗಿದೆ.

ತರಗತಿಯ ಪರೀಕ್ಷೆಯಲ್ಲಿ ನೂರಕ್ಕೆ 99 ಅಂಕ ಪಡೆದ ಮಕ್ಕಳು ಇಲ್ಲಿ ಶೇ.50ರಷ್ಟೂ ಸಾಧನೆ ಮಾಡಲಾಗದ ಸ್ಥಿತಿಯೂ ಇದೆ ಎನ್ನುತ್ತಾರೆ ಅನೇಕ ಶಿಕ್ಷಕರು. ಇಲಾಖೆಯ ಗೊಂದಲದಿಂದ ಈ ಪರೀಕ್ಷೆಗಳು ವಿದ್ಯಾರ್ಥಿಗಳನ್ನೇ ಗೊಂದಲಕ್ಕೀಡು ಮಾಡಿದೆ.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.