ಬ್ಯಾಂಕ್ನಿಂದ ಮನೆಗೆ ಸಾರ್ವಜನಿಕರ ಅಲೆದಾಟ
ಸರಿಯಾಗಿ ಪಿಂಚಣಿ ಸಿಗದೆ ಸಮಸ್ಯೆ
Team Udayavani, Jul 3, 2020, 6:08 AM IST
ಉಡುಪಿ: ಸಾಮಾಜಿಕ ಭದ್ರತಾ ಯೋಜನೆಯಡಿ ಸಿಗುವ ಪಿಂಚಣಿ ನಂಬಿಕೊಂಡು ಜೀವನ ನಡೆಸುತ್ತಿದ್ದ ಫಲಾನುಭವಿಗಳು ಕಳೆದ ಮೂರು ತಿಂಗಳಿನಿಂದ ಸರಿಯಾಗಿ ಮಾಸಾಶನ ಸಿಗದೆ ಬ್ಯಾಂಕ್ನಿಂದ ಸರಕಾರಿ ಕಚೇರಿಗಳಿಗೆ ಅಲೆದಾಟ ನಡೆಸುತ್ತಿದ್ದಾರೆ.
ಪಿಂಚಣಿ ಸಿಗದೆ ಪರದಾಟ
ಬಡತನದಿಂದ ಸಂಕಷ್ಟಕ್ಕೆ ಸಿಲಿಕಿರುವ, ಅನಾರೋಗ್ಯದಿಂದ ಬಳಲಿದವರಿಗೆ ಆರ್ಥಿಕ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಸರಕಾರ ಹಲವು ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಿದೆ. ಆದರೆ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಸರಿಯಾದ ಸಮಯದಲ್ಲಿ ಪಿಂಚಣಿ ಸಿಗದ ಹಿನ್ನೆಲೆಯಲ್ಲಿ ವೃದ್ಧರು, ನಿರ್ಗತಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಪಿಂಚಣಿ ಹಣಕ್ಕಾಗಿ ನೂರಾರು ರೂ. ಖರ್ಚು ಮಾಡಿಕೊಂಡು ಮಾಸಾಶನ ವಿಚಾರಿಸಿಕೊಂಡು ಬ್ಯಾಂಕ್ ಹಾಗೂ ಅಂಚೆ ಕಚೇರಿಗೆ ಹೋಗಬೇಕಾಗಿದೆ.
ತಾಂತ್ರಿಕ ಕಾರಣ
ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿಯಲ್ಲಿ ನಿರಂತರ ಬದಲಾವಣೆಯಾಗುತ್ತಿದೆ. ಸರಕಾರ ತಂತ್ರಾಂಶ ಖಜಾನೆ 1ರಿಂದ ಖಜಾನೆ 2ಕ್ಕೆ ಪರಿವರ್ತಿಸುವ ಸಂದರ್ಭದಲ್ಲಿ ಕೆಲ ಅರ್ಜಿಗಳು ಬಿಟ್ಟು ಹೋಗಿವೆ. ಇದರಿಂದಾಗಿ ಫಲಾನುಭವಿಗಳಿಗೆ ಪಿಂಚಣಿ ದೊರಕುತ್ತಿಲ್ಲ. ಜತೆಗೆ ಕೆಲವು ಅರ್ಜಿಗಳನ್ನು ಆಧಾರ್ ಹಾಗೂ ಇತರೆ ಕಾರಣಗಳಿಂದ ರದ್ದು ಮಾಡಲಾಗಿದೆ.
ಪರಿಹಾರವೇನು?
ನಿರಂತರವಾಗಿ ಬರುತ್ತಿದ್ದ ಪಿಂಚಣಿ ನಿಲುಗಡೆ ಯಾದರೆ ಅರ್ಜಿದಾರರು ಸಿಒಪಿ ಸಂಖ್ಯೆ( ಪಿಂಚಣಿ ಮಂಜೂರು ಪತ್ರದಲ್ಲಿರುವ ಸಂಖ್ಯೆ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ನೊಂದಿಗೆ ಸಮೀಪದ ತಾಲೂಕು ಕಚೇರಿಯನ್ನು ಸಂಪರ್ಕಿಸಿ. ಫಲಾನುಭವಿಗಳ ಅರ್ಜಿ ಅಮಾನುತುಗೊಂಡರೆ ಕೂಡಲೇ ಅಲ್ಲಿನ ಸಿಬಂದಿ ಸರಿ ಮಾಡಿಸಿಕೊಡುತ್ತಾರೆ. ಒಂದು ವೇಳೆ ಅರ್ಜಿ ರದ್ದಾಗಿದ್ದಾರೆ ಇನ್ನೊಮ್ಮೆ ಅರ್ಜಿ ಸಲ್ಲಿಸಬೇಕಾಗಿದೆ.
3 ತಿಂಗಳ ಮಾಸಾಶನ ಬಾಕಿ!
ಸಾಮಾಜಿಕ ಭದ್ರತಾ ಯೋಜನೆ ಅನ್ವಯ ವೃದ್ಧಾಪ್ಯ, ವಿಧವಾವೇತನ, ವಿಶೇಷಚೇತನ, ಸಂಧ್ಯಾಸುರಕ್ಷಾ ಸೇರಿದಂತೆ ಇತರೆ ಸಾಮಾಜಿಕ ಭದ್ರತಾ ಯೋಜನೆಯ ಮಾಸಾಶನ ಕೆಲವು ಫಲಾನುಭವಿಗಳಿಗೆ ಮಾರ್ಚ್ನಿಂದ ಬಾಕಿಯಿದೆ. ಉಡುಪಿ ಜಿಲ್ಲೆಯಲ್ಲಿ ವೃದ್ಧಾಪ್ಯ ವೇತನ 10,436, ಅಂಗವಿಕಲರು 12,035, ವಿಧವಾ ವೇತನ 38,579, ಸಂಧ್ಯಾ ಸುರಕ್ಷ 63,524, ಮನಸ್ವಿನಿ 3,869, ಮೈತ್ರಿ 27 ಫಲಾನುಭವಿಗಳು ಸೇರಿದಂತೆ 1,28,470 ಮಂದಿ ಪಿಂಚಣಿ ಪಡೆಯುತ್ತಿದ್ದಾರೆ.
ವಿ.ಎ. ಭೇಟಿಯಾಗಿ
ಪಿಂಚಣಿ ಸಿಗದೆ ಇರುವ ಫಲಾನುಭವಿಗಳು ಸಮೀಪದ ಸ್ಥಳೀಯಾಡಳಿತದ ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು.
-ಪ್ರದೀಪ ಕುರ್ಡೇಕರ್ , ತಹಶೀಲ್ದಾರ್,
ಉಡುಪಿ ತಾಲೂಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ