ಪಿಯುಸಿ ಪಾಸಾದ ಮಕ್ಕಳ ಭವಿಷ್ಯಕ್ಕೆ ಸಿಗಲಿ ಭದ್ರ ಬುನಾದಿ


Team Udayavani, Jul 21, 2021, 7:00 AM IST

ಪಿಯುಸಿ ಪಾಸಾದ ಮಕ್ಕಳ ಭವಿಷ್ಯಕ್ಕೆ ಸಿಗಲಿ ಭದ್ರ ಬುನಾದಿ

ಬಹು ನಿರೀಕ್ಷೆಯ ಪಿಯುಸಿ ಫ‌ಲಿತಾಂಶ ಹೊರಬಿದ್ದಿದ್ದು, ಎಲ್ಲ ಮಕ್ಕಳು ಪಾಸಾಗಿದ್ದಾರೆ. ಕೊರೊನಾದಿಂದಾಗಿ ಎಲ್ಲರನ್ನೂ
ಪಾಸು ಮಾಡುವ ನಿರ್ಧಾರವನ್ನು ರಾಜ್ಯ ಸರಕಾರ‌ ತೆಗೆದುಕೊಂಡಿದೆ. ಈ ಬಾರಿ 5.90 ಲಕ್ಷ ಮಕ್ಕಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 3.35 ಲಕ್ಷ ಬಾಲಕರು ಮತ್ತು 3.31 ಲಕ್ಷ ಬಾಲಕಿಯರಿದ್ದಾರೆ. 1,95,650 ಮಕ್ಕಳು ಡಿಸ್ಟಿಂಕ್ಷ ನ್‌ ನಲ್ಲಿ ಪಾಸಾಗಿದ್ದಾರೆ. 1,47,055 ಮಕ್ಕಳು ದ್ವಿತೀಯ ದರ್ಜೆಯಲ್ಲಿ ಮತ್ತು 6,872 ಮಕ್ಕಳು ಜಸ್ಟ್‌ ಪಾಸಾಗಿದ್ದಾರೆ.

ಇನ್ನು ವಿಭಾಗವಾರು ಲೆಕ್ಕಾಚಾರದಲ್ಲಿ ಹೇಳುವುದಾದರೆ ವಾಣಿಜ್ಯ ವಿಭಾಗದಲ್ಲಿ 2,51,686 ಮಕ್ಕಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,19,783 ಮಕ್ಕಳು ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ 1,53,346 ಮಕ್ಕಳು ಮುಂದಿನ ತರಗತಿಗೆ ತೇರ್ಗಡೆ ಹೊಂದಿದ್ದಾರೆ.

ಕೊರೊನಾದಿಂದಾಗಿ ಈ ಬಾರಿ 10ನೇ ತರಗತಿ ಮತ್ತು ಪ್ರಥಮ ಪಿಯುಸಿಯ ಅಂಕಗಳನ್ನು ಪರಿಗಣಿಸಿ ವಿಶೇಷವಾಗಿ
ಫ‌ಲಿತಾಂಶ ನೀಡಲಾಗಿದೆ. ಈ ಎರಡು ತರಗತಿಯಿಂದ ತಲಾ ಶೇ.45 ಮತ್ತು ದ್ವಿತೀಯ ಪಿಯುಸಿ ಇಂಟರ್ನಲ್ಸ್‌ ನಿಂದ ಶೇ.10ರಷ್ಟನ್ನು ತೆಗೆದುಕೊಳ್ಳಲಾಗಿದೆ.

ಹಿಂದೆ ದ್ವಿ. ಪಿಯುಸಿಯಲ್ಲಿ ಶೇ.60ರ ಸುಮಾರಿಗೆ ಫ‌ಲಿತಾಂಶ ಬರುತ್ತಿತ್ತು. ಕಳೆದ ವರ್ಷ ಶೇ.69.20ರಷ್ಟು ಮಕ್ಕಳು ತೇರ್ಗಡೆಯಾಗಿದ್ದರು. ಆದರೆ ಈ ಬಾರಿ ವಿದ್ಯಾರ್ಥಿಗಳ ಹಿಂದಿನ ಸಾಧನೆಗಳನ್ನೂ ಪರಿಗಣಿಸಿ ಪರೀಕ್ಷೆ ಇಲ್ಲದೆ ಫ‌ಲಿತಾಂಶ ನೀಡಿರುವುದರಿಂದ 100ಕ್ಕೆ 100 ಮಂದಿಯೂ ಪಾಸಾಗಿದ್ದಾರೆ. ಜತೆಗೆ ಈ ಹಿಂದೆ ಫೇಲಾಗಿದ್ದ ರಿಪೀಟರ್ಸ್‌ ಕೂಡ ಈ ಬಾರಿ ಎಲ್ಲರೂ ಪಾಸಾಗಿದ್ದಾರೆ. ಇವರಿಗೆ ಪದವಿ ಸೇರಿದಂತೆ ಉನ್ನತ ಶಿಕ್ಷಣದ ಸೌಲಭ್ಯ ಒದಗಿಸಿಕೊಡುವ ಜವಾಬ್ದಾರಿ ರಾಜ್ಯ ಸರಕಾರದ ಮೇಲಿದೆ.

ಈ ಹಿಂದೆ ದ್ವಿತೀಯ ಪಿಯುಸಿಯಲ್ಲಿ ಫೇಲಾದ ಅದೆಷ್ಟೋ ಮಕ್ಕಳು ಮುಂದಿನ ತರಗತಿಗೆ ಹೋಗುತ್ತಿರಲಿಲ್ಲ. ಹಾಗೆಯೇ ಒಂದೇ ಬಾರಿಗೆ ಈ ಪ್ರಮಾಣದ ಮಕ್ಕಳೂ ಪಾಸಾಗಿ ಹೊರಬರುತ್ತಿರಲಿಲ್ಲ. ಹೀಗಾಗಿ ಸಹಜವಾಗಿಯೇ ಪದವಿ ಕಾಲೇಜುಗಳ ಮೇಲೆ ಒತ್ತಡವಿದೆ. ಒಂದು ಉದಾಹರಣೆಯಾಗಿ ಹೇಳುವುದಾದರೆ, ಗುಜರಾತ್‌ನಲ್ಲಿ 10ನೇ ತರಗತಿಯ ಎಲ್ಲ ಮಕ್ಕಳನ್ನು ಪಾಸ್‌ ಮಾಡಲಾಗಿದ್ದು, ಅಲ್ಲೀಗ 11ನೇ ತರಗತಿಗೆ ಸೇರಿಸಲು ಕಾಲೇಜುಗಳ ಕೊರತೆ ಎದುರಾಗಿದೆ. ಇಂಥ ಪರಿಸ್ಥಿತಿ ಕರ್ನಾಟಕದಲ್ಲಿ ಆಗದಂತೆ ನೋಡಿಕೊಳ್ಳುವುದು ಅತ್ಯವಶ್ಯಕ.

ಸದ್ಯ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಹೆಚ್ಚು ಮಕ್ಕಳು ಪಾಸಾಗಿದ್ದಾರೆ. ಈ ಎಲ್ಲ ಮಕ್ಕಳಿಗೆ ಪದವಿ ಕಾಲೇಜುಗಳಲ್ಲಿ ಸ್ಥಳಾವಕಾಶ ನೀಡಬೇಕು. ಸದ್ಯ ರಾಜ್ಯದಲ್ಲಿ ಎಷ್ಟು ಕಾಲೇಜುಗಳಿವೆ? ಈ ಎಲ್ಲ ಮಕ್ಕಳಿಗೆ ಸೀಟು ನೀಡಲು ಸಾಧ್ಯವೇ? ನೀಡುವುದೇ ಆದರೆ ಮಕ್ಕಳು ಮತ್ತು ಉಪನ್ಯಾಸಕರ ಅನುಪಾತ ಎಷ್ಟಿದೆ? ಉಪನ್ಯಾಸಕರ ಕೊರತೆ ಇದ್ದರೆ ಅತಿಥಿ ಉಪನ್ಯಾಸಕರ ನೇಮಕ ಮಾಡಬಹುದೇ ಎಂಬಿತ್ಯಾದಿ ಸಂಗತಿಗಳ ಬಗ್ಗೆ ರಾಜ್ಯ ಸರಕಾರ‌ ಈಗಲೇ ಚಿಂತನೆ ನಡೆಸಬೇಕು. ಜತೆಗೆ ಈಗ ಪಾಸಾಗಿರುವ ಎಲ್ಲರಿಗೂ ಖಾಸಗಿ ಕಾಲೇಜುಗಳಲ್ಲಿ ಸೇರುವ ಶಕ್ತಿ ಇಲ್ಲದೇ ಇರಬಹುದು. ಹಾಗಾಗಿ ಸರಕಾರಿ ಕಾಲೇಜುಗಳಲ್ಲಿನ ಮೂಲ ಸೌಕರ್ಯವನ್ನು ಹೆಚ್ಚಿಸಲು ಮುಂದಾಗಬೇಕು. ಆಗಷ್ಟೇ ಈ ಮಕ್ಕಳಿಗೆ ಉತ್ತಮವಾದ ಉನ್ನತ ಶಿಕ್ಷಣ ಸಿಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.