ತವರು ಜಿಲ್ಲಾ ಕೇಂದ್ರದಲ್ಲೇ ರಸ್ತೆಗೆ ‘ಅಪ್ಪು’ ಹೆಸರಿಡಲು ನಗರಸಭೆಯಲ್ಲಿ ಮೂಡದ ಒಮ್ಮತ


Team Udayavani, Nov 9, 2021, 9:06 PM IST

ಚಾಮರಾಜನಗರ : ಪುನೀತ್ ರಾಜ್‌ಕುಮಾರ್ ರಸ್ತೆ ನಾಮಕರಣಕ್ಕೆ ನಗರಸಭೆಯಲ್ಲಿ ಮೂಡದ ಒಮ್ಮತ

ಚಾಮರಾಜನಗರ: ನಟ ಪುನೀತ್ ರಾಜ್‌ಕುಮಾರ್ ಅವರ ತವರು ಜಿಲ್ಲೆಯ ಜಿಲ್ಲಾ ಕೇಂದ್ರವಾದ ಚಾಮರಾಜನಗರದ ಪ್ರಮುಖ ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡುವ ಬಗ್ಗೆ ಒಮ್ಮತ ಏರ್ಪಡದ ಕಾರಣ, ಈ ಬಗ್ಗೆ ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಯಿತು.

ನಟ ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ನಗರದ ಡೀವಿಯೇಷನ್ ರಸ್ತೆಗೆ ನಾಮಕರಣ ಮಾಡುವ ಸಂಬಂಧ ಮಂಗಳವಾರ ವಿಶೇಷ ಸಭೆ ಕರೆಯಲಾಗಿತ್ತು. ಸಭೆಯ ಆರಂಭದಲ್ಲೇ ಎಸ್‌ಡಿಪಿಐ ಸದಸ್ಯ ಗಾಳೀಪುರ ಮಹೇಶ್ 2015ರ ಮೇ 7 ರಂದು ನಗರಸಭೆ ಅಧ್ಯಕ್ಷ ಎಸ್.ನಂಜುಂಡಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರದ ಭುವನೇಶ್ವರಿ ವೃತ್ತದಿಂದ ಪ್ರವಾಸಿಮಂದಿರದವರಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ನಗರಸಭೆಯಲ್ಲಿ ನಿರ್ಣಯ ಮಾಡಿ, ಅನುಮೋದನೆ ನೀಡಲಾಗಿದೆ. ಹಾಗಾಗಿ ಆ ರಸ್ತೆಗೆ ಡಾ. ಅಂಬೇಡ್ಕರ್‌ಅವರ ಹೆಸರನ್ನು ಇಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರಸಭೆ ನಾಮನಿರ್ದೇಶನ ಸದಸ್ಯ ನಾಗೇಶ್ ನಾಯಕ ಮಾತನಾಡಿ, ಆ ಸಭೆಯಲ್ಲಿ ನಿರ್ಣಯ ಮಾಡಲಾಗಿದೆಯೋ ಹೊರತೂ ಅನುಮೋದನೆಯಾಗಿಲ್ಲ. ಆ ರಸ್ತೆಗೆ ವೀರಯೋಧ ಪ್ರಭುಸ್ವಾಮಿ ಹೆಸರಿಡಬೇಕು ಎಂದು ಆಗ್ರಹಿಸಿದರು.

ಆಗ ಸದಸ್ಯ ಗಾಳೀಪುರ ಮಹೇಶ್ ಪ್ರತಿಕ್ರಿಯಿಸಿ ಆ ಸಂದರ್ಭದಲ್ಲಿ ನಾನು ಸಹಇದ್ದು, ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವುದರ ಜತೆಗೆ ಅನುಮೋದನೆಯನ್ನು ನೀಡಲಾಗಿದೆ, ಅದನ್ನು ತಿಳಿಯದೇ ಮಾತನಾಡುತ್ತಿರುವುದು ಸರಿಯಲ್ಲ. ನೀವು ಅಂಬೇಡ್ಕರ್ ವಿರೋಧಿ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಕೆಲ ಸಮಯ ಗೊಂದಲದ ವಾತಾವರಣ ಉಂಟಾಯಿತು.

ಇದೇವೇಳೆ ಸದಸ್ಯ ಶಿವರಾಜ್ ಮಾತನಾಡಿ, ನಗರದ ಭುವನೇಶ್ವರಿ ವೃತ್ತದಿಂದ ಪ್ರವಾಸಿಮಂದಿರದವರಗೆ ಅಂಬೇಡ್ಕರ್ ಹೆಸರಿಡುವ ಕುರಿತು ನಿರ್ಣಯ ತೆಗೆದುಕೊಂಡಿರುವುದು ತಮಗೆ ಗೊತ್ತಿಲ್ಲ. ಅಂದಿನ ಜಿಲ್ಲಾಧಿಕಾರಿ ಅಂಬೇಡ್ಕರ್ ಹೆಸರಿಡುವ ಕುರಿತು ಅನುಮೋದನೆ ನೀಡಿದ್ದಾರೆಯೇ ಎಂಬುದನ್ನು ಕೂಲಂಕಷವಾಗಿ ಚರ್ಚಿಸಿ ಮುಂದಿನಸಾಮಾನ್ಯ ಸಭೆಯಲ್ಲಿ ಮಂಡಿಸಬೇಕು, ವಿನಾಕಾರಣ ಗೊಂದಲಬೇಡ ಎಂದರು. ಆರ್.ಪಿ.ನಂಜುಂಡಸ್ವಾಮಿ ಸೇರಿದಂತೆ ಇತರೇ ಸದಸ್ಯರು ಇದನ್ನು ಸ್ವಾಗತಿಸಿದರು.

ಇದನ್ನೂ ಓದಿ : ಕಾಂಗ್ರೆಸ್‌ ಹೆಸರು “ಐ ನೀಡ್‌ ಕಮಿಷನ್‌’ಎಂದು ಬದಲಾಯಿಸಲಿ: ಬಿಜೆಪಿ

ಈ ಸಂದರ್ಭದಲ್ಲಿ ಮಹೇಶ್ ಮಾತನಾಡಿ, ಮೈಸೂರು ಪ್ರವೇಶದ್ವಾರದಿಂದ ಭುವನೇಶ್ವರಿ ವೃತ್ತದವರಗೆ ಪುನೀತ್ ರಾಜ್‌ಕುಮಾರ್ ಹೆಸರಿಡಿ ಎಂದರು.

ರಾಜ್‌ಕುಮಾರ್, ಪುನೀತ್ ನಮ್ಮ ಜಿಲ್ಲೆಯವರು ಅವರ ಹೆಸರಿಡಿ: 10 ನೇ ವಾರ್ಡ್ ಸದಸ್ಯ ಮನೋಜ್ ಪಟೇಲ್ ಮಾತನಾಡಿ, ಈಗಾಗಲೇ ನಗರದ ಜಿಲ್ಲಾ ಕ್ರೀಡಾಂಗಣ, ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ನಗರದ ಪ್ರಮುಖ ಉದ್ಯಾನವನಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿಡಲಾಗಿದೆ. ರಾಜ್ ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಅವರು ನಮ್ಮ ಜಿಲ್ಲೆಯವರಾಗಿದ್ದು, ಅವರ ಹೆಸರನ್ನು ನಗರದ ರಸ್ತೆಯೊಂದಕ್ಕೆ ನಾಮಕರಣ ಮಾಡಬೇಕು. ಆಮೂಲಕ ಗೌರವಸೂಚಿಸಬೇಕು ಎಂದು ಮನವಿ ಮಾಡಿದರು.

ಎಸ್‌ಡಿಪಿಐ ಸದಸ್ಯ ಅಬ್ರಾರ್ ಅಹಮದ್ ಮಾತನಾಡಿ, ಪ್ರಮುಖ ರಸ್ತೆಗಳಿಗೆ ಹೆಸರಿಡಬೇಕು ಎನ್ನುವುದು ಗಂಭೀರವಾದ ವಿಷಯ, ಆದ್ದರಿಂದ ಮುಂದಿನಸಾಮಾನ್ಯಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಮುಂದಿನ ಕ್ರಮವಹಿಸಬೇಕು ಎಂದರು.

ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಉಪಾಧ್ಯಕ್ಷೆ ಪಿ.ಸುಧಾ, ಆಯುಕ್ತ ಕರಿಬಸವಯ್ಯ ಸೇರಿದಂತೆ ನಗರಸಭೆ ಸದಸ್ಯರು, ನಗರಸಭೆ ಸಿಬ್ಬಂದಿ ಹಾಜರಿದ್ದರು.

ಹಿಂದೆಯೂ ಡಾ. ರಾಜ್‌ಕುಮಾರ್ ಹೆಸರಿಡಲು ವಿರೋಧ ವ್ಯಕ್ತವಾಗಿತ್ತು
ವರನಟ ಡಾ. ರಾಜ್‌ಕುಮಾರ್ ಅವರು ತವರು ಜಿಲ್ಲೆಯ ಕೇಂದ್ರ ಸ್ಥಾನವಾದ ಚಾಮರಾಜನಗರದ ರಸ್ತೆಗೆ ಅವರ ಹೆಸರಿಡಲು ಹಿಂದೆಯೂ ನಗರಸಭೆಯಲ್ಲಿ ವಿರೋಧ ವ್ಯಕ್ತವಾಗಿತ್ತು.
ರಾಜ್‌ಕುಮಾರ್ ಹೆಸರಿನಲ್ಲಿ ಚಾಮರಾಜನಗರದಲ್ಲಿ ಯಾವುದೇ ಸ್ಮಾರಕ ಇಲ್ಲ. ಹಾಗಾಗಿ ರಸ್ತೆಯೊಂದಕ್ಕೆ ಅವರ ಹೆಸರಿಡಬೇಕು ಎಂದು ಕಳೆದ ಅವಧಿಯಲ್ಲಿ ನಾಮಕರಣ ಸದಸ್ಯ ಸಿ. ಕೆ. ಮಂಜುನಾಥ್ ಪ್ರಸ್ತಾವನೆ ಮುಂದಿಟ್ಟಿದ್ದರು. ಅಂದಿನ ಸಭೆಯಲ್ಲಿ ರಸ್ತೆಗೆ ರಾಜ್‌ಕುಮಾರ್ ಹೆಸರಿಡಲು ಕೆಲವು ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರಿಂದ ಆ ಪ್ರಸ್ತಾವ ಬಿದ್ದು ಹೋಯಿತು. ಈಗ ಅವರ ಪುತ್ರ ಪುನೀತ್ ರಾಜ್‌ಕುಮಾರ್ ಹೆಸರಿಡಲು ಸಹ ಈ ಅವಧಿಯ ನಗರಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.