ಮಾನ ಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ
Team Udayavani, Aug 9, 2023, 8:35 PM IST
ಉಡುಪಿ: ಮಾನ ಹಾನಿಯಾಗುವಂತೆ ವರ್ತಿಸಿದ ಆರೋಪಿಗೆ 3 ವರ್ಷದ ಜೈಲುಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ 1ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆದೇಶಿಸಿದ್ದಾರೆ.
ಬೈಕಾಡಿಯ ಗೋಪಾಲ ಹಾಗೂ ನಿಟ್ಟೂರಿನ ಬಾಲಕೃಷ್ಣ ಆರೋಪಿಗಳು.
ಆರೋಪಿ ಬಾಲಕೃಷ್ಣ ಮಣಿಪಾಲದ ದೂರದರ್ಶನ ಕಚೇರಿಯಲ್ಲಿ ನೌಕರನಾಗಿದ್ದು, ಅದೇ ಕಚೇರಿಯಲ್ಲಿದ್ದ ಅಜಿತ್ ಕುಮಾರ್ ಅವರು ಯುವತಿಯೊಂದಿಗೆ ಸಲುಗೆಯಿಂದ ಇರುವ ವೇಳೆ ಅವರಿಗೆ ತಿಳಿಯದಂತೆ ಮೊಬೈಲ್ನಲ್ಲಿ ಅಶ್ಲೀಲ ಛಾಯಾಚಿತ್ರ ತೆಗೆದು ಗೋಪಾಲನಿಗೆ ನೀಡಿದ್ದರು. ಬಳಿಕ ಆರೋಪಿಗಳಿಬ್ಬರು ಆ ಯುವತಿಯೊಂದಿಗೆ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದರು. ಇದಕ್ಕೆ ಒಪ್ಪದಿದ್ದಾಗ ಆ ಚಿತ್ರಗಳನ್ನು ತೋರಿಸಿ ಧಕ್ಕೆ ಉಂಟುಮಾಡಿದ್ದರು. 2014ರಲ್ಲಿ ಆಕೆ ಮನೆಯ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ಆಕೆಯನ್ನು ತಡೆದು ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ಬಳಿಕ ದೂರು ದಾಖಲಾಗಿದ್ದು, ಸಾಕ್ಷಿದಾರರ ಹೇಳಿಕೆಯಿಂದ ತನಿಖೆ ನಡೆಸಿ ಇದು ದೃಢಪಟ್ಟಿದೆ. ಈ ಪೈಕಿ ಆರೋಪಿ ಗೋಪಾಲ ಮೃತಪಟ್ಟಿದ್ದಾನೆ. ಮತ್ತೂಬ್ಬ ಆರೋಪಿ ಬಾಲಕೃಷ್ಣನ ಮೇಲೆ ಪ್ರಕರಣ ದಾಖಲಾಗಿದೆ.
ಮಲ್ಪೆ ಠಾಣೆಯ ಪಿಎಸ್ಐ ಗಿರೀಶ್ ಕುಮಾರ್ ಎಸ್. ಅವರು ತನಿಖೆ ನಡೆಸಿ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್