Udupi ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಶಿಕ್ಷೆ
Team Udayavani, Aug 18, 2023, 6:10 PM IST
ಉಡುಪಿ: ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯವು ಆರೋಪಿ ಸುರೇಂದ್ರನಿಗೆ 9 ತಿಂಗಳು 10 ದಿನಗಳ ಜೈಲು ಶಿಕ್ಷೆ ಹಾಗೂ 2,000 ರೂ. ದಂಡ ವಿಧಿಸಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ತೀರ್ಪು ನೀಡಿದ್ದಾರೆ.
ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದ ಕಂಬ್ಲಿ ಮಜಲು ಪುಣೂÌರು ಎಂಬಲ್ಲಿ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಆಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಗಂಡ ಸುರೇಂದ್ರ ಎಂಬಾತನ ಗಂಟಲು ದ್ರವ ಪರೀಕ್ಷೆ ನಡೆಸಲು ಮನೆಗೆ ಬಂದ ಸರಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗಿತ್ತು. ಬಳಿಕ ಅವರ ವಾಹನವನ್ನು ಹಾನಿಗೊಳಿಸಿ ನಷ್ಟ ಉಂಟು ಮಾಡಲಾಗಿತ್ತು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ನೀಡಲಾಗಿದೆ. ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ.ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ