ಪುತ್ತಿಗೆ ಶ್ರೀಗಳ ಪರ್ಯಾಯೋತ್ಸವ: ಕಳೆಗಟ್ಟಿದ ರಥಬೀದಿ, ಭಕ್ತರ ಸಂಖ್ಯೆ ಹೆಚ್ಚಳ

ಭಕ್ತರು ನಗರದ ಲಾಡ್ಜ್‌ ಗಳಲ್ಲಿ ಬುಕ್ಕಿಂಗ್‌ ಮಾಡಿ ಕೊಠಡಿಗಳನ್ನು ಕಾಯ್ದಿರಿಸಿದ್ದಾರೆ.

Team Udayavani, Jan 16, 2024, 1:48 PM IST

ಪುತ್ತಿಗೆ ಶ್ರೀಗಳ ಪರ್ಯಾಯೋತ್ಸವ: ಕಳೆಗಟ್ಟಿದ ರಥಬೀದಿ, ಭಕ್ತರ ಸಂಖ್ಯೆ ಹೆಚ್ಚಳ

ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪರ್ಯಾಯೋತ್ಸವ ಸಂಭ್ರಮಕ್ಕೆ ಉಡುಪಿ ನಗರ ತೆರೆದುಕೊಂಡಿದ್ದು, ಕೃಷ್ಣ ಮಠ ರಥಬೀದಿಯಲ್ಲಿ ಭಕ್ತರ ಓಡಾಟ ಹೆಚ್ಚಳವಾಗಿದೆ.

ವಿವಿಧ ಜಿಲ್ಲೆ, ಹೊರ ರಾಜ್ಯ,ವಿದೇಶದಿಂದಲೂ ಭಕ್ತರು ಉಡುಪಿಗೆ ಧಾವಿಸಿದ್ದು, ರಥಬೀದಿ ವಾತಾವರಣ ಸಂಪೂರ್ಣ ಕಳೆಗಟ್ಟಿದೆ. ಕೃಷ್ಣಮಠ ರಥೋತ್ಸವ, ಪುತ್ತಿಗೆ ಪರ್ಯಾಯ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಗರಕ್ಕೆ ಆಗಮಿಸಿದ್ದಾರೆ. ರಥಬೀದಿ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿನ ಆನಂದತೀರ್ಥ ಮಂಟಪದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಸಂಜೆಯಾಗುತ್ತಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಪರ್ಯಾಯ ಮಹೋತ್ಸವವು ಸ್ಥಳೀಯ ವ್ಯಾಪಾರದ ಆರ್ಥಿಕ ಚಟುವಟಿಕೆಗೂ ಮೆರುಗು ಬಂದಿದೆ.

ರಥಬೀದಿಯ ಸುತ್ತಮುತ್ತ, ಸಂಪರ್ಕ ರಸ್ತೆಗಳಲ್ಲಿ ಸ್ಥಳೀಯ ವ್ಯಾಪಾರಿಗಳು ಸಹಿತ ಹೊರ ಜಿಲ್ಲೆಗಳಿಂದ, ಜಿಲ್ಲೆಯ ಗ್ರಾಮೀಣ
ಭಾಗದಿಂದ ಆಗಮಿಸಿದ ವ್ಯಾಪಾರಿಗಳು ಬೀಡುಬಿಟ್ಟಿದ್ದಾರೆ. ಕರಕುಶಲ ವಸ್ತು, ಗೃಹಪಯೋಗಿ ವಸ್ತು, ಉಡುಗೆ ವಸ್ತ್ರ, ಆಟಿಕೆ ಮಾರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಗರದ ಹೊಟೇಲ್‌, ರೆಸ್ಟೋರೆಂಟ್‌ಗಳಲ್ಲಿ ವ್ಯಾಪಾರ ಹೆಚ್ಚಿದ್ದು, ಐದಾರು ತಿಂಗಳ ಹಿಂದೆಯೇ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ ಪ್ರವಾಸಿಗರು, ಭಕ್ತರು ನಗರದ ಲಾಡ್ಜ್‌ ಗಳಲ್ಲಿ ಬುಕ್ಕಿಂಗ್‌ ಮಾಡಿ ಕೊಠಡಿಗಳನ್ನು ಕಾಯ್ದಿರಿಸಿದ್ದಾರೆ. ರಥಬೀದಿ, ಕೃಷ್ಣಮಠ, ಪುತ್ತಿಗೆ ಮಠಗಳ ವಿವಿಧ ಬಣ್ಣಗಳ ವಿದ್ಯುತ್‌ ಅಲಂಕಾರ ಪರ್ಯಾಯ ಮೆರುಗನ್ನು ಹೆಚ್ಚಿಸಿದೆ.

ರಥಬೀದಿಯಲ್ಲಿ ವಿದೇಶಿಗರು
ಇಲ್ಲಿನ ಪರಿಸರದಲ್ಲಿ ವಿದೇಶಿ ಪ್ರವಾಸಿಗರು ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಅನೇಕ ದೇಶಗಳಿಂದ ಭಾರತಕ್ಕೆ ಪ್ರವಾಸಕ್ಕೆ ಬಂದಿರುವ ವಿದೇಶಿಗರು ಪುತ್ತಿಗೆ ಪರ್ಯಾಯ ಕಣ್ತುಂಬಿಕೊಳ್ಳುವ ಇರಾದೆ ವ್ಯಕ್ತಪಡಿಸಿದ್ದಾರೆ. ಉದಯವಾಣಿ ಜತೆಗೆ
ಮಾತನಾಡಿದ ಫಿನ್‌ ಲ್ಯಾಂಡ್‌ ದೇಶದ ಮರೀಯ ಅವರು, ಯೋಗ ತರಬೇತಿಗೆ ಉಡುಪಿಗೆ ಆಗಮಿಸಿದ್ದು, ಈ ವೇಳೆ ಇಲ್ಲಿ ಪರ್ಯಾಯ ಮಹೋತ್ಸವ ನಡೆಯುವ ಬಗ್ಗೆಯೂ ಕೇಳಿ ವಿಶೇಷ ಎನಿಸಿತು. ಯೋಗದ ಸಲುವಾಗಿ ಇನ್ನೂ ಒಂದು ವಾರ ಉಡುಪಿಯಲ್ಲಿರುತ್ತೇವೆ. ಈ ನಡುವೆ ಪರ್ಯಾಯೋತ್ಸವವನ್ನು ಕಣ್ತುಂಬಿಕೊಳ್ಳುತ್ತೇವೆ ಎಂದ ಅವರು ಇಲ್ಲಿನ ಕಲೆ, ಆಹಾರ, ಸಾಂಸ್ಕೃತಿಕ ವೈವಿಧ್ಯತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ವಚ್ಛತೆ, ಮೂಲಸೌಕರ್ಯ ಸಿದ್ಧತೆ
ನಗರದ ಸ್ವಚ್ಛತ ಕಾರ್ಯ ವೇಗ ಪಡೆದುಕೊಂಡಿದ್ದು, ಮುಖ್ಯ ರಸ್ತೆಗಳು, ಕೃಷ್ಣ ಮಠ ಸಂಪರ್ಕ ಒಳ ರಸ್ತೆಗಳ ಸ್ವಚ್ಛತೆಗೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದೆ. 200 ಮಂದಿ ಸ್ವಚ್ಛತ ಸಿಬಂದಿ ಹಗಲು, ರಾತ್ರಿ ಎರಡು ಪಾಳಿಯಲ್ಲಿ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ.

ಹೊರಗಡೆಯಿಂದ ಬರುವ ಪ್ರವಾಸಿಗರು, ಭಕ್ತರಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ಮೊಬೈಲ್‌ ಶೌಚಾಲಯ ಯುನಿಟ್‌ಗಳನ್ನು ಅಲ್ಲಲ್ಲಿ ಇರಿಸುವ ಕೆಲಸ ನಡೆಯುತ್ತಿದೆ. ನಗರದ ಬಹುತೇಕ ರಸ್ತೆಗಳು ಗುಂಡಿ ಮುಕ್ತವಾಗಿದ್ದು, ಡಾಮರು, ಫೇವರ್‌ ಫಿನಿಶಿಂಗ್‌ ಕಾಮಗಾರಿ ನಡೆದಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.