ಪುತ್ತೂರು: ನಗರಸಭೆ ಆಯ-ವ್ಯಯ ಮಂಡನೆ : 85.68 ಲ.ರೂ.ಮಿಗತೆ ಬಜೆಟ್‌


Team Udayavani, Feb 25, 2021, 5:05 AM IST

ಪುತ್ತೂರು: ನಗರಸಭೆ ಆಯ-ವ್ಯಯ ಮಂಡನೆ : 85.68 ಲ.ರೂ.ಮಿಗತೆ ಬಜೆಟ್‌

ಪುತ್ತೂರು: ನಗರಸಭೆ ಈ ಬಾರಿ 85.68 ಲಕ್ಷ ರೂ. ಮಿಗತೆ ಬಜೆಟ್‌ ಅನ್ನು ಮಂಡಿಸಿದೆ. ಒಟ್ಟು 50.10 ಕೋ.ರೂ. ಗಾತ್ರದ ಬಜೆಟ್‌ ಇದಾಗಿದೆ.

ನಗರಸಭೆ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್‌ ಜೈನ್‌ 2021-22ನೇ ಸಾಲಿನ ಬಜೆಟ್‌ ಮಂಡಿಸಿದರು.

2021-22ನೇ ಸಾಲಿನಲ್ಲಿ ವಿವಿಧ ಮೂಲಗಳಿಂದ ಒಟ್ಟು 39.75 ಕೋ.ರೂ. ಆದಾಯ ನಿರೀಕ್ಷಿಸಲಾಗಿದೆ. ವಿವಿಧ ಯೋಜನೆಗಳಿಗೆ ಹಾಗೂ ಅಗತ್ಯಗಳಿಗೆ 49.24 ಕೋ.ರೂ. ಮೀಸಲಿಡಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರದಿಂದ 11.85 ಕೋ.ರೂ., ವೇತನ ಅನುದಾನ ಮತ್ತು ವಿದ್ಯುತ್‌ ಅನುದಾನ, ರಾಜ್ಯ ಹಣಕಾಸು ಮುಕ್ತ ನಿಧಿ ಮತ್ತು ಇತರ ಅನುದಾನ ಸೇರಿ 10.36 ಕೋ.ರೂ. ನಿರೀಕ್ಷಿಸಲಾಗಿದೆ.

2021-22ನೇ ಸಾಲಿನಲ್ಲಿ ಸ್ವಂತ ಆದಾಯದಲ್ಲಿ 5.35 ಕೋ.ರೂ., ಆಸ್ತಿ ತೆರಿಗೆ, ಕುಡಿಯುವ ನೀರು-3 ಕೋ.ರೂ., ನೀರಿನ ನಳ್ಳಿ ಸಂಪರ್ಕದಲ್ಲಿ 15 ಲಕ್ಷ ರೂ., ಕಟ್ಟಡ ಪರವಾನಿಗೆಯಿಂದ 40 ಲಕ್ಷ ರೂ., ಅಭಿವೃದ್ಧಿ ಶುಲ್ಕದಿಂದ-1 ಕೋ.ರೂ., ಉದ್ಯಮ ಪರವಾನಿಗೆಯಿಂದ 45 ಲ.ರೂ., ಘನತ್ಯಾಜ್ಯ ವಸ್ತು ನಿರ್ವಹಣೆ ಶುಲ್ಕದಿಂದ 1 ಕೋ.ರೂ., ಖಾತೆ ಬದಲಾವಣೆ, ಆಸ್ತಿ ತೆರಿಗೆ ಹಾಗೂ ಇತರ ದಂಡನೆಯಿಂದ 55.70 ಲಕ್ಷ ರೂ., ಪುರಭವನ ಬಾಡಿಗೆಯಿಂದ‌ 10 ಲಕ್ಷ ರೂ., ಮಾರುಕಟ್ಟೆ ಮತ್ತು ನೆಲ ಬಾಡಿಗೆಗಳಿಂದ 28 ಲಕ್ಷ ರೂ., ವಾಣಿಜ್ಯ ಸಂಕೀರ್ಣದ ಬಾಡಿಗೆಯಿಂದ 25 ಲಕ್ಷ ರೂ. ಆದಾಯ ಸಂಗ್ರಹದ ನಿರೀಕ್ಷೆ ಹೊಂದಲಾಗಿದೆ.

49.24 ಕೋ.ರೂ. ಹಂಚಿಕೆ
ನಗರಸಭೆಯ ವಾರ್ಡ್‌ಗಳ ರಸ್ತೆ ನಿರ್ಮಾಣಕ್ಕೆ 7.70 ಕೋ.ರೂ., ನಗರಸಭೆಯ ಹೊಸ ಕಟ್ಟಡ ನಿರ್ಮಾಣಕ್ಕೆ 7 ಕೋ.ರೂ., ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ 1.30 ಕೋ.ರೂ., ಹೊಸ ವಾಹನ ಮತ್ತು ಯಂತ್ರೋಪಕರಣ ಖರೀದಿಗಾಗಿ 1.16 ಕೋ.ರೂ., ಚರಂಡಿ ನಿರ್ಮಾಣ ಮತ್ತು ನಿರ್ವಹಣೆಗಾಗಿ 2.50 ಕೋ.ರೂ., ಪ್ರತೀ ವಾರ್ಡ್‌ಗಳಲ್ಲಿ ನೀರು ಸರಬರಾಜು ವ್ಯವಸ್ಥೆಗಾಗಿ 6.08 ಕೋ.ರೂ., ಭೂ ಸ್ವಾಧೀನಕ್ಕಾಗಿ 75 ಲ.ರೂ., ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್‌ ಕುಟುಂಬಗಳಿಗೆ ಶೇ. 7.25ರ ನಿಧಿಯಡಿ ಸಹಾಯಧನ ಒದಗಿಸಲು 30.05 ಲಕ್ಷ ರೂ., ಭಿನ್ನ ಸಾಮರ್ಥಯ ಹೊಂದಿದವರಿಗೆ ಶೇ. 5 ನಿಧಿಯಲ್ಲಿ 20.72 ಲಕ್ಷ ರೂ., ಕಚೇರಿ ಆಡಳಿತ ವ್ಯವಸ್ಥೆ ಸಾರ್ವಜನಿಕರಿಗೆ ತ್ವರಿತಗೊಳಿಸುವ ನಿಟ್ಟಿನಲ್ಲಿ ಗಣಕ ಯಂತ್ರ ಮತ್ತು ಇತರ ಯಂತ್ರ ಖರೀದಿಗಾಗಿ 20 ಲಕ್ಷ ರೂ., ಕಟ್ಟಡ ನಿರ್ಮಾಣಕ್ಕಾಗಿ 40 ಲಕ್ಷ ರೂ., ಮಳೆ ನೀರು ಚರಂಡಿ ನಿರ್ಮಾಣಕ್ಕಾಗಿ 25 ಲ.ರೂ., ನಲ್ಮ್ ಯೋಜನೆಯಡಿ ಸಾಲ ಹಾಗೂ ಸಹಾಯಧನಕ್ಕೆ 10 ಲ.ರೂ. ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅನುದಾನ ವಿಂಗಡಿಸಲಾಗಿದೆ.

ದೂರು ಸಲ್ಲಿಸಲು ಜನಹಿತ ತಂತ್ರಾಂಶ
ನಗರದ ಜನರು ದೂರುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಜನಹಿತ ತಂತ್ರಾಂಶ ರೂಪಿಸಲಾಗಿದ್ದು, ಇದರಲ್ಲಿ ಫೇಸ್‌ಬುಕ್‌, ಟ್ವಿಟರ್‌, ವಾಟ್ಸಪ್‌, ವೆಬ್‌ಸೈಟ್‌, ದೂರವಾಣಿ ಮತ್ತು ಜನಹಿತ ಮೊಬೈಲ್‌ ಆ್ಯಪ್‌ ಮೂಲಕ ದೂರು ಸಲ್ಲಿಸಿ ದೂರಿನ ಸ್ಥಿತಿಗತಿಗಳ ಬಗ್ಗೆಯು ಪರಿಶೀಲಿಸಲು ಅವಕಾಶ ನೀಡಲಾಗಿರುವ ಬಗ್ಗೆ ಬಜೆಟಿನಲ್ಲಿ ಪ್ರಸ್ತಾವಿಸಲಾಗಿದೆ.

ವೇದಿಕೆಯಲ್ಲಿ ಉಪಾಧ್ಯಕ್ಷೆ ವಿದ್ಯಾ ಗೌರಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಪೌರಾಯುಕ್ತೆ ರೂಪಾ ಶೆಟ್ಟಿ ಉಪಸ್ಥಿತರಿದ್ದರು. ನಗರಸಭಾ ಸದಸ್ಯರು ಬಜೆಟ್‌ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

ಸಸ್ಯಶಾಮಲ ಜಾರಿ
ನಗರವನ್ನು ಹಸುರೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಯೋಜನೆಯನ್ನು ಪ್ರಕಟಿಸಲಾಗಿದ್ದು ಅದಕ್ಕಾಗಿ ಸಸ್ಯಶಾಮಲ ಯೋಜನೆ ಜಾರಿ ಮಾಡುವುದಾಗಿ ಘೋಷಿಸಲಾಗಿದೆ. ಈ ಯೋಜನೆಯಡಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಕನಿಷ್ಠ 50 ಗಿಡಗಳಂತೆ ಅರಣ್ಯ ಇಲಾಖೆ ಸಹಯೋಗದಲ್ಲಿ 1,550 ಗಿಡಗಳನ್ನು ವಿತರಿಸುವುದು, ನಗರದ ಪ್ರಮುಖ ರಸ್ತೆಯ ಇಕ್ಕೆಲ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಸ್ನೇಹಿ ಗಿಡಗಳನ್ನು ನೆಟ್ಟು ಅದರ ಪೋಷಣೆ ಮಾಡುವ ಜವಾಬ್ದಾರಿಯನ್ನು ಸಂಘ ಸಂಸ್ಥೆ ಹಾಗೂ ಸಾರ್ವಜನಿಕರಿಗೆ ನೀಡುವುದು, ಬನ್ನೂರು ಡಂಪಿಂಗ್‌ ಯಾರ್ಡ್‌ನಲ್ಲಿ 350 ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ.

ವಿದ್ಯಾರ್ಥಿಗಳಿಗೆ ಪಾರಿತೋಷಕ
ನಗರವನ್ನು ಪ್ಲಾಸ್ಟಿಕ್‌ ಮುಕ್ತ ಮಾಡುವ ದೃಷ್ಟಿಯಿಂದ ಪ್ಲಾಸ್ಟಿಕ್‌ ಸಂಗ್ರಹಣ ಕೇಂದ್ರವನ್ನು ಸ್ಥಾಪಿಸಿ ಪ್ರತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಂಗ್ರಹಿಸುವ ಪ್ಲಾಸ್ಟಿಕ್‌ ಅನ್ನು ಪಡೆದು ಹೆಚ್ಚು ಸಂಗ್ರಹಿಸಿದ ವಿದ್ಯಾರ್ಥಿಗಳಿಗೆ ಪಾರಿತೋಷಕ ನೀಡುವುದು, ಸಂಘ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಪ್ಲಾಸ್ಟಿಕ್‌ ಚೀಲಗಳಿಗೆ ಪರ್ಯಾಯವಾಗಿ ಬಟ್ಟೆ ಚೀಲ ವಿತರಿಸುವ ಬಗ್ಗೆ ಪ್ರಸ್ತಾವಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.