ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ “ಕ್ಯುಆರ್‌ ಕೋಡ್‌’!

ಮಂಗಳೂರು ವಿಶ್ವವಿದ್ಯಾನಿಲಯದ ಮಹತ್ವದ ಹೆಜ್ಜೆ

Team Udayavani, Mar 23, 2022, 7:43 AM IST

ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ “ಕ್ಯುಆರ್‌ ಕೋಡ್‌’!

ಮಂಗಳೂರು: ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿಯೂ ಇದೀಗ ಕ್ಯು ಆರ್‌ ಕೋಡ್‌ ಅನುಷ್ಠಾನಕ್ಕೆ ಬಂದಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಈ ಮಹತ್ವದ ಹೆಜ್ಜೆ ಇಟ್ಟಿದೆ.

ಪದವಿ ವಿದ್ಯಾರ್ಥಿಗಳು ಸದ್ಯ ಪಡೆಯುತ್ತಿರುವ ಅಂಕಪಟ್ಟಿಯು ಕ್ಯುಆರ್‌ ಕೋಡ್‌ ಒಳಗೊಂಡಿದೆ. ಮುಂದೆ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿಯೂ ಕ್ಯುಆರ್‌ ಕೋಡ್‌ ಜಾರಿಗೆ ಬರಲಿದೆ.

ಅಂಕಪಟ್ಟಿಯ ಜತೆಗೆ ವಿದ್ಯಾರ್ಥಿಯ ಪದವಿ ಪ್ರದಾನ ಸರ್ಟಿಫಿಕೆಟ್‌ನಲ್ಲಿಯೂ ಕ್ಯುಆರ್‌ ಕೋಡ್‌ ಸಿಸ್ಟಮ್‌ ಜಾರಿಯಾಗಲಿದೆ. ಜತೆಗೆ ಸರ್ಟಿಪಿಕೆಟ್‌ ಹಾಗೂ ಡಿಪ್ಲೊಮಾ ಕೋರ್ಸ್‌ ಸರ್ಟಿಪಿಕೆಟ್‌ನಲ್ಲಿಯೂ ಇದು ಅನುಷ್ಠಾನ ವಾಗಲಿದೆ. ಈ ಮೂಲಕ ಮೊದಲ ಬಾರಿಗೆ ಮಂಗಳೂರು ವಿ.ವಿ.ಯಲ್ಲಿ “ಬಾರ್‌ಕೋಡ್‌’ ಬದಲು ಭದ್ರತಾ ದೃಷ್ಟಿಯಿಂದ ಕ್ಯುಆರ್‌ ಕೋಡ್‌ ಜಾರಿಗೆ ಬಂದಿದೆ.

ಈ ಹಿಂದೆ ಅಂಕಪಟ್ಟಿಯಲ್ಲಿ ಬಾರ್‌ಕೋಡ್‌ ಡಿಸ್‌ಪ್ಲೇ ಆಗುತ್ತಿತ್ತು. ಅದರಲ್ಲಿ ವಿದ್ಯಾರ್ಥಿಯ ಕ್ರಮಸಂಖ್ಯೆ ಪ್ರಕಟವಾಗುತ್ತಿತ್ತು. ಅದನ್ನು ಬಾರ್‌ಕೋಡ್‌ ಮೂಲಕವೇ ಪರಿಶೀಲಿಸಲು ಸಾಧ್ಯವಾಗುತ್ತಿತ್ತು. ಆದರೆ, ಕ್ಯುಆರ್‌ ಕೋಡ್‌ನಿಂದ ವಿದ್ಯಾರ್ಥಿಯ ಸಂಕ್ಷಿಪ್ತ ಮಾಹಿತಿಯನ್ನು ಮೊಬೈಲ್‌ ಮುಖೇನ ಪಡೆಯಲು ಸಾಧ್ಯ.

ಮೊದಲ ಬಾರಿಗೆ ಅಂಕಪಟ್ಟಿಯನ್ನು ಮಂಗಳೂರು ವಿ.ವಿ. ವತಿಯಿಂದಲೇ ಮುದ್ರಿಸಲಾಗಿದೆ. ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಜತೆಗೆ ಅಂಕಪಟ್ಟಿಯಲ್ಲಿ ಈ ಹಿಂದೆ ಪರೀಕ್ಷಾಂಗ ಕುಲಸಚಿವರು ಖುದ್ದು ಸಹಿ ಹಾಕುತ್ತಿದ್ದರು. ಆದರೆ ಮೊದಲ ಬಾರಿಗೆ ಕಂಪ್ಯೂಟರೀಕೃತಿ ಸಹಿ ಹಾಕಲಾಗಿದೆ.

ಲಾಭವೇನು?
ಕ್ಯುಆರ್‌ ಕೋಡ್‌ ಅನ್ನು ಮೊಬೈಲ್‌ ಮೂಲಕ ಸ್ಕಾ Âನ್‌ ಮಾಡಿದ ಅಂಶಗಳನ್ನು ಉದ್ಯೋಗ/ಇತರ ಸಂದರ್ಭದಲ್ಲಿ ವಿದ್ಯಾರ್ಥಿಯ ಅಂಕಪಟ್ಟಿಯ ಪರಿಶೀಲನೆ ಅಥವಾ ಆನ್‌ಲೈನ್‌ ಮುಖೇನ ಈ ಮಾಹಿತಿಯನ್ನು ಪರಿಶೀಲಿಸಲು ಅನುಕೂಲವಾಗಲಿದೆ. ಒಂದು ವೇಳೆ ಅಂಕಪಟ್ಟಿ ನಕಲು ಮಾಡಿದರೆ ಅದನ್ನು ಪತ್ತೆಹಚ್ಚಲು ಇದರಿಂದ ಸಾಧ್ಯ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಇದು ಮಹತ್ವದ ಹೆಜ್ಜೆ.

ಕ್ಯುಆರ್‌ ಕೋಡ್‌ನ‌ಲ್ಲಿ ಏನಿದೆ?
ಅಂಕಪಟ್ಟಿಯಲ್ಲಿರುವ ಕ್ಯುಆರ್‌ ಕೋಡ್‌ ಅನ್ನು ಮೊಬೈಲ್‌ನಲ್ಲಿ ಸ್ಕಾ Âನ್‌ ಮಾಡಿದಾಗ ವಿದ್ಯಾರ್ಥಿಯ ಹೆಸರು, ಕಾಲೇಜು ಹೆಸರು, ವಿಭಾಗ, ಪರೀಕ್ಷೆಯಲ್ಲಿ ಬಂದ ಅಂಕ, ಗ್ರೇಡ್‌ ಪಾಯಿಂಟ್ಸ್‌ ಅನ್ನು ಪಡೆಯಬಹುದು.

ರಾಜ್ಯದಲ್ಲಿಯೇ ಮೊದಲ ಬಾರಿ ಜಾರಿ
ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಪದವಿ ಅಂಕಪಟ್ಟಿಯಲ್ಲಿ ಕ್ಯುಆರ್‌ ಕೋಡ್‌ ಕ್ರಮವನ್ನು ಮಂಗಳೂರು ವಿ.ವಿ.ಯು ಅನುಷ್ಠಾನಿಸಿದೆ. ಈ ಮೂಲಕ ವಿದ್ಯಾರ್ಥಿಯ ಅಂಕ ಒಳಗೊಂಡಂತೆ ಸಂಕ್ಷಿಪ್ತ ಮಾಹಿತಿಯನ್ನು ಮೊಬೈಲ್‌ನಲ್ಲಿ ಪರಿಶೀಲಿಸಲು ಸಾಧ್ಯವಿದೆ. ಈಗಾಗಲೇ ಬಹುತೇಕ ಕಾಲೇಜಿಗೆ ಅಂಕಪಟ್ಟಿ ವಿತರಿಸಲಾಗಿದೆ. ಅಂಕಪಟ್ಟಿಯ ಸಮಸ್ಯೆ ಇದ್ದರೆ ವಿ.ವಿ. ವೆಬ್‌ಸೈಟ್‌ನಲ್ಲಿರುವ ಇಮೈಲ್‌ ಮುಖೇನ ವಿ.ವಿ.ಯನ್ನು ಸಂಪರ್ಕಿಸಬಹುದು.
– ಪ್ರೊ| ಪಿ.ಎಲ್‌. ಧರ್ಮ,
ಪರೀಕ್ಷಾಂಗ ಕುಲಸಚಿವರು, ಮಂಗಳೂರು ವಿ.ವಿ.


-ದಿನೇಶ್‌ ಇರಾ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.