ಕೆಲಸಕ್ಕೆ ಬಂದವರಿಗೆ ಕ್ವಾರಂಟೈನ್‌ ಸೀಲ್‌!


Team Udayavani, May 14, 2020, 4:19 AM IST

kelasakke

ಬೆಂಗಳೂರು: ಕರ್ತವ್ಯಕ್ಕೆ ಹಾಜರಾಗಲು ಹೊರ ಜಿಲ್ಲೆಗಳಿಂದ ಬರುವ ಸಾರಿಗೆ ನೌಕರರಿಗೆ ಸ್ಥಳೀಯ ವಾಗಿ ಕ್ವಾರಂಟೈನ್‌ ಮಾಡಲಾಗುತ್ತಿದ್ದು, ಇದರಿಂದ ನೌಕರರು ಸೇವೆಗೆ ಮರಳಲು ಹಿಂದೇಟು ಹಾಕುವಂತೆ ಮಾಡುತ್ತಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ ಸುಮಾರು 60-65 ಸಾವಿರ ಸಾರಿಗೆ ನೌಕರರಿದ್ದಾರೆ. ಇದರಲ್ಲಿ ಬಹುತೇಕರು ಹೊರ ಜಿಲ್ಲೆಗಳು ಅದರಲ್ಲೂ ಉತ್ತರ ಕರ್ನಾಟಕದವರು ಅಧಿಕ ಸಂಖ್ಯೆಯಲ್ಲಿದ್ದಾರೆ.

ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಅವರೆಲ್ಲರೂ  ಊರುಗಳಿಗೆ ತೆರಳಿ ದ್ದರು. ಈಗ ಅಗತ್ಯ ಸೇವೆ, ಒಪ್ಪಂದಕ್ಕೊಳಪಟ್ಟ ಸೇವೆ ಸೇರಿದಂತೆ ಹಲವು ಉದ್ದೇ ಶ ಗಳಿಗಾಗಿ ಬಸ್‌ಗಳು ರಸ್ತೆಗಿಳಿಯುತ್ತಿವೆ. ಈ ಮಧ್ಯೆ ಲಾಕ್‌ಡೌನ್‌ ಸಡಿಲಿ ಕೆಯೂ ಆಗಿದೆ. ಈ ಹಿನ್ನೆಲೆ ಯಲ್ಲಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಆಸಕ್ತಿ ತೋರಿಸುತ್ತಿದ್ದಾರೆ. ಬಾಗಲಕೋಟೆ, ಯಾದಗಿರಿ, ರಾಯಚೂರು, ಕಲ ಬುರಗಿ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ದಾವ ಣ  ಗೆರೆ, ಮಂಡ್ಯ ಮತ್ತಿತರ ಕಡೆಗಳಿಂದ ಕೆಲಸಕ್ಕೆ ಹಾಜರಾಗಲು ಬೆಂಗಳೂರು, ಮೈಸೂರು  ಸೇರಿದಂತೆ ನಿಗಮಗಳ ವ್ಯಾಪ್ತಿಯಲ್ಲಿರುವ ಘಟಕಗಳತ್ತ ಮುಖ ಮಾಡುತ್ತಿದ್ದಾರೆ.

ಆದರೆ, ಹೀಗೆ ಬೇರೆ ಊರುಗಳಿಂದ ಬಂದವರ ಬಗ್ಗೆ ಸ್ಥಳೀಯರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಆ ಮೂಲಕ ಕ್ವಾರಂಟೈನ್‌ ಮುದ್ರೆ ಹಾಕುತ್ತಿರುವುದು  ಕಂಡುಬರುತ್ತಿದೆ. ಇದು ಸಾರಿಗೆ ನಿಗಮಗಳಿಗೆ ತಲೆನೋವಾಗಿ ಪರಿಣಮಿಸಿದೆ. ವಿಶೇಷವಾಗಿ ನಗರದಲ್ಲಿ ಕಾರ್ಯನಿರ್ವಹಿಸುವ ಸಾರಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಬಾಡಿಗೆ ಮನೆ ಗಳಲ್ಲಿ ದ್ದಾರೆ. ಲಾಕ್‌ಡೌನ್‌ ಸಡಿಲಿಕೆ  ಹಿನ್ನೆಲೆಯಲ್ಲಿ ನೌಕ ರರು ಕೆಲಸಕ್ಕೆ ಹಾಜರಾಗಲು ಆಗಮಿಸುತ್ತಿದ್ದಂತೆ, ಕ್ವಾರಂ ಟೈನ್‌ ಮಾಡಲಾಗುತ್ತಿದೆ. ಇದರಿಂದ ಕೆಲವರು ನಗರಕ್ಕೆ ಬರಲೂ ಹಿಂದೇಟು ಹಾಕುತ್ತಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಮೂಲಗಳು  “ಉದಯವಾಣಿ’ಗೆ ತಿಳಿಸಿವೆ.

ರ್‍ಯಾಂಡಮ್‌ ಪರೀಕ್ಷೆ ಅಗತ್ಯ: ಎರಡೂ ನಿಗಮಗಳಲ್ಲಿ ಕಾರ್ಯನಿರ್ವಹಿಸುವ ನೌಕರರಲ್ಲಿ ಬಹುತೇಕ ಉತ್ತರ ಕರ್ನಾಟಕದವರಾಗಿದ್ದಾರೆ. ಆ ಪೈಕಿ ಕೆಲವು ಜಿಲ್ಲೆಗಳು ಈಗಾಗಲೇ ಕೆಂಪು ವಲಯದಲ್ಲಿದ್ದು, ಅತ್ಯಂತ ವೇಗ ವಾಗಿ ಹರಡುತ್ತಿದೆ.  ಅಂತಹ ಪ್ರದೇಶಗಳಿಂದ ನಗರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ. ಆದ್ದರಿಂದ ರ್‍ಯಾಂಡಮ್‌ ಪರೀಕ್ಷೆ ಅಗತ್ಯವಿದೆ ಎಂಬ ಅಭಿಪ್ರಾಯ ಸ್ವತಃ ಬಿಎಂಟಿಸಿ ಅಧಿಕಾರಿಗಳ ವಲಯ ದಲ್ಲಿ ಕೇಳಿಬರುತ್ತಿದೆ. ಬರೀ ಬಿಎಂಟಿಸಿಯಲ್ಲೇ 35  ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಚಾಲಕ ಮತ್ತು ನಿರ್ವಾಹಕರು ಹಾಗೂ ಮೆಕಾನಿಕ್‌ಗಳು ಅಧಿಕ ಸಂಖ್ಯೆ ಯಲ್ಲಿದ್ದಾರೆ.

ಈಗಾಗಲೇ ಕರ್ತವ್ಯಕ್ಕೆ ಹಾಜರಾಗಲು ವೈದ್ಯಕೀಯ ಪ್ರಮಾಣಪತ್ರ ಪಡೆಯುವುದು ಕಡ್ಡಾಯ  ಗೊಳಿಸಲಾಗಿದೆ. ಆದರೆ, ಪ್ರಮಾಣಪತ್ರ ನೀಡುವ ವೇಳೆ ಕೇವಲ ಜ್ವರ ಅಥವಾ ಶೀತದಂತಹ ಅಂಶಗಳನ್ನು ಪರೀಕ್ಷಿಸಿ ನೀಡಲಾಗುತ್ತದೆ. “ಕೋವಿಡ್‌-19’ರ ಪರೀಕ್ಷೆ ನಡೆಸುವುದಿಲ್ಲ; ಅದಕ್ಕೆ ಸಂಬಂಧಿಸಿದ ಉಪಕರಣಗಳ ಲಭ್ಯತೆಯೂ  ಅಲ್ಲಿಲ್ಲ. ಹೀಗಿರುವಾಗ, ಪರಿಣಾಮಕಾರಿ  ಯಾಗಿ ಆಗದು. ಹಾಗಂತ ಎಲ್ಲ ಸಿಬ್ಬಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ, ಪರೀಕ್ಷೆಗೊಳಪಡಿಸುವುದು ಕಷ್ಟ. ಈ ಹಿನ್ನೆಲೆಯಲ್ಲಿ ರ್‍ಯಾಂಡಮ್‌ ಪರೀಕ್ಷೆ ಸೂಕ್ತ. ಇದರಿಂ ದ ಮುಂದಿನ  ದಿನಗಳಲ್ಲಿ ಬಸ್‌ನಲ್ಲಿ ಸಂಚರಿ ಸುವ ಪ್ರಯಾ ಣಿಕರಿಗೂ ಮಾನಸಿಕಸ್ಥೈರ್ಯ ಹೆಚ್ಚು ತ್ತದೆ. ಒಂದು ವೇಳೆ ಯಾವುದಾದರೂ ಒಂದು ಪ್ರಕರಣ “ಪಾಸಿಟಿವ್‌’ ಆದರೂ ಸಮಸ್ಯೆ ಬಿಗಡಾಯಿ ಸುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ  ಇಂತಹ ದ್ದೊಂದು ಪರೀಕ್ಷೆ ಆಗಬೇಕಿದೆ ಎಂದು ಅಧಿಕಾರಿಗಳು ಪ್ರತಿಪಾದಿಸುತ್ತಾರೆ.

ರ್‍ಯಾಂಡಮ್‌ ಟೆಸ್ಟ್‌ ಕಷ್ಟ; ಎಂಡಿ: ಈಗಲೇ ಕರ್ತವ್ಯಕ್ಕೆ ಹಾಜರಾಗುವಂತೆ ಯಾರಿಗೂ ಸೂಚಿಸಿಲ್ಲ. ಸದ್ಯಕ್ಕೆ ಅಗತ್ಯ ಸೇವೆಗಳಿಗೆ ನೀಡಲಾಗಿರುವ ಬಸ್‌ಗಳಲ್ಲಿ ಸುಮಾರು ಐದು ಸಾವಿರ ನೌಕರರು ಕಾರ್ಯ ನಿರ್ವಹಿಸುತ್ತಿ ದ್ದಾರೆ. ಉಳಿದವರು  ಲಾಕ್‌ಡೌನ್‌ ತೆರವಾದ ನಂತರ ಹಂತ- ಹಂತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಅವರೆಲ್ಲರನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ. ರ್‍ಯಾಂಡಮ್‌ ಟೆಸ್ಟ್‌ ಕಷ್ಟವಾಗಬಹುದು. ಆದರೆ, ಸಾಕಷ್ಟು ಸಮಯಾವಕಾಶ ಇರುವುದರಿಂದ ಸಾಮಾನ್ಯ  ಪರೀಕ್ಷೆಗೊಳಪಡಿಸಲಾಗು ವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸ್ಪಷ್ಟಪಡಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲೇ ಸಾಕಷ್ಟು ಒತ್ತಡ ಇದೆ. ನಿತ್ಯ ಸಾವಿರಾರು ಜನ ಅಲ್ಲಿ ಪರೀಕ್ಷೆಗೊಳಪಡುತ್ತಿದ್ದಾರೆ. ಅಂತ ಹದ್ದರಲ್ಲಿ  ಸಿಬ್ಬಂದಿ ಪರೀಕ್ಷೆ ಮತ್ತಷ್ಟು ಒತ್ತಡ ಆಗಬಹುದು ಎಂಬ ಕಾರಣಕ್ಕೆ ನಮ್ಮಲ್ಲಿರುವ ವ್ಯವಸ್ಥೆಯಲ್ಲೇ ತಪಾಸಣೆ ನಡೆಸಲಾಗುತ್ತಿದೆ ಎಂದೂ ಅವರು ಹೇಳಿದರು.

ರ್‍ಯಾಂಡಮ್‌ ಟೆಸ್ಟ್‌ ಮಾಡಿದರೂ ಇಲ್ಲಿ ಸ್ಪಷ್ಟತೆ ಸಿಗುವುದಿಲ್ಲ. ಹಾಗಾಗಿ ಇದು ಉಪಯೋಗ ಆಗುವುದಿಲ್ಲ. ಇನ್ನು ಎಲ್ಲ ಸಿಬ್ಬಂದಿ ಪರೀಕ್ಷೆಗೊಳಪಡಿಸಲು ಸದ್ಯದ ಸ್ಥಿತಿಯಲ್ಲಿ ಕಷ್ಟವೂ ಇದೆ. ಆದ್ದರಿಂದ ಲಕ್ಷಣಗಳು  ಕಂಡುಬರುವಂತಹವರನ್ನು ಹಾಗೂ ಆಯಾ ಜಿಲ್ಲೆಗಳಲ್ಲಿ ಕಂಟೈನ್ಮೆಂಟ್‌ ವಲಯದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸ ಬೇಕಾಗುತ್ತದೆ.
-ಡಾ.ವಿ. ರವಿ, ವೈರಾಲಜಿ ವಿಭಾಗ ಮುಖ್ಯಸ್ಥರು, ನಿಮ್ಹಾನ್ಸ್‌

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.