ಕ್ವಾರಂಟೈನ್ ವ್ಯವಸ್ಥೆ ; ಭಯ ಬೇಡ : ಕೋಟ ಮನವಿ
Team Udayavani, May 12, 2020, 5:45 AM IST
ಕುಂದಾಪುರ: ಹೊರ ರಾಜ್ಯಗಳಿಂದ ಬರುವವರಿಗೆ ಸರಕಾರಿ ಕ್ವಾರಂಟೈನ್ ಕಡ್ಡಾಯವಾಗಿದ್ದು, ಅದಕ್ಕಾಗಿ ಕುಂದಾಪುರದ ಬೇರೆ ಬೇರೆ ಕಡೆಗಳಲ್ಲಿ ವಸತಿ ಗೃಹ, ಹಾಸ್ಟೆಲ್ಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಆದರೆ ಕ್ವಾರಂಟೈನ್ ವ್ಯವಸ್ಥೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಸೂಕ್ತ ತಪಾಸಣೆ ನಡೆಸಿದ ಬಳಿಕವೇ ಅವರನ್ನು ಅಲ್ಲಿಗೆ ಕರೆ ತರಲಾಗುತ್ತಿದೆ. ಜನರು ಕೂಡ ಇದಕ್ಕೆ ಸಹಕರಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕುಂದಾಪುರದ ಪ್ರವಾಸಿ ಬಂಗಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಹೊರ ರಾಜ್ಯಗಳಿಂದ ಬರುವ ನಮ್ಮವರನ್ನು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋವಿಡ್-19 ಕುರಿತಾದ ಯಾವುದೇ ಗುಣ ಲಕ್ಷಣಗಳು ಇಲ್ಲದಿದ್ದರೆ ಮಾತ್ರ ಈ ರೀತಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತಿದೆ. ಲಕ್ಷಣಗಳಿದ್ದಲ್ಲಿ ಐಸೋಲೇಶನ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುವುದು ಎಂದವರು ಹೇಳಿದರು.
ಕಾರ್ಮಿಕ ಅಧಿಕಾರಿಗಳೊಂದಿಗೆ ಸಭೆ
ಇದೇ ವೇಳೆ ಸಚಿವರು ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಜಿಲ್ಲೆಯಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರ ವಿವರ, ಅವರಿಗೆ ಸರಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ನೀಡುವ ಕುರಿತಂತೆ, ರಿಕ್ಷಾ ಚಾಲಕರಿಗೆ ಸರಕಾರ ಘೋಷಿಸಿದ ಸಹಾಯಧನ ಹಂಚಿಕೆ ಹೇಗೆ ಎನ್ನುವ ಬಗ್ಗೆ ಚರ್ಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ