ಶೀಘ್ರ 16,000 ಪೇದೆ, 630 ಪಿಎಸ್‌ಐ ನೇಮಕ


Team Udayavani, Sep 24, 2019, 3:07 AM IST

shigra

ಕಲಬುರಗಿ: ಮುಂಬರುವ ಎರಡು ವರ್ಷದೊಳಗೆ 16,000 ಪೊಲೀಸ್‌ ಪೇದೆಗಳು ಹಾಗೂ 630 ಪಿಎಸ್‌ಐಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಈಗಾಗಲೇ 6,000 ಪೇದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಕುರಿತು ಹೈಕೋರ್ಟ್‌ಗೂ ಮಾಹಿತಿ ಸಲ್ಲಿಸಲಾಗಿದ್ದು, ಹಣಕಾಸು ಇಲಾಖೆ ಸಹ ಒಪ್ಪಿಗೆ ಸೂಚಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಲ್ಲಿನ ನಾಗನಹಳ್ಳಿ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ 9ನೇ ತಂಡದ ಪಿಎಸ್‌ಐ ಪ್ರಶಿಕ್ಷಣಾ ರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕಾರ ಹಾಗೂ ಬಹು ಮಾನ ವಿತರಿಸಿ ಅವರು ಮಾತನಾಡಿದರು.

ಪಿಎಸ್‌ಐಗಳ ನೇಮಕ ಹಾಗೂ ಬಡ್ತಿಯಲ್ಲಿ 371ಜೆ ವಿಧಿ ಬಳಕೆಯಾಗದೇ ಇರುವುದು ಹಾಗೂ 371ನೇ ವಿಧಿಯಡಿ ಪ್ರಮಾಣ ಪತ್ರ ದುರ್ಬಳಕೆ ಮಾಡಿರುವ ಕುರಿತಾಗಿ ಮರು ಪರಿಶೀಲಿಸಿ, ಸಾಧ್ಯವಾ ದರೆ ಮರು ತನಿಖೆಗೆ ಆದೇಶಿಸಲಾಗುವುದು. ಪೊಲೀಸ್‌ ಇಲಾಖೆ ಸುಧಾರಣೆಗೆ ದೃಢ ಹೆಜ್ಜೆ ಇಡಬೇಕಾಗಿದೆ. ಹೀಗಾಗಿ ಬರುವ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾ ಗುವುದು. ಉಡುಪಿಯಲ್ಲಿ ಹೊಸದಾಗಿ ಪೊಲೀಸ್‌ ತರ ಬೇತಿ ಶಾಲೆ ತೆರೆಯ ಲಾಗುವುದು ಎಂದರು.

ತರಬೇತಿಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಕಲಬುರಗಿ ಸೇರಿ ರಾಜ್ಯದ 14 ಪೊಲೀಸ್‌ ತರಬೇತಿ ಮಹಾವಿದ್ಯಾಲಯ ಹಾಗೂ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಸುಧಾರಣೆ ಮೊದಲ ಹೆಜ್ಜೆಯಾಗಿ ಮೈಸೂರು ಪಿಟಿಸಿ ಯನ್ನು ಸೆಂಟರ್‌ ಆಫ್ ಎಕ್ಸ್‌ಲೆನ್ಸ್‌ ಮಾಡಲಾಗುವುದು. ಪೊಲೀಸ್‌ ಇಲಾಖೆಯ 12 ಹಾಗೂ ಕೆಎಸ್‌ಆರ್‌ಪಿಯ 2 ತರಬೇತಿ ಮಹಾವಿದ್ಯಾಲಯಗಳನ್ನು ಹಂತ-ಹಂತವಾಗಿ ಉನ್ನತಿಕರಣಗೊಳಿಸಲಾಗುವುದು ಎಂದರು. ಈಗಿರುವ ತರಬೇತಿಯಲ್ಲೂ ಬದಲಾವಣೆ ತರಲಾಗುವುದು.

ಬಹು ಮುಖ್ಯವಾಗಿ ಇತ್ತೀಚೆಗೆ ಸೈಬರ್‌ ಕ್ರೈಂ ಹೆಚ್ಚುತ್ತಿ ರುವುದರಿಂದ ತರಬೇತಿ ಅವಧಿಯಲ್ಲಿ ಪೊಲೀಸರಿಗೆ ಇ-ಲರ್ನಿಂಗ್‌, ಇ- ಪೊಲೀಸಿಂಗ್‌ ಕುರಿತು ತರಬೇತಿ ನೀಡಲಾಗುವುದು. ಫಾರೆನಿಕ್ಸ್‌ ಪತ್ತೆ, ಭದ್ರತೆ, ಸಂಚಾರ ನಿರ್ವ ಹಣೆಯಲ್ಲಿ ವೃತ್ತಿಪರತೆ ಹೆಚ್ಚಿಸಲು ರಾಜ್ಯದ ಪೊಲೀಸರಿಗೆ ಅಮೆರಿಕ, ಸ್ಕಾಟ್‌ಲ್ಯಾಂಡ್‌ ಸೇರಿ ವಿದೇಶಗಳಿಗೆ ಕಳುಹಿಸಿ ಅಲ್ಲಿನ ಮಾದರಿ ಹಾಗೂ ತಾಂತ್ರಿಕ ತರಬೇತಿ ಸಹ ನೀಡಲಾಗುವುದು ಎಂದರು.

ಔರಾದಕರ್‌ ವರದಿಗೆ ಶೀಘ್ರ ಅಧಿಸೂಚನೆ: ಔರಾದಕರ್‌ ವರದಿ ಜಾರಿಗೆ ಸರ್ಕಾರ ಬದ್ಧವಿದೆ. ಈ ಕುರಿತು ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು. ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಜೈಲರ್‌ ಸಿಬ್ಬಂದಿಯನ್ನು ಹೊರಗಿಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಎರಡು ಸುತ್ತಿನ ಸಭೆ ನಡೆಸಿ ಇವರನ್ನೂ ಸೇರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.