ಶೀಘ್ರ ಹೊಸ ಮಾಹಿತಿ ತಂತ್ರಜ್ಞಾನ ನೀತಿ


Team Udayavani, Dec 18, 2019, 3:07 AM IST

BSY1

ಬೆಂಗಳೂರು: ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳನ್ನು ಒಂದೇ ಅಧಿನಿಯಮದಡಿ ತರಲು ಮತ್ತು ನಾವಿನ್ಯತೆಗೆ ಕಾನೂನು ರೂಪಿಸಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನವೋದ್ಯಮ, ಉದ್ಯಮಗಳ ಜತೆ ಸಂವಾದ ಮತ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ನಾವಿನ್ಯತೆ ಜನರ ಸಬಲೀಕರಣಕ್ಕೆ ದಾರಿ ಮಾಡಿಕೊಡಲಿದೆ. ಕೌಶಲ್ಯ ವರ್ಧನೆ, ನವೋದ್ಯಮಗಳ ಪೋಷಣೆ, ಜಾಗತಿಕ ಒಕ್ಕೂಟಗಳ ಏರ್ಪಡಿಸಿಕೊಳ್ಳುವಿಕೆ ಹಾಗೂ ನಾವಿನ್ಯತೆ ಬೆಂಬಲಿಸಲು ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.

ಅವಕಾಶ: ರಾಜ್ಯ ಸರ್ಕಾರ ಶೀಘ್ರ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಜಾರಿಗೊಳಿಸಲಿದೆ. ಇದರಲ್ಲಿ ಹಂತ-2 ಮತ್ತು ಹಂತ-3 ರ ನಗರಗಳತ್ತ ಹಾಗೂ ಶೈಕ್ಷಣಿಕ ಸಂಸ್ಥೆ ಬಲಪಡಿಸುವತ್ತ ಹೆಚ್ಚಿನ ಗಮನ ನೀಡಲಾಗುತ್ತದೆ. ನವೋದ್ಯಮ ಅಥವಾ ಉದ್ಯಮಕ್ಕೆ ನಿಯಂತ್ರಣಾತ್ಮಕ ತಪಾಸಣಾ ಪರಿಸರದಲ್ಲಿ ನಿಬಂಧನಾ ಅಗತ್ಯತೆ ಸಡಿಲಗೊಳಿಸಿ, ನವ ನೂತನ ತಂತ್ರಜ್ಞಾನ ಪರೀಕ್ಷೆಗೊಳಪಡಿಸಬಹುದಾದ ನಿಬಂಧನಾ ಅಂಗವನ್ನು ಸೃಜಿಸಲು ಕರಡು ಕರ್ನಾಟಕ ನಾವೀನ್ಯತಾ ಪ್ರಾಧಿಕಾರ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸರ್ಕಾರ ಮಾಹಿತಿ ತಂತ್ರಜ್ಞಾನ ವಲಯದ ಉನ್ನತಿಗೆ, ಅಗ್ರಶ್ರೇಣಿ ಕಾಪಾಡಲು ಕ್ರಮ ಕೈಗೊಳ್ಳಲಿದೆ. ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ನಿಮ್ಮೆಲ್ಲರ ಪಾಲುದಾರಿಕೆ ಹಾಗೂ ಬೆಂಬಲ ಅತಿ ಅಗತ್ಯ ಎಂದು ಹೇಳಿದರು.

ಸರ್ಕಾರದ ಪ್ರಯತ್ನ: ಕ್ರಿಯಾಶೀಲ ಸರ್ಕಾರ, ಉದ್ಯಮ ಸ್ನೇಹಿ ಕಾನೂನು, ಅತ್ಯುನ್ನತ ಕೌಶಲ್ಯವುಳ್ಳ ವೃತ್ತಿಪರ ಮಾನವ ಸಂಪನ್ಮೂಲ ಹಾಗೂ ನಗರಗಳ ಕಾಸ್ಮೋಪಾಲಿಟನ್‌ ಜೀವನ ಶೈಲಿ ಮೊದಲ ಅಂಶಗಳಿಂದ ಕರ್ನಾಟಕ ನವೋದ್ಯಮಗಳಿಗೆ, ಸಂಶೋಧಕರಿಗೆ ಹಾಗೂ ಜಾಗತಿಕ ಕಾರ್ಪೊರೇಟ್‌ ದಿಗ್ಗಜರಿಗೆ ನೆಚ್ಚಿನ ತಾಣ. ನೀತಿ ಆಯೋಗದಿಂದ ಇತ್ತೀಚೆಗೆ ರಾಜ್ಯಗಳಿಗೆ ನೀಡಲಾದ ಪ್ರಪ್ರಥಮ ನಾವಿನ್ಯತಾ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಅಗ್ರ ಶ್ರೇಯಾಂಕ ಲಭಿಸಿದೆ. ಈ ಅಗ್ರ ಸ್ಥಾನ ಉಳಿಸಿಕೊಳ್ಳಲು ಮತ್ತು ಜಾಗತಿಕ ಆರ್ಥಿಕತೆಯಲ್ಲಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಮುಂದುವರಿಸಲಿದೆ ಎಂದು ಹೇಳಿದರು.

ಐಟಿ, ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಯುವ ಉದ್ಯಮಿಗಳಿಗೆ ಸರ್ಕಾರ ಅಗತ್ಯ ವೇದಿಕೆ ಕಲ್ಪಿಸುತ್ತಿದೆ. ವಿಷನ್‌ ಗ್ರೂಪ್‌ ವರದಿ ಆಧರಿಸಿ ನವೋದ್ಯಮದ ಉತ್ತೇಜನಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಿದ್ದೇವೆ. ವಿವಿ ಮತ್ತು ಕಾಲೇಜು ಹಂತದಲ್ಲಿ ಗುಣಮಟ್ಟದ ಕೋರ್ಸ್‌ ಒದಗಿಸಲು ಕ್ರಮ ತೆಗೆದುಕೊಳ್ಳಲಿದ್ದೇವೆ. ಈ ನಿಟ್ಟಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕೆಲಸ ಮಾಡಬೇಕು ಎಂದರು.

ಉತ್ತಮ ಆಡಳಿತ ಮತ್ತು ಆಡಳಿತ ಸುಧಾರಣೆಗೆ ಉತ್ತಮ ತಂತ್ರಜ್ಞಾನ ಅತಿ ಅವಶ್ಯಕ. ಕರ್ನಾಟಕ ಇನ್ನೋವೇಷನ್‌ ಪ್ರಾಧಿಕಾರ ಜಾರಿಗೆ ತರುವ ಮೂಲಕ ಐಟಿ, ಬಿಟಿಗೆ ಹೊಸ ಆಯಾಮ ನೀಡಿದ್ದೇವೆ. ಪ್ರಾಜೆಕ್ಟ್ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚುಣಿಯಲ್ಲಿದೆ ಎಂದು ಹೇಳಿದರು. ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾತನಾಡಿ, ಕೈಗಾರಿಕೆ ಹಾಗೂ ಕಾಲೇಜುಗಳ ನಡುವೆ ಸಮನ್ವಯ ಅತಿ ಅಗತ್ಯ.

ಕಾಲೇಜುಗಳಲ್ಲಿ ಬೋಧನಾ ಕ್ರಮ ಬದಲಾಗಬೇಕು ಮತ್ತು ಪಠ್ಯಕ್ರಮದಲ್ಲೂ ಬದಲಾವಣೆ ತರಬೇಕಿದೆ. ಕೈಗಾರಿಕೆಗಳಿಗೆ ಹೊಂದಿಕೊಳ್ಳಲುವ ಪಠ್ಯಕ್ರಮಗಳು ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಟಾರ್ಟ್‌ಅಪ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್‌, ಇಲಾಖೆ ನಿರ್ದೇಶದ ಪ್ರಶಾಂತ್‌ ಕುಮಾರ್‌ ವಿಶ್ರಾ, ಪ್ರಾನ್ಸ್‌ ಕಾನ್ಸುಲೇಟ್‌ ಜನರಲ್‌ ಮಾಜೋರಿ ವಾನ್‌ ಬೆಲಿಜೆಮ್‌ ಮತ್ತಿತರರಿದ್ದರು.

ಉನ್ನತ ತಂತ್ರಜ್ಞಾನದಿಂದ ಉತ್ಕೃಷ್ಟತಾ ಕೇಂದ್ರ: ನಾವಿನ್ಯತೆಯುಳ್ಳ ವಾಣಿಜ್ಯೋದ್ಯಮಿಗಳಿಗೆ ಎಲಿವೇಟ್‌ ಮುಂತಾದ ಅನುದಾನ ಬೆಂಬಲ ಕಾರ್ಯಕ್ರಮಗಳ ಮೂಲಕ ಸರ್ಕಾರ ಅವುಗಳನ್ನು ಪ್ರೋತ್ಸಾಹಿಸುತ್ತಿದೆ. ಕೈಗಾರಿಕೆ, ಶಿಕ್ಷಣ, ಉದ್ಯಮ ಹಾಗೂ ನವೋದ್ಯಮಗಳಿಗೆ ಸಹಭಾಗಿತ್ವಕ್ಕಾಗಿ ವೇದಿಕೆ ಕಲ್ಪಿಸಲು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಉನ್ನತ ತಂತ್ರಜ್ಞಾನಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್‌ .ಯಡಿ ಯೂರಪ್ಪ ಹೇಳಿದರು.

ಶೀಘ್ರ ಐಟಿ ನೀತಿ ಜಾರಿಗೆ ತರಲಿದ್ದೇವೆ. ಡೀಪ್‌ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ನಿರ್ಧಾರ ಮಾಡಿದೆ. ಇದು ಯುವಕ-ಯುವತಿಯರಿಗೆ ಅನುಕೂಲವಾಗಲಿದ್ದು ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ.
-ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.