ಶೀಘ್ರ 2ನೇ ಚಾರ್ಜ್‌ಶೀಟ್‌ ಸಲ್ಲಿಕೆ; ಪಿಎಸ್‌ಐ ನೇಮಕ ಹಗರಣ

4 ದಿನದೊಳಗೆ ಸಾವಿರ ಪುಟಗಳ ಆರೋಪ ಪಟ್ಟಿ ಸಲ್ಲಿಕೆ

Team Udayavani, Jul 25, 2022, 2:30 PM IST

10

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಜು.5ರಂದು 1974 ಪುಟಗಳ ದೋಷಾರೋಪಣ (ಚಾರ್ಜ್‌ಶೀಟ್‌) ಸಲ್ಲಿಸಿದ ಬೆನ್ನಲ್ಲೇ ಮತ್ತೆ ಸಾವಿರ ಪುಟಗಳ ಎರಡನೇ ಚಾರ್ಜ್‌ಶೀಟ್‌ ಸಲ್ಲಿಸಲು ಸಿಐಡಿ ತನಿಖಾ ತಂಡ ಸಿದ್ಧತೆ ನಡೆಸಿದೆ.

ಮೂಲಗಳ ಪ್ರಕಾರ ನೊಬೆಲ್‌ ಶಾಲೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.29 ಇಲ್ಲವೇ 30ರಂದು ಆರೋಪಪಟ್ಟಿ ಸಲ್ಲಿಸಲು ಸಿಐಡಿ ತಂಡ ಮುಂದಾಗಿದ್ದು, ತನಿಖಾಧಿಕಾರಿ ಆಗಿರುವ ಸಿಐಡಿ ಡಿವೈಎಸ್ಪಿ ವೀರೇಂದ್ರಕುಮಾರ ಅವರು ಸಾಕ್ಷ್ಯಾಧಾರಗಳೊಂದಿಗೆ ಇಲ್ಲಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ನೊಬೆಲ್‌ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್‌ ಬಳಸಿ ಹೇಗೆ ಅಕ್ರಮ ಎಸಗಲಾಗಿದೆ ಹಾಗೂ ಯಾರ್ಯಾರು, ಹೇಗೆ ಅಕ್ರಮದಲ್ಲಿ ತಮ್ಮ ಪಾತ್ರ ನಿರೂಪಿಸಿದ್ದಾರೆ. ಹಣದ ವ್ಯವಹಾರ ಸೇರಿದಂತೆ ಪ್ರಮುಖವಾಗಿ ಪ್ರಶ್ನೆಪತ್ರಿಕೆ ಬಹಿರಂಗ ಸೇರಿದಂತೆ ಇತರ ಎಲ್ಲ ಆಯಾಮಗಳು ಒಳಗೊಂಡ ಅಂಶಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ ಎನ್ನಲಾಗಿದೆ.

ಶೌಚಾಲಯದಲ್ಲಿ ಬಚ್ಚಿಡಲಾದ ಬ್ಲೂಟೂತ್‌: ಎಂಎಸ್‌ಐ ಡಿಗ್ರಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪಿಎಸ್‌ಐ ಪರೀಕ್ಷಾರ್ಥಿ ಪರೀಕ್ಷಾ ಮುನ್ನಾ ದಿನವೇ ಹೂವಿನ ಕುಂಡದಲ್ಲಿ ಬ್ಲೂಟೂತ್‌ ಇಟ್ಟು ಬಂದಿರುವುದು ಗೊತ್ತಿರುವ ವಿಷಯ. ಆದರೆ ನೊಬೆಲ್‌ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪಿಎಸ್‌ಐ ಆಗಿ ಆಯ್ಕೆಯಾಗಿರುವ ಆರೋಪಿ ಇಸ್ಮಾಯಿಲ್‌ ಖದೀರ್‌ ಪರೀಕ್ಷಾ ದಿನದಂದು ಮಧ್ಯರಾತ್ರಿ ಮೂರರಿಂದ ನಾಲ್ಕು ಗಂಟೆ ಸುಮಾರಿಗೆ ಬ್ಲೂಟೂತ್‌ ಶಾಲೆಯ ಶೌಚಾಲಯ ಕೋಣೆಯೊಳಗೆ ಇಟ್ಟು ಬಂದು ಅಕ್ರಮ ಎಸಗಿದ್ದಾನೆ. ಇದನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ.

ಉತ್ತರ ಹೇಳಿದವರಿಗೆ ಶೋಧ: ಎರಡನೇ ಆರೋಪ ಪಟ್ಟಿ ಸಲ್ಲಿಕೆಯಾದ ನಂತರ ಪರೀಕ್ಷಾರ್ಥಿಗಳಿಗೆ ಬ್ಲೂಟೂತ್‌ ಮೂಲಕ ಉತ್ತರ ಹೇಳಿದವರನ್ನು ಪತ್ತೆ ಮಾಡಿ ತನಿಖೆಗೆ ಸಿಐಡಿ ತಂಡ ಮುಂದಾಗಿದೆ. ಈಗಾಗಲೇ ಉತ್ತರವನ್ನು ಎಲ್ಲಿ ಕುಳಿತು ಹಾಗೂ ಯಾವ ಮೊಬೈಲ್‌ನಿಂದ ಉತ್ತರ ಹೇಳಲಾಗಿದೆ ಎಂಬುದನ್ನು ತನಿಖಾಧಿಕಾರಿಗಳು ವರದಿ ರೂಪಿಸಿದ್ದಾರೆ. ಒಟ್ಟಾರೆ ಈ ಎಲ್ಲ ಅಂಶಗಳನ್ನು ಉಲ್ಲೇಖೀಸಬಹುದಾದರೆ ಮುಂದಿನ ದಿನಗಳಲ್ಲಿ ಉತ್ತರ ಹೇಳಿದವರು ಹಾಗೂ ಉತ್ತರ ಹೇಳಲು ಸಹಕರಿಸಿದವರೆಲ್ಲರೂ ಸಿಐಡಿ ಬಲೆಗೆ ಬೀಳುವ ಸಾಧ್ಯತೆಗಳಿವೆ.

ಮನೆಯಿಂದಲೇ ಊಟ ಪೂರೈಕೆ! ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಡಿಎಸ್ಪಿ, ಓರ್ವ ಇನ್ಸ್‌ಪೆಕ್ಟರ್‌, 11 ಅಭ್ಯರ್ಥಿಗಳು ಹಾಗೂ ಕಿಂಗ್‌ಪಿನ್‌, ಮಧ್ಯವರ್ತಿಗಳು ಸೇರಿದಂತೆ ಒಟ್ಟಾರೆ 42 ಜನರು ಬಂಧನವಾಗಿದ್ದಾರೆ. ಡಿಎಸ್ಪಿ ಗಳಾದ ಮಲ್ಲಿಕಾರ್ಜುನ ಸಾಲಿ, ವೈಜನಾಥ ರೇವೂರ, ಇನ್ಸ್‌ಪೆಕ್ಟರ್‌ ಆನಂದ ಮೇತ್ರೆ, ಅಭ್ಯರ್ಥಿಗಳಾದ ವಿಶಾಲ್‌, ಎನ್‌.ವಿ.ಪಾಟೀಲ್‌, ವಿಕಾಸ, ಶ್ರೀಧರ, ಪ್ರಭುದೇವ, ಹೈಯಾಳಿ ದೇಸಾಯಿ, ಇಸ್ಮಾಯಿಲ್‌ ಜಮಾದಾರ ಹಾಗೂ ಕಿಂಗ್‌ಪಿನ್‌ಗಳಾದ ರುದ್ರಗೌಡ ಪಾಟೀಲ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಅಫ‌ಜಲಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೇಶ ಸೇರಿದಂತೆ ಒಟ್ಟಾರೆ 42 ಜನರ ಬಂಧನವಾಗಿ ಮೂವರು ಮಾತ್ರ ಜಾಮೀನು ಮೇಲೆ ಹೊರ ಬಂದಿದ್ದಾರೆ. ಮಹಾರಾಷ್ಟ್ರದ ಸುರೇಶ ಕಾಟೆಗಾಂವ, ಚಾಲಕ ಸದ್ದಾಂ ಹಾಗೂ ಕಾಳಿದಾಸ್‌ ಮಾತ್ರ ಹೊರ ಬಂದಿದ್ದಾರೆ. ಇನ್ನುಳಿದಂತೆ 39 ಆರೋಪಿಗಳು ಈಗಲೂ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆಶ್ಚರ್ಯಕರ ಏನೆಂದರೆ ಇವರಲ್ಲಿ ಬಹುತೇಕರಿಗೆ ಆರಂಭದ ದಿನದಿಂದ ಇಂದಿನವರೆಗೂ ಮನೆಯಿಂದಲೇ ಕಾರಾಗೃಹಕ್ಕೆ ಊಟ ಪೂರೈಕೆಯಾಗುತ್ತಿದೆ. ದಿನಾಲು ಬೆಳಿಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಪೂರೈಸಲಾಗುತ್ತಿದೆ. ಆರೋಪಿಗಳಿಗೆ ಮನೆಯಿಂದ ಊಟ ಪೂರೈಕೆಯಾಗುತ್ತಿರುವ ಬಗ್ಗೆ ಕಾರಾಗೃಹ ಸುಪರಿಟೆಂಡೆಂಟ್‌ ಸಮರ್ಪಕ ಉತ್ತರ ನೀಡುತ್ತಿಲ್ಲ.

-ಹಣಮಂತರಾವ ಭೈರಾಮಡಗಿ

 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.