ಇನ್ನೂ 6-7 ತಿಂಗಳು ಕೋವಿಡ್ ಬಾಧಿಸಲಿದೆ : ಸಚಿವ ಆರ್‌.ಅಶೋಕ್


Team Udayavani, Jul 16, 2020, 10:06 PM IST

ಇನ್ನೂ 6-7 ತಿಂಗಳು ಕೋವಿಡ್ ಬಾಧಿಸಲಿದೆ

ಬೆಂಗಳೂರು: ತಜ್ಞ ವರದಿ ಪ್ರಕಾರ ಕೋವಿಡ್ ಸೋಂಕು ಇನ್ನೂ 6- 7 ತಿಂಗಳು ತೀವ್ರವಾಗಿ ಬಾಧಿಸಲಿದ್ದು, ಸೂಕ್ತ ವ್ಯವಸ್ಥೆಗಳ ಮೂಲಕ ಸಹಜ ಸ್ಥಿತಿಗೆ ತರಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಸಚಿವ ಆರ್‌.ಅಶೋಕ್‌ ಹೇಳಿದರು.

ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಬಿಬಿಎಂಪಿ ದಕ್ಷಿಣ ವಲಯದಲ್ಲಿ ನಾನಾ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಪ್ರಮುಖರೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌- 19 ಸೋಂಕಿತರ ಚಿಕಿತ್ಸೆಗೆ ಸಂಬಂಧಪಟ್ಟಂತೆ ಕೆಲವೆಡೆ ಕರ್ತವ್ಯಕ್ಕೆ ದಾದಿಯರು ಗೈರಾಗುತ್ತಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಈ ಬಗ್ಗೆ ಉಪ ಪೊಲೀಸ್‌ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ಕರ್ತವ್ಯಕ್ಕೆ ಗೈರಾದವರನ್ನು ಟ್ರ್ಯಾಕ್‌ ಮಾಡಲಾಗುವುದು ಎಂದು ಹೇಳಿದರು.

ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಒಂದು ವಾರ ಕಾರ್ಯ ನಿರ್ವಹಿಸಿದರೆ ಒಂದು ವಾರ ಕ್ವಾರೆಂಟೈನ್‌ನಲ್ಲಿ ಇರಬೇಕಾಗುತ್ತದೆ. ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವವರು ಮನೆಗೆ ಹೋಗಲು ಸಾಧ್ಯವಾಗದು. ಹಾಗಾಗಿ ಅವರಿಗೆ ಆಸ್ಪತ್ರೆಗಳ ಬಳಿಯ ಹೋಟೆಲ್‌ಗ‌ಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸರ್ಕಾರದಿಂದಲೇ ಹೋಟೆಲ್‌ಗ‌ಳಲ್ಲಿ ರಿಯಾಯ್ತಿ ದರದಲ್ಲಿ ಉಳಿಯುವ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು, ದಾದಿಯರು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ. ಒಂದೊಮ್ಮೆ ಚಿಕಿತ್ಸೆ ನೀಡದಿದ್ದರೆ ಅಂತಹ ವೈದ್ಯರು, ದಾದಿಯರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವ ಕಠಿಣ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಯವರು ಕೋವಿಡ್‌ ಸೋಂಕಿತರಿಗೆ ಬಿ.ಯು. ಸಂಖ್ಯೆ (ಬೆಂಗಳೂರು ನಗರ ಕೋವಿಡ್ ಸೋಂಕಿತರ ಸಂಖ್ಯೆ) ತೆಗೆದುಕೊಂಡು ಬರುವಂತೆ ಸೂಚಿಸುವಂತಿಲ್ಲ. ರೋಗಿ ಬಂದ ಕೂಡಲೇ ಆಸ್ಪತ್ರೆಗೆ ದಾಖಲಿಸಿಕೊಂಡು ನಂತರ ಪಾಲಿಕೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಬಿಬಿಎಂಪಿ ದಕ್ಷಿಣ ವಲಯದ ಪ್ರಮುಖರ ಸಭೆ ನಡೆಸಲಾಗಿದ್ದು, ಸೋಮವಾರ ವಲಯ ವ್ಯಾಪ್ತಿಯ ಪಾಲಿಕೆ ಸದಸ್ಯರ ಸಭೆ ಕರೆಲಾಗುವುದು ಎಂದು ಆರ್‌.ಅಶೋಕ್‌ ಹೇಳಿದರು. ದಕ್ಷಿಣ ವಲಯದ ಪ್ರಮುಖರ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ತೇಜಸ್ವಿ ಸೂರ್ಯ, ಶಾಸಕಿ ಸೌಮ್ಯಾರೆಡ್ಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.