ಲಿಲ್ಲಿ ಆಗ್ತಾರಂತೆ ರಚಿತಾ
Team Udayavani, May 28, 2020, 4:28 AM IST
ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಲಿಲ್ಲಿ ಆಗಲು ಹೊರಟಿದ್ದಾರೆ. ನಿರ್ದೇಶಕ ವಿಜಯ್ ಎಸ್ ಗೌಡ ಈ ವಿಚಾರ ಸ್ಪಷ್ಟಪಡಿಸಿದ್ದು ಅವರು ಸೈಕಲಾಜಿಕಲ್ ಮಿಸ್ಟ್ರಿ ಥ್ರಿಲ್ಲರ್ ಮೂಲಕ ನಿರ್ದೇಶಕ ಪಟ್ಟವನ್ನಲಂಕರಿಸಲು ಸಿದ್ಧವಾಗುತ್ತಿದ್ದಾರೆ. ಲಿಲ್ಲಿ ಚಿತ್ರದ ಅಭಿನಯಿಸಲು ರಚಿತಾ ರಾಮ್ ಒಪ್ಪಿದ್ದಾರೆ ಎಂದು ಹೇಳಿರುವ ನಿರ್ದೇಶಕ ರಾಜ್ ಫಿಲ್ಮ್ಸ್ ಮತ್ತು ಬೌನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಲಿಲ್ಲಿಯನ್ನು ನಾಗರಾಜ್ ಮತ್ತು ಸುಬ್ರಮಣಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.
ಕಥೆ, ಚಿತ್ರಕಥೆ ವಿಜಯ್ ಅವರದಾಗಿದ್ದು ಯುವ ಪೀಳಿಗೆಗೆ ಸಂಬಂಧಿಸಿದ ಸಾಮಾಜಿಕ ಸಮಸ್ಯೆಗಳು ಮತ್ತು ಮಕ್ಕಳ ನಿರ್ಲಕ್ಷ್ಯ ಮತ್ತು ಮಕ್ಕಳ ಮೇಲೆ ತಂತ್ರಜ್ಞಾನದ ಪರಿಣಾಮದ ಬಗ್ಗೆ ಬೆಳಕು ಚೆಲ್ಲುವ ಈ ವಿಷಯ ಸ್ಯಾಂಡಲ್ ವುಡ್ ನಲ್ಲಿ ಹಿಂದೆಂದೂ ಬಂದಿರಲಿಲ್ಲ ಎಂದಿದ್ದಾರೆ. ಎನ್ಆರ್ಐ ಮನಶಾಸ್ತ್ರಜ್ಞ ಡಾ.ಮಹಿ ಪಾತ್ರದಲ್ಲಿ ರಚಿತಾ ನಟಿಸಲಿದ್ದಾರೆ.ಇದು ಒಂದು ಆಸಕ್ತಿದಾಯಕ ಪಾತ್ರವಾಗಿದೆ.
ಅಷ್ಟೇ ಅಲ್ಲದೆ ಮಹಿಳಾ ಕೇಂದ್ರಿತ ಚಿತ್ರವೊಂದರಲ್ಲಿ ರಚಿತಾ ಇದೇ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಚಿತ್ರದ ಶೂಟಿಂಗ್ ನಡೆವ ಸ್ಥಳದ ಕುರಿತಂತೆ ಸಹ ನಿರ್ದೇಶಕರು ಇದಾಗಲೇ ತೀರ್ಮಾನ ತೆಗೆದುಕೊಂಡಿದ್ದಾರೆ. ಕಲಾ ನಿರ್ದೇಶಕ ಸತೀಶ್ ರಚಿಸಿದ ಸೆಟ್ ನಲ್ಲಿ ಮೊದಲು ಶೂಟಿಂಗ್ ನಡೆಯಲಿದೆ. ಏತನ್ಮಧ್ಯೆ ನಟಿ ರಚಿತಾ ರಾಮ್ “100′ ಚಿತ್ರದ ಬಿಡುಗಡೆ ನಿರೀಕ್ಷೆಯಲ್ಲಿದ್ದಾರೆ. ಅಲ್ಲದೆ ಪ್ರೇಮ್ ಅವರ “ಏಕ್ ಲವ್ ಯಾ’ ಚಿತ್ರದ ಎರಡು ಹಾಡಿನ ಚಿತ್ರೀಕರಣವನ್ನೂ ಮುಗಿಸಬೇಕಿದೆ.
ನಾವು ಶೆಡ್ನೂಲ್ ಪ್ರಕಾರ ಕೆಲಸ ಮಾಡುತ್ತಿದ್ದೇವೆ ಮತ್ತು ಅದನ್ನು ಒಂದೇ ಟೇಕ್ ನಲ್ಲಿ ಚಿತ್ರೀಕರಿಸಲು ಯೋಜಿಸಿದ್ದೇವೆ. ದಿನಾಂಕಗಳನ್ನು ಅಂತಿಮಗೊಳಿಸಲಾಗುತ್ತಿದೆವಿಜಯ್ ಹೇಳುತ್ತಾರೆ. ಲಿಲ್ಲಿ ತಂಡದಲ್ಲಿ ರಂಗಿತರಂಗ ಖ್ಯಾತಿಯ ಛಾಯಾಗ್ರಾಹಕ ವಿಲಿಯಂ ಡೇವಿಡ್ ಮತ್ತು ಗೋಧಿ ಬಣ್ಣ ಸಾಧಾರಣ ಮೈಕಟ್ಟು ಹಾಗೂ ಬೀರ್ಬಲ್ ಚಿತ್ರಗಳಲ್ಲಿ ಕೆಲಸ ಮಾಡಿದ ಎಡಿಟರ್ ಶ್ರೀಕಾಂತ್ ಶ್ರಾಫ್ ಸೇರಿದ್ದಾರೆ. ಚಿತ್ರಕ್ಕೆ ವೀರೇಶ್ ಎಸ್ ಗೌಡ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?