“ಸೂಪರ್‌ ಮಚ್ಚಿ’ಗಾಗಿ ಹೈದರಾಬಾದ್‌ಗೆ ಹಾರಿದ ರಚಿತಾ


Team Udayavani, Jun 29, 2020, 4:24 AM IST

super-machi

ಸದ್ಯಕ್ಕೆ ಲಾಕ್‌ಡೌನ್‌ ಸಡಿಲಗೊಂಡಿದೆ. ಚಿತ್ರರಂಗ ಕೂಡ ಮೆಲ್ಲನೆ ರಂಗುತುಂಬಿಕೊಳ್ಳುವತ್ತ ಸಾಗಿದೆ. ಇಷ್ಟು ದಿನಗಳ ಕಾಲ ಮನೆಯಲ್ಲೇ ಇದ್ದ ಸಿನಿಮಾ ಮಂದಿ ಈಗ ಸಿನಿಮಾದತ್ತ ಮುಖ ಮಾಡುತ್ತಿದ್ದಾರೆ. ಈಗಾಗಲೇ ಎಲ್ಲರಿಗಿಂತಲೂ  ಮೊದಲು ಕನ್ನಡ ನಟಿ ರಚಿತಾರಾಮ್‌ ಅವರು ತಮ್ಮ ಕೆಲಸ ಶುರುಮಾಡಿದ್ದಾರೆ. ಹೌದು, ರಚಿತಾರಾಮ್‌, ಲಾಕ್‌ಡೌನ್‌ ಆಗುತ್ತಿದ್ದಂತೆಯೇ ಸೋಶಿಯಲ್‌ ಮೀಡಿಯಾದಿಂದ ದೂರ ಉಳಿದಿದ್ದರು.

ಯಾವಾಗ, ಸಿನಿಮಾ ಚಿತ್ರೀಕರಣಕ್ಕೆ  ಅನುಮತಿ ಸಿಕ್ಕಿತೋ, ಆಗ ಪುನಃ ತಮ್ಮ ಮೊಬೈಲ್‌ ಆನ್‌ ಮಾಡಿಕೊಂಡಿದ್ದಲ್ಲದೆ, ಸೋಶಿಯಲ್‌ ಮೀಡಿಯಾದಲ್ಲೂ ಆ್ಯಕ್ಟಿವ್‌ ಆಗಿದ್ದಾರೆ. ಈಗ ಅವರು ಶೂಟಿಂಗ್‌ ಹೋಗುವುದನ್ನು ಖಚಿತಪಡಿಸಿದ್ದಾರೆ. ರಚಿತಾರಾಮ್‌ ಅವರು ತೆಲುಗಿನ  “ಸೂಪರ್‌ ಮಚ್ಚಿ’ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ಲಾಕ್‌ಡೌನ್‌ಹಿನ್ನೆಲೆಯಲ್ಲಿ ಆ ಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿತ್ತು.

ಈಗ ಆ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ರಚಿತಾರಾಮ್‌ ಕೂಡ ನಟನೆಗೆ ಮುಂದಾಗಿದ್ದಾರೆ. ಆ ಕುರಿತು  ಅವರೇ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ವಿಷಯ ಹಂಚಿಕೊಂಡಿದ್ದಾರೆ. ಶೇ.10 ರಷ್ಟು ಚಿತ್ರೀಕರಣ ಬಾಕಿ ಉಳಿದಿದ್ದರಿಂದ ಅದನ್ನು ಈಗ ಪೂರೈಸುವ ಸಲುವಾಗಿ ರಚಿತಾರಾಮ್‌ ಹೈದರಾಬಾದ್‌ಗೆ ಹೋಗಿದ್ದಾರೆ. ಅದರಲ್ಲೂ, ಅವರು  ಬೆಂಗಳೂರಿನಿಂದ ಹೈದರಾಬಾದ್‌ಗೆ ಅವರ ಸ್ವಂತ ಕಾರಲ್ಲೇ ಹೋಗಿದ್ದಾರೆ.

ಹತ್ತು ದಿನಗಳ ಕಾಲ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಅವರು ಮನೆಯಲ್ಲೇ ಇದ್ದು, ಸ್ವಯಂ ಪ್ರೇರಿತ 8 ದಿನಗಳ ಕಾಲ ಕ್ವಾರಂಟೈನ್ನಲ್ಲಿರಲಿದ್ದಾರಂತೆ.  ಅವರ ಕುಟುಂಬದ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. “ಸೂಪರ್‌ ಮಚ್ಚಿ’ ಸಿನಿಮಾ ನಿರ್ಮಾಪಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಕಾರಣಕ್ಕೆ, ನಾನೀನ ಚಿತ್ರೀಕರಣದಲ್ಲಿ  ಭಾಗಿಯಾಗಿದ್ದೇನೆ.

ಅಂದುಕೊಂಡಂತೆ ಆಗಿದ್ದರೆ, ಆ ಚಿತ್ರ ಇಷ್ಟೊತ್ತಿಗೆ ಮುಗಿಯಬೇಕಿತ್ತು. ಆದರೆ, ಹಲವು ಸಮಸ್ಯೆಯಿಂದಾಗಿ ಆಗಿರಲಿಲ್ಲ. ಈಗ ಲಾಕ್‌ ಡೌನ್‌ ಸಡಿಲಗೊಂಡಿದ್ದರಿಂದ ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ  ರಚಿತಾರಾಮ್‌ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇನ್ನು, ರಚಿತಾರಾಮ್‌ ಅವರು ಜುಲೈನಲ್ಲಿ ಕನ್ನಡದ ಚಿತ್ರಗಳಲ್ಲಿ ಭಾಗವಹಿಸಲಿದ್ದಾರೆ. ಸದ್ಯ ಹತ್ತು ದಿನಗಳ ಕಾಲ ಹೈದರಾಬಾದ್‌ನಲ್ಲೇ ಚಿತ್ರೀಕರಣ ಮುಗಿಸಿ, ನಂತರ ಇತ್ತ ವಾಪಾಸ್‌ ಆದ  ನಂತರ ಪ್ರಜ್ವಲ್‌ ದೇವರಾಜ್‌ ಅವರ ಜೊತೆ “ವೀರಂ’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

“ಏಪ್ರಿಲ್‌’ ಚಿತ್ರಕ್ಕೂ ಚಾಲನೆ ಸಿಗಲಿದೆ. ಆದರೆ, ಚಿರಂಜೀವಿ ಸರ್ಜಾ ಅವರೊಂದಿಗೆ ಒಂದು ದಿನದ ಚಿತ್ರೀಕರಣದಲ್ಲೂ ಅವರು  ಭಾಗವಹಿಸಲು ಸಾಧ್ಯವಾಗಿಲ್ಲ. ಆ ಚಿತ್ರದ ಫೋಟೋ ಶೂಟ್‌ ಕೂಡ ನಡೆದಿತ್ತು. ಇದರೊಂದಿಗೆ ವಿಜಯ್‌ ಗೌಡ ಅವರ ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾ ಕೂಡ ಶುರುವಾಗಲಿದ್ದು, ಅದರಲ್ಲೂ ರಚಿತಾರಾಮ್‌  ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.