ಟೀಮ್ ಇಂಡಿಯಾ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ
Team Udayavani, Nov 4, 2021, 5:50 AM IST
ಹೊಸದಿಲ್ಲಿ: ನಿರೀಕ್ಷೆಯಂತೆ ಬ್ಯಾಟಿಂಗ್ ದಂತಕತೆ ರಾಹುಲ್ ದ್ರಾವಿಡ್ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಇದನ್ನು ಬಿಸಿಸಿಐ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಟಿ20 ವಿಶ್ವಕಪ್ ಮುಗಿದ ಅನಂತರ ಅವರ ಕಾರ್ಯಾವಧಿ ಆರಂಭವಾಗಲಿದೆ. 2023ರಲ್ಲಿ ಭಾರತದಲ್ಲೇ ನಡೆಯುವ ಏಕದಿನ ವಿಶ್ವಕಪ್ ತನಕ ಅವರು ಈ ಹುದ್ದೆಯಲ್ಲಿರಲಿದ್ದಾರೆ.
ಭಾರತ ಕಂಡ ಸರ್ವಶ್ರೇಷ್ಠ ಬ್ಯಾಟ್ಸ್ಮನ್ ಆಗಿರುವ ದ್ರಾವಿಡ್ ಇಲ್ಲಿಯವರೆಗೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿದ್ದರು. ಇನ್ನು ಮುಂದೆ ಆ ಸ್ಥಾನಕ್ಕೆ ಲಕ್ಷ್ಮಣ್ ಆಯ್ಕೆಯಾಗುವ ನಿರೀಕ್ಷೆಯಿದೆ. ವಿಶೇಷವೆಂದರೆ, ದ್ರಾವಿಡ್ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅನಂತರ ಪೈಪೋಟಿಯನ್ನೇ ಎದುರಿಸಬೇಕಾಗಿ ಬರಲಿಲ್ಲ. ಬಿಸಿಸಿಐ ಮಟ್ಟಿಗೆ ಅವರು ಪ್ರಶ್ನಾತೀತ ಆಯ್ಕೆಯಾಗಿದ್ದರು. ಅಂತೆಯೇ ಬುಧವಾರ ಕ್ರಿಕೆಟ್ ಸಲಹಾ ಸಮಿತಿ ಅವಿರೋಧವಾಗಿ ದ್ರಾವಿಡ್ ಅವರನ್ನು ಆಯ್ಕೆ ಮಾಡಿತ್ತು.
ಟಿ20 ವಿಶ್ವಕಪ್ ಆರಂಭಕ್ಕೆ ಎರಡು ದಿನಗಳ ಮುನ್ನ ಯುಎಇಯಲ್ಲಿ ಐಪಿಎಲ್ ಮುಗಿದಿತ್ತು. ಆ ವೇಳೆಯೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಅವರು ರಾಹುಲ್ ದ್ರಾವಿಡ್ರೊಂದಿಗೆ ಮಾತನಾಡಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಮನ ಒಲಿಸಿದ್ದರು. ಆ ಸ್ಥಾನಕ್ಕೆ ದ್ರಾವಿಡ್ರಂತಹ ಇನ್ನೊಬ್ಬ ವ್ಯಕ್ತಿ ಇಲ್ಲ ಎನ್ನುವ ನಂಬಿಕೆ ಅವರಿಬ್ಬರದ್ದು. ಆರಂಭದಲ್ಲಿ ಕೋಚ್ ಹುದ್ದೆ ನಿರಾಕರಿಸಿದ್ದ ದ್ರಾವಿಡ್, ಈಗ ಅದಕ್ಕೆ ಮಾನಸಿಕವಾಗಿ ಸಿದ್ಧವಾಗಿದ್ದಾರೆ.
ಇದನ್ನೂ ಓದಿ:ಟಿ20 ವಿಶ್ವಕಪ್: ಸೆಮಿಫೈನಲ್ನತ್ತ ಕಿವೀಸ್ ದಾಪುಗಾಲು
ವಿಶ್ವಕಪ್ ಮುಗಿದ ಅನಂತರ ಭಾರತ-ನ್ಯೂಜಿಲ್ಯಾಂಡ್ ನಡುವಿನ ಸರಣಿಯೇ ದ್ರಾವಿಡ್ ಅವರ ಮೊದಲ ಜವಾಬ್ದಾರಿ.ಪ್ರಸ್ತುತ ವಿಶ್ವಕಪ್ನಲ್ಲಿ ಭಾರತ ನೀಡಿರುವ ಕಳಪೆ ಪ್ರದರ್ಶನಗಳಿಗೆ ಕಾರಣ ಹುಡುಕಿ ಅದನ್ನು ತಿದ್ದುವ ಹೊಣೆಗಾರಿಕೆ ಅವರ ಮುಂದಿದೆ. ಟಿ20 ತಂಡದ ನಾಯಕತ್ವ ತೊರೆಯಲಿರುವ ವಿರಾಟ್ ಕೊಹ್ಲಿ, ಏಕದಿನ ತಂಡದ ನಾಯಕತ್ವದಿಂದಲೂ ಕೆಳಕ್ಕಿಳಿಯುವ ಸಾಧ್ಯತೆಯಿದೆ. ಹೀಗಾಗಿ ರಾಹುಲ್ಗೆ ರೋಹಿತ್ ಶರ್ಮ ಜೋಡಿಯಾಗಬಹುದು.
ಹೊಸ ತರಬೇತುದಾರನಾಗಿ ಆಯ್ಕೆಯಾಗಿರುವುದು ನನಗೊಂದು ದೊಡ್ಡ ಗೌರವ. ಈ ಜವಾಬ್ದಾರಿ ಹೊತ್ತುಕೊಳ್ಳುವುದಕ್ಕೆ ಕಾತುರಗೊಂಡಿದ್ದೇನೆ. ಇಲ್ಲಿಯವರೆಗೆ ರವಿಶಾಸ್ತ್ರಿಯವರ ಗರಡಿಯಲ್ಲಿ ಭಾರತ ತಂಡ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಅದನ್ನು ಮುಂದುವರಿಸಿಕೊಂಡು ಹೋಗುವ ಭರವಸೆ ಇದೆ.
-ರಾಹುಲ್ ದ್ರಾವಿಡ್,
ಮುಂದಿನ ಭಾರತೀಯ ಕ್ರಿಕೆಟ್ ತಂಡದ ಕೋಚ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ