ನಾಳೆ ರಾಜ್ಯದಲ್ಲಿ ರಾಹುಲ್ ಪ್ರಚಾರ
Team Udayavani, Apr 12, 2019, 6:20 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏ.13ರಂದು ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ಬಹಿರಂಗ ಪ್ರಚಾರ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿ ಕೋಲಾರಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೋಲಾರ ಸಮಾವೇಶದ ನಂತರ ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ತೆರಳಲಿದ್ದು, ಅಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಮಂಡ್ಯ ಲೋಕಸಭಾ ವ್ಯಾಪ್ತಿಯ ಕೆ.ಆರ್.ನಗರದಲ್ಲಿ ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ದೇವೇಗೌಡರೊಂದಿಗೆ
ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.