ರಾಯಚೂರು: ರಸ್ತೆಗಳ ದುರಸ್ತಿಗೆ ಲೋಕ ಜನಶಕ್ತಿ ಪಕ್ಷ ಒತ್ತಾಯ
Team Udayavani, Aug 13, 2020, 1:02 PM IST
ರಾಯಚೂರು: ನಗರದ ವಿವಿಧ ಪ್ರಮುಖ ರಸ್ತೆಗಳು ಹಾಳಾಗಿದ್ದು, ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಲೋಕ ಜನಶಕ್ತಿ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದ ಕಾರ್ಯಕರ್ತರು, ನಗರದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರ ಜೀವ ಹಿಂಡುತ್ತಿವೆ. ಸ್ವಲ್ಪ ಮಳೆ ಬದರೆ ಸಾಕು ನೀರು
ಸಂಗ್ರಹಗೊಂಡು ವಾಹನ ಸವಾರರು ಗುಂಡಿಗೆ ಬೀಳುವಂತಾಗುತ್ತಿದೆ.
ನಗರದ ಮಹಾವೀರ ಸರ್ಕಲ್ ರಸ್ತೆ, ತೀನ್ ಕಂದೀಲ್ ರಸ್ತೆ, ಗದ್ವಾಲ್ ರಸ್ತೆ, ಪೂರ್ಣಿಮ ಚಿತ್ರಮಂದಿರ, ಬಸವನಬಾವಿ ವೃತ್ತ ಹಾಗೂ ಚಂದ್ರಮೌಳೇಶ್ವರ ವೃತ್ತದಿಂದ ತರಕಾರಿ ಮಾರುಕಟ್ಟೆಗೆ ಸಾಗುವ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಸಾರ್ವಜನಿಕರ
ಮತ್ತು ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ, ನಗರದಲ್ಲಿ ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ದುರಸ್ತಿಗೊಳಿಸಲು ಜಿಲ್ಲಾಡಾಳಿತ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಮುಖಂಡರಾದ ಎ.ಸಂದೀಪ ರೆಡ್ಡಿ, ಎಸ್.ಸುರೇಶ ರೆಡ್ಡಿ, ಎಸ್.ಶಿವಕುಮಾರ, ಮಲ್ಲನ್ನಗೌಡ, ರಾಜಶೇಖರ ರೆಡ್ಡಿ
ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್