Raichur: ಶಾಸಕಿಯಿಂದ ರಕ್ಷಿಸಿ: 59 ಮಂದಿ ಪೊಲೀಸರಿಂದ SP ಗೆ ಮನವಿ
ಅಕ್ರಮ ಮರಳು ದಂಧೆ ಹಲ್ಲೆ ಪ್ರಕರಣಕ್ಕೆ ಮತ್ತೂಂದು ಟ್ವಿಸ್ಟ್
Team Udayavani, Feb 16, 2024, 12:31 AM IST
ರಾಯಚೂರು: ಇತ್ತೀಚೆಗೆ ದೇವದು ರ್ಗದಲ್ಲಿ ಮುಖ್ಯ ಪೇದೆ ಹನುಮಂತ್ರಾಯ ಮೇಲೆ ಶಾಸಕಿ ಕರೆಮ್ಮ ನಾಯಕ ಪುತ್ರ ಸಂತೋಷ ಹಲ್ಲೆ ಮಾಡಿದ ಘಟನೆ ಹೊಸ ಸ್ವರೂಪ ಪಡೆದುಕೊಂಡಿದ್ದು, 59 ಪೊಲೀಸರು ತಮಗೆ ಶಾಸಕರಿಂದ ರಕ್ಷಣೆ ಬೇಕೆಂದು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.
ದೇವದುರ್ಗ ಕಾನೂನು ಸುವ್ಯವಸ್ಥೆ ವಿಭಾಗದ 36 ಹಾಗೂ ಸಂಚಾರಿ ಠಾಣೆಯ 23 ಮುಖ್ಯಪೇದೆ, ಪೇದೆಗಳಿಂದ ಮನವಿ ಸಲ್ಲಿಸಲಾಗಿದೆ. ತಾಲೂಕಿನಲ್ಲಿ ಜೂಜಾಟ, ಅಕ್ರಮ ಮರಳು ದಂಧೆ, ಇಸ್ಪೀಟ್, ಮಟ ಕಾ, ಕೋಳಿ ಪಂದ್ಯ, ಐಎಂವಿ, ಡಿಡಿ ಪ್ರಕರಣಗಳಲ್ಲಿ ದಾಳಿ ಮಾಡಿದಾಗ ಯಾರನ್ನೇ ಹಿಡಿದುಕೊಂಡು ಬಂದರೂ ನಮ್ಮನ್ನು ಕೇಳಬೇಕು. ಪ್ರಕರಣ ದಾಖಲಿಸುವಾಗ ನಮ್ಮ ಬೆಂಬಲಿಗರು ಹೌದೋ ಅಲ್ಲವೋ ಎಂದು ಖಚಿತಪಡಿಸಬೇಕು ಎಂದು ಶಾಸಕರು ತಿಳಿಸುತ್ತಿದ್ದಾರೆ. ನಮ್ಮ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.
ಶಾಸಕಿ ಕರೆಮ್ಮ ನಾಯಕ ವರ್ತನೆಯಿಂದ ನೈತಿಕ ಸ್ಥೈರ್ಯ ಕುಸಿ ದು ಮಾನಸಿಕ ಯಾತನೆ ಅನುಭವಿಸುತ್ತಿದ್ದೇವೆ. ಜೀವ ಭಯದಲ್ಲಿ ಕೆಲಸ ಮಾಡುವಂತಾಗಿದೆ. ಒಂದು ವೇಳೆ ರಾಜ ಕೀಯ ಹಸ್ತಕ್ಷೇಪದಿಂದ ಪೊಲೀಸ್ ಸಿಬ್ಬಂದಿ ವರ್ಗಾವಣೆ ಅಥವಾ ಅಮಾನತಾದರೆ ನಮ್ಮ ಕುಟುಂಬ ಆತಂಕಕ್ಕೆ ಒಳಗಾಗ ಬಹುದು. ಒಂದು ವೇಳೆ ಶಿಸ್ತು ಕ್ರಮ ಜರು ಗಿ ಸುವುದಾದರೆ ದೇವದುರ್ಗ ಠಾಣೆಯ ಎಲ್ಲ ಸಿಬ್ಬಂದಿಯನ್ನು ಸಾಮೂಹಿಕ ವರ್ಗಾ ವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ನಿಖೀಲ್ ಬಿ., ದೂರು ನೀಡಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ