ಕಲ್ಯಾಣದಲ್ಲಿ ಅಯೋಧ್ಯೆ ಸಂಭ್ರಮ : ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ
Team Udayavani, Aug 6, 2020, 10:47 AM IST
ರಾಯಚೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರುತ್ತಿದ್ದರೆ ಜಿಲ್ಲೆಯಲ್ಲೂ ಸಡಗರ ಮನೆ ಮಾಡಿತ್ತು. ಯಾವುದೇ ಅಹಿತಕರ ನಡೆಯದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದರೆ, ವಿವಿಧೆಡೆ ಪೂಜೆ ಸಲ್ಲಿಸುವ ಮೂಲಕ ಸಂತಸ ವ್ಯಕ್ತಪಡಿಸಲಾಯಿತು.
ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಮುಂಗ್ಲಿ ಪ್ರಾಣದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀರಾಮನ
ಬೃಹತ್ ಮೂರ್ತಿಗೆ ಮುಖಂಡರು ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು. ಇನ್ನೂ ನೂತನ ರಾಜಸಭೆ ಸದಸ್ಯ ಅಶೋಕ ಗಸ್ತಿ ತಮ್ಮ ಮನೆಯಲ್ಲಿಯೇ ರಾಮನ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಿದರು. ಇನ್ನೂ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು ಮಂದಿರ ನಿರ್ಮಾಣಕ್ಕೆ ಜಿಲ್ಲೆಯ ವಿ ವಿ
ಧಾರ್ಮಿಕ ತಾಣಗಳಿಂದ ಮೃತ್ತಿಕೆ ಹಾಗೂ ಜಲ ಕಳುಹಿಸಲಾಗಿತ್ತು. ಈ ನಿಮಿತ್ತ ಶ್ರೀ ರಾಮ, ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
ವ್ಯಾಪಕ ಬೆಂಬಲ: ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮದ ಬಗ್ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಅಯೋಧ್ಯೆ ಸಂಬಂ ಧಿಸಿದ ಸಂಗತಿಗಳೇ ಹರಿದಾಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್