Managaluru, Udupi ಕೆಲವೆಡೆ ಮಳೆ ಹಾನಿ: ಇಂದು ಮಳೆ ಸಾಧ್ಯತೆ
Team Udayavani, Mar 24, 2024, 12:48 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಶನಿವಾರ ಕೂಡ ಗುಡುಗು ಸಹಿತ ಮಳೆಯಾಗಿದೆ.
ಬೆಳ್ತಂಗಡಿ, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ಸಂಪಾಜೆ, ಐನೆಕಿದು, ಕಡಬ, ಉಡುಪಿ ಜಿಲ್ಲೆಯ ಕಾರ್ಕಳ ಸಹಿತ ಹಲವು ಕಡೆಗಳಲ್ಲಿ ಮಧ್ಯಾಹ್ನ ಬಳಿಕ ಉತ್ತಮ ಮಳೆ ಸುರಿದಿದೆ.
ವಿದ್ಯುತ್ ಕಂಬ, ಮರ ಧರೆಗೆ
ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಶನಿವಾರ ಕೂಡ ಮಳೆ ಸುರಿದಿದೆ. ದಿಡುಪೆ, ನಾರಾವಿ ಸಹಿತ ಸಂಸೆ ಗಡಿಭಾಗಗಳಲ್ಲಿ ಉತ್ತಮ ಗಾಳಿ ಮಳೆಯಾಗಿದ್ದು, ಬೆಳ್ತಂಗಡಿ, ಮಡಂತ್ಯಾರು, ಕಾಜೂರು, ಕೊಲ್ಲಿ ಸಹಿತ ನಡ, ಇಂದಬೆಟ್ಟು, ನಾವುರ, ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪರಿಸರದಲ್ಲಿಯೂ ಸಾಧಾರಣ ಮಳೆಯಾಗಿದೆ.
ಮುರಿದು ಬಿದ್ದ ಕಂಬಗಳು
ಚಾರ್ಮಾಡಿ, ಮುಂಡಾಜೆ ಕಡೆ ಮಳೆ ಬೀಳದಿದ್ದರೂ ಭಾರೀ ಗಾಳಿ ಬೀಸಿತು. ಗಾಳಿಯ ಪರಿಣಾಮ 3 ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಮುಂಡಾಜೆ ಸೀಟು ಸಮೀಪ ಹೆದ್ದಾರಿ ಹಾಗೂ ವಿದ್ಯುತ್ ಲೈನ್ ಮೇಲೆ ಮರಬಿದ್ದು ಕೊಂಚಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಇಂದು ಮಳೆ ಸಾಧ್ಯತೆ
ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್