ರೈತರಿಗೆ ಸಂಕಷ್ಟ ತಂದ ಅಕಾಲಿಕ ಮಳೆ : ನೀರು ತುಂಬಿ ಹರಿದ ದೊಡ್ಡ ಹಳ್ಳ


Team Udayavani, Jan 8, 2021, 5:29 PM IST

ರೈತರಿಗೆ ಸಂಕಷ್ಟ ತಂದ ಅಕಾಲಿಕ ಮಳೆ : ನೀರು ತುಂಬಿ ಹರಿದ ದೊಡ್ಡ ಹಳ್ಳ

ಸಿರುಗುಪ್ಪ: ತಾಲೂಕಿನಲ್ಲಿ ಬುಧವಾರ ಕೆಲವು ಕಡೆ ಭಾರಿ ಮಳೆಯಾಗಿರುವ ವರದಿಯಾಗಿತ್ತು. ಅದರಂತೆ ಗುರುವಾರ ತಾಲೂಕಿನಾದ್ಯಂತ ಜಿಟಿ ಜಿಟಿ ಮತ್ತು ಜೋರಾದ ಮಳೆ ಆಗಾಗ ಸುರಿಯುತ್ತಿರುವುದು ಸಾಮಾನ್ಯವಾಗಿದ್ದು, ಮೆಣಸಿನಕಾಯಿ
ಮತ್ತು ಹತ್ತಿ ಬೆಳೆಗಾರರು ಪರದಾಡುವಂತಾಗಿದೆ.

ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯಲ್ಲಿ ಒಂದುವರೆ ಗಂಟೆಗೂ ಹೆಚ್ಚು ಕಾಲ ಮಳೆ ಅಬ್ಬರಿಸಿದ್ದು, ಹಾಗಲೂರು ಹೊಸಳ್ಳಿ, ಕರೂರು, ದರೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೋರಾಗಿ ಭಾರಿ ಮಳೆ ಸುರಿದಿದೆ. ತಾಲೂಕಿನ ಹತ್ತಿ ಮತ್ತು ಮೆಣಸಿನಕಾಯಿ ಕೊಯ್ಲು ನಡೆಯುತ್ತಿದ್ದು, ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವಾಗುತ್ತಿದೆ. ಮೆಣಸಿನಕಾಯಿ ಒಣಗಿಸಲು ಬೆಳೆಗಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೊಯ್ಲು ಮಾಡದೇ ಉಳಿದಿರುವ ಮೆಣಸಿನಕಾಯಿ ನೆಲದ ಪಾಲಾಗುತ್ತಿವೆ.

ಹತ್ತಿಯು ಕಪ್ಪು ಬಣ್ಣಕ್ಕೆ ತಿರುಗುವ ಆತಂಕ ರೈತರನ್ನು ಕಾಡುತ್ತಿದೆ. ಕೊಯ್ಲು ಮಾಡಿದ ಮೆಣಸಿನಕಾಯಿಯನ್ನು ಬಯಲಲ್ಲಿ ಒಣ ಹಾಕಿದ್ದಾರೆ, ಬಿಸಿಲು ಸಮರ್ಪಕವಾಗಿದ್ದರೆ ಮೆಣಸಿನಕಾಯಿ ಒಣಗುತ್ತದೆ. ಇಲ್ಲದಿದ್ದರೆ ಒಣ ಮೆಣಸಿನಕಾಯಿಯ ಬಣ್ಣ ಕೆಟ್ಟು ಹೋದರೆ ಮಾರುಕಟ್ಟೆಯಲ್ಲಿ ಮೆಣಸಿನಕಾಯಿಯ ಧರ ಕಡಿಮೆಯಾಗುತ್ತದೆ ಎನ್ನುವ ಚಿಂತೆ ರೈತರನ್ನು ಕಾಡುತ್ತಿದೆ.

ಇದನ್ನೂ ಓದಿ:ಹುಡುಕಾಟದಲ್ಲೇ ಬಡವಾದ ಯೋಜನೆ! 2015ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ

ಈಗಾಗಲೇ ಕಡಲೆ ಬೆಳೆ ಹೂ ಬಿಟ್ಟಿದ್ದು, ಕಾಯಿಕಟ್ಟುವ ಹಂತದಲ್ಲಿದೆ. ಈಗ ಮಳೆಯಾದರೆ ಹೂ ಉದುರಿ ಹೋಗುತ್ತದೆ. ಅಲ್ಲದೆ ವ್ಯಾಪಕವಾಗಿ ಬೆಳೆದಿರುವ ಜೋಳವು ಮಳೆಯಿಂದಾಗಿ ಸರಿಯಾಗಿ ತೆನೆ ಕಟ್ಟುವುದಿಲ್ಲ, ಬೆಳೆ ಕುಂಠಿತವಾಗುತ್ತದೆ. ಅಕಾಲಿಕ ಮಳೆಯಿಂದಾಗಿ ಬೆಳೆಗಳಲ್ಲಿ ಹುಳುಗಳ ಕಾಟ ಹೆಚ್ಚಾಗುತ್ತದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಳಿ ಮತ್ತು ಮಳೆ ಎರಡೂ ಇದ್ದುದರಿಂದ ಜನರು ಮೈ ಮುದುರಿಕೊಂಡು ಮನೆಯಿಂದ ಹೊರ ಬರದೆ ಉಳಿದುಕೊಂಡಿದ್ದರು. ದಿನವಿಡಿ ಶೀತಗಾಳಿಯು ಮುಂದುವರೆದಿತ್ತು. ಕಳೆದೆರಡು ದಿನಗಳಿಂದ ಸೂರ್ಯನ ದರ್ಶನ ವಾಗಿಲ್ಲ. ಬೆಳಗಿನಿಂದ ರಾತ್ರಿವರೆಗೆ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ.

ಮಳೆಯಿಂದ ದೊಡ್ಡ ಹಳ್ಳಕ್ಕೆ ಜಲಕಳೆ

ಸಿರುಗುಪ್ಪ: ತಾಲೂಕಿನಲ್ಲಿ ಹರಿಯುವ ದೊಡ್ಡ ಹಳ್ಳದಲ್ಲಿ ಅಕಾಲಿಕ ಮಳೆಯಿಂದ ಜಲಕಳೆ ಬಂದಿದೆ. ಕಳೆದ ಒಂದು ತಿಂಗಳಿಂದ ದೊಡ್ಡ ಹಳ್ಳದಲ್ಲಿ ನೀರಿನ ಹರಿವು ಬತ್ತಿ ಹೋಗಿದ್ದು, ಹಳ್ಳದ ದಂಡೆಯ ರೈತರು ಏತನೀರಾವರಿ ಮೂಲಕ ಹಳ್ಳದ ನೀರನ್ನು ಬಳಸಿಕೊಂಡು ಕೃಷಿ ಮಾಡಲು ಅನಾನುಕೂಲವಾಗಿದೆ.

ಎಚ್‌.ಹೊಸಳ್ಳಿ, ಹಾಗಲೂರು, ಕರೂರು, ದರೂರು, ಗೋಸಬಾಳು, ಬೂದುಗುಪ್ಪ ಮುಂತಾದ ಗ್ರಾಮಗಳ ರೈತರ
ಜೀವನಾಡಿಯಾದ ದೊಡ್ಡ ಹಳ್ಳದ ನೀರನ್ನು ಬಳಸಿ ಸುಮಾರು 3 ಸಾವಿರದಿಂದ 4 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, ಹತ್ತಿ, ಮೆಣಸಿನಕಾಯಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ.

ಭತ್ತ ನಾಟಿಮಾಡುವ ರೈತರು ತಮ್ಮ ಗದ್ದೆಗಳಿಗೆ ಹಳ್ಳದಿಂದ ಸತತವಾಗಿ ನೀರು ಹರಿಸಿಕೊಂಡ ಕಾರಣ ನದಿಯಲ್ಲಿ ನೀರಿನ ಹರಿವು ಸಂಪೂರ್ಣವಾಗಿ ಕಡಿಮೆಯಾಗಿದ್ದು, ಬಸಿನೀರಿನಲ್ಲಿಯೇ ಗದ್ದೆಯಲ್ಲಿ ಭತ್ತ ನಾಟಿಮಾಡಲು ರೈತರು ಹರಸಾಹಸ ಪಡುತ್ತಿದ್ದರು.
ಆದರೆ ಬುಧವಾರ ಸುರಿದ ಭಾರಿ ಮಳೆಯ ಪರಿಣಾಮ ಹಳ್ಳವು ತುಂಬಿ ಹರಿಯುತ್ತಿದ್ದು, ಭತ್ತ ನಾಟಿಮಾಡುವ ರೈತರಿಗೆ ನೀರು
ಹರಿಸಿಕೊಳ್ಳಲು ಅನುಕೂಲವಾಗಿದೆ.

ಕರೂರಲ್ಲಿ ಅತಿ ಹೆಚ್ಚು ಮಳೆ

ಸಿರುಗುಪ್ಪ: ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದ್ದು, ಕರೂರಲ್ಲಿ ಅತಿಹೆಚ್ಚು 40.4ಮಿ. ಮೀ., ಸಿರುಗುಪ್ಪದಲ್ಲಿ
ಅತಿಕಡಿಮೆ 2.4ಮಿ. ಮೀ. ಮಳೆಯಾಗಿದೆ. ಸಿರುಗುಪ್ಪ.2.4, ತೆಕ್ಕಲಕೋಟೆ 6.2, ಸಿರಿಗೇರಿ 9.2, ಎಂ.ಸೂಗೂರು 5.2, ಹಚ್ಚೊಳ್ಳಿ 3.0, ಕರೂರು 40.4, ಕೆ.ಬೆಳಗಲ್ಲು 3.6 ಮಿ.ಮೀ. ಮಳೆಯಾಗಿದೆ ಎಂದು ತಾಲೂಕು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.