ರಾಮನಗರ ಜಿಲ್ಲೆಯಲ್ಲಿ ಮಳೆ ಹಾವಳಿ: ಉಸ್ತುವಾರಿ ಸಚಿವರ ಭೇಟಿ, ತಕ್ಷಣ ಕ್ರಮಕ್ಕೆ ಆದೇಶ
ಕೆರೆಗಳು ಕೋಡಿ ಬಿದ್ದು ಸಾವಿರಾರು ಎಕರೆ ಜಮೀನಿಗೆ ನುಗ್ಗಿ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
Team Udayavani, Aug 29, 2022, 2:35 PM IST
ಬೆಂಗಳೂರು: ಸತತ ಮಳೆಯಿಂದ ನಲುಗಿರುವ ರಾಮನಗರ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಸೋಮವಾರ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಆಗಿರುವ ನಷ್ಟದ ಮಾಹಿತಿ ಪಡೆದುಕೊಂಡರು.
ಏತನ್ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, “ರಾಮನಗರ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಅಪಾರ ಹಾನಿಯಾಗಿದೆ. ಸಂತ್ರಸ್ತರಿಗೆ ತಕ್ಷಣವೇ ಗಂಜಿಕೇಂದ್ರ, ಸುರಕ್ಷಿತ ಸ್ಥಳಾಂತರ, ದವಸ ಧಾನ್ಯ ವಿತರಣೆ ಮತ್ತು ಮನೆಗಳಿಂದ ನೀರು ತೆರವಿಗೆ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ‘ಜಿಲ್ಲೆಯಲ್ಲಿ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿಯವರ ಜತೆ ಬೆಳಿಗ್ಗೆ ಚರ್ಚಿಸಿದ್ದೆ. ಜತೆಗೆ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದು ತತ್ಕ್ಷಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕ್ಷಿಪ್ರವಾಗಿ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ’ ಎಂದಿದ್ದಾರೆ.
ಜಿಲ್ಲೆಯ ಹಲವು ಕೆರೆಗಳು ಕೋಡಿ ಬಿದ್ದು ಬೆಂಗಳೂರು ಮೈಸೂರು ಹೆದ್ದಾರಿಯ ಮೇಲೆ ನೀರು ನುಗ್ಗಿ, ಅಸ್ತವ್ಯಸ್ತವಾಗಿದೆ. ಆದ್ದರಿಂದ ಎರಡೂ ನಗರಗಳ ನಡುವೆ ಪಯಣ ಮಾಡುವವರು ಪರ್ಯಾಯ ಮಾರ್ಗಗಳನ್ನು ಆಶ್ರಯಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಕೆರೆಗಳು ಕೋಡಿ ಬಿದ್ದು ಸಾವಿರಾರು ಎಕರೆ ಜಮೀನಿಗೆ ನುಗ್ಗಿ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಬೆಳೆ ನಷ್ಟದ ಅಂದಾಜು ಮಾಡಲು ಕೃಷಿ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ರಾಮನಗರದಲ್ಲಿ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಇಂಥವರಿಗೂ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಮೊದಲಿಗೆ ನೀರು ತೆರವುಗೊಳಿಸಲು ಆದ್ಯತೆ ಕೊಡಲಾಗಿದೆ. ಇದರ ಜತೆಗೆ ಮಳೆ ನೀರಿನ ಹರಿವನ್ನು ಬೇರೆಡೆಗೆ ಹೊರಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು