Ind V/s SA: ದ್ವಿತೀಯ ಟಿ-20 ಪಂದ್ಯಕ್ಕೂ ಮಳೆ ತೊಂದರೆ


Team Udayavani, Dec 12, 2023, 11:55 PM IST

rin

ಕೆಬೆರಾ: ನಾಯಕ ಸೂರ್ಯಕುಮಾರ್‌ ಯಾದವ್‌ ಮತ್ತು ರಿಂಕು ಸಿಂಗ್‌ ಅವರ ಅರ್ಧಶತಕದಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದೆದುರಿನ ದ್ವಿತೀಯ ಟಿ20 ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆದರೆ ಭಾರತದ ಇನ್ನಿಂಗ್ಸ್‌ ಮುಗಿಯಲು ಮೂರು ಎಸೆತ ಬಾಕಿ ಇರುವಾಗ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ. ಆಗ ಭಾರತ 19.3 ಓವರ್‌ಗಳಲ್ಲಿ 7 ವಿಕೆಟಿಗೆ 180 ರನ್‌ ಗಳಿಸಿತ್ತು. ರಿಂಕು ಸಿಂಗ್‌ 68 ರನ್ನುಗಳಿಂದ ಆಡುತ್ತಿದ್ದರು.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ತಂಡವು ಆರಂಭದಲ್ಲಿಯೇ ಆಘಾತ ಅನುಭವಿಸಿತು. ಇನ್ನೂ ರನ್‌ ಖಾತೆ ತೆರೆಯುವ ಮೊದಲೇ ಯಶಸ್ವಿ ಜೈಸ್ವಾಲ್‌ ಅವರ ವಿಕೆಟನ್ನು ಕಳೆದುಕೊಂಡು ಕುಸಿಯಿತು. ಆರು ರನ್‌ ತಲುಪುವಷ್ಟರಲ್ಲಿ ಗಿಲ್‌ ಅವರನ್ನು ಉರುಳಿದ ದಕ್ಷಿಣ ಆಫ್ರಿಕಾ ಪ್ರವಾಸಿ ತಂಡಕ್ಕೆ ಇನ್ನೊಂದು ಹೊಡೆತ ನೀಡಿತು.

ಆಬಳಿಕ ತಿಲಕ್‌ ವರ್ಮ ಮತ್ತು ನಾಯಕ ಸೂರ್ಯಕುಮಾರ್‌ ಯಾದವ್‌ ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು. ಮೂರನೇ ವಿಕೆಟಿಗೆ 49 ರನ್‌ ಪೇರಿಸಿದರು. ಈ ಹಂತದಲ್ಲಿ 29 ರನ್‌ ಗಳಿಸಿದ ತಿಲಕ್‌ ವರ್ಮ ಔಟಾದರು. ಸೂರ್ಯ ಅವರನ್ನು ಸೇರಿಕೊಂಡ ರಿಂಕು ಸಿಂಗ್‌ ಬಿರುಸಿನ ಆಟಕ್ಕೆ ಮುಂದಾದರು. ಅವರಿಬ್ಬರು 70 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡವನ್ನು ಸುಸ್ಥಿತಿಗೆ ತಲುಪಿಸಲು ಪ್ರಯತ್ನಿಸಿದರು. ಉತ್ತಮವಾಗಿ ಆಡುತ್ತಿದ್ದ ಸೂರ್ಯಕುಮಾರ್‌ ಯಾದವ್‌ ದೊಡ್ಡ ಹೊಡೆತಕ್ಕೆ ಯತ್ನಿಸಿ ಶಮಿÕಗೆ ವಿಕೆಟ್‌ ಒಪ್ಪಿಸಿದರು. 36 ಎಸೆತ ಎದುರಿಸಿದ ಅವರು 5 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದರು. ಕೊನೆ ಹಂತದಲ್ಲಿ ರಿಂಕು ಸಿಂಗ್‌ ಮತ್ತು ರವೀಂದ್ರ ಜಡೇಜ ಬಿರುಸಿನ ಆಟ ಆಡಿದ್ದರಿಂದ ತಂಡದ ಮೊತ್ತ 175ರ ಗಡಿ ದಾಟಿತು.

ಭಾರೀ ಮಳೆಯಿಂದ ಸರಣಿಯ ಮೊದಲ ಪಂದ್ಯ ಯಾವುದೇ ಎಸೆತ ಕಾಣದೆ ರದ್ದುಗೊಂಡಿತ್ತು. ಮಂಗಳವಾರ ಬೆಳಗ್ಗೆ ಹಗುರ ಮಳೆ ಬಂದಿತ್ತು. ಆದರೆ ಪಂದ್ಯ ನಿಗದಿತ ಸಮಯಕ್ಕೆ ಆರಂಭಗೊಂಡರೂ ಪಂದ್ಯ ಮುಗಿಯಲು ಮೂರು ಎಸೆತ ಇರುವಾಗ ಮತ್ತೆ ಮಳೆ ಆರಂಭಗೊಂಡ ಕಾರಣ ಪಂದ್ಯ ಸ್ಥಗಿತಗೊಂಡಿದೆ.

ಸಂಕ್ಷಿಪ್ತ ಸ್ಕೋರು
ಭಾರತ 19.3 ಓವರ್‌ಗಳಲ್ಲಿ 7 ವಿಕೆಟಿಗೆ 180 (ತಿಲಕ್‌ ವರ್ಮ 29, ಸೂರ್ಯಕುಮಾರ್‌ ಯಾದವ್‌ 56, ರಿಂಕು ಸಿಂಗ್‌ ಔಟಾಗದೆ 68, ರವೀಂದ್ರ ಜಡೇಜ 19).

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.