ಹೊಸ ಬಜೆಟ್‌ಗೆ ಅತಿವೃಷ್ಟಿ ಅಡ್ಡಿ

ಲೆಕ್ಕಾಚಾರ ತಪ್ಪಿಸಿದ ಮಳೆ ಹಾನಿ, ಪ್ರವಾಹ ಸ್ಥಿತಿ

Team Udayavani, Aug 13, 2019, 6:00 AM IST

r-43

ಬೆಂಗಳೂರು: ಸರ್ಕಾರ ರಚನೆಯಾಗುತ್ತಿದ್ದಂತೆ ಹೊಸ ಬಜೆಟ್‌ ಮಂಡಿಸುವ ಉತ್ಸಾಹದಲ್ಲಿದ್ದ ಬಿಜೆಪಿಗೆ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಅತಿವೃಷ್ಟಿ ಅನಿರೀಕ್ಷಿತ ಆಘಾತ ನೀಡಿದೆ. ಹಲವು ಜಿಲ್ಲೆಗಳ ಜನ ಪ್ರವಾಹದಿಂದ ತತ್ತರಿಸಿದ್ದು, ಅವರಿಗೆ ಪುನರ್ವಸತಿ
ಕಲ್ಪಿಸಿ ಮೂಲ ಸೌಕರ್ಯವನ್ನು ಪುನರ್‌ ನಿರ್ಮಿಸಬೇಕಾದ ಅನಿ ವಾರ್ಯತೆಯಿದೆ. ಹಾಗಾಗಿ ಕೇಂದ್ರದಿಂದ ವಿಶೇಷ ಅನುದಾನದ ನಿರೀಕ್ಷೆಯಲ್ಲಿ ಬಿಜೆಪಿ ಸರ್ಕಾರವಿದೆ.

ಮೂರು ತಿಂಗಳ ಅವಧಿಗೆ ಲೇಖಾನುದಾನ ಪಡೆದಿರುವ ಬಿಜೆಪಿಯು ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ನಲ್ಲಿ ಬಜೆಟ್‌ ಮಂಡಿಸಲು ಚಿಂತಿಸಿದೆ. ಆದರೆ ಅತಿವೃಷ್ಟಿಯಿಂದ ಉಂಟಾದ ಪ್ರವಾಹದಿಂದಾಗಿ ಭಾರೀ
ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು, ಜನ ತೀವ್ರ ಸಂಕಷ್ಟದಲ್ಲಿದ್ದಾರೆ. ಪುನರ್ವಸತಿ, ಪುನರುಜ್ಜೀವ ನಕ್ಕೆ ಕೇಂದ್ರದ ಸಹಾಯ ಹಸ್ತವನ್ನೇ ನೆಚ್ಚಿಕೊಂಡಿದ್ದು, ಯಾವ ರೀತಿಯ ಸ್ಪಂದನೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆರು ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಹೊಸ ಬಜೆಟ್‌ ಮಂಡಿಸಿ ಜನಪರ ಯೋಜನೆಗಳನ್ನು ಘೋಷಿಸುವುದು. ಜತೆಗೆ ಕೇಂದ್ರ ಸರ್ಕಾರದ ಯೋಜನೆಗಳಡಿ ಹೆಚ್ಚಿನ ಅನುದಾನ ಪಡೆದು ಸರ್ಕಾರ ಹಾಗೂ ಪಕ್ಷದ ವರ್ಚಸ್ಸು ವೃದಿಟಛಿಸಿಕೊ ಳ್ಳುವುದು ರಾಜ್ಯ ಬಿಜೆಪಿ ನಾಯಕರ ಲೆಕ್ಕಾಚಾರವಾಗಿತ್ತು. ಸಂಪುಟ ರಚನೆಯಾಗುತ್ತಿದ್ದಂತೆ ಬಜೆಟ್‌ ತಯಾರಿ ಪ್ರಕ್ರಿಯೆ ಆರಂಭಿಸಲು ಚಿಂತಿಸಿತ್ತು. ಆದರೆ ಅನಿ ರೀಕ್ಷಿತವಾಗಿ 17 ಜಿಲ್ಲೆಗಳಲ್ಲಿ ಬಂದೆರಗಿದ ಅತಿವೃಷ್ಟಿ ಎಲ್ಲ ಲೆಕ್ಕಾಚಾರಗಳನ್ನು ಉಲ್ಟಾಪಲ್ಟಾ ಮಾಡಿದೆ.

ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ: ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಹಕಾರ ಬ್ಯಾಂಕ್‌ ಹಾಗೂ ವಾಣಿಜ್ಯ ಬ್ಯಾಂಕ್‌ಗಳಲ್ಲಿನ ಆಯ್ದ ಮೊತ್ತದ ರೈತರ ಸಾಲ ಮನ್ನಾ ಸೇರಿದಂತೆ ಇತರೆ ಕೆಲ ಯೋಜನೆಗಳಿಗೆ ಹಣ
ಹೊಂದಿಸುವ ಪ್ರಯತ್ನದ ಭಾಗವಾಗಿ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ. ಈಗಾಗಲೇ ಅಂದಾಜು ಮಾಡಿರುವ ತೆರಿಗೆ ಆದಾಯದಲ್ಲಿ ಗರಿಷ್ಠ ಸಂಗ್ರಹವಾದರೂ ಹೆಚ್ಚಿನ ಆದಾಯ ಕ್ರೋಡೀಕರಣ
ಸಾಧ್ಯತೆ ಕಡಿಮೆ ಎನ್ನಲಾಗಿದೆ. ರಾಜ್ಯದಲ್ಲಿ 45 ವರ್ಷಗಳಲ್ಲಿ ಕಂಡು ಕೇಳರಿಯದ ಪ್ರವಾಹ ತಲೆದೋರಿದ್ದು, ಭಾರೀ ಪ್ರಮಾಣದಲ್ಲಿ ಆಸ್ತಿಪಾಸ್ತಿ, ಮೂಲ ಸೌಕರ್ಯಕ್ಕೆ ಹಾನಿಯಾಗಿದೆ.

ಇದರ ಪುನರ್ವಸತಿ ಹೊಂದಿಸಬೇಕಾದ ಹಣದ ಮೊತ್ತವನ್ನು
ಕಲ್ಪಿಸಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ
ಬಿ.ಎಸ್‌.ಯಡಿಯೂರಪ್ಪ ಅವರೇ ಇತ್ತೀಚೆಗೆ ಹೇಳಿದ್ದಾರೆ. ಸದ್ಯ
ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿಯಿಂದ
ಉಂಟಾಗಿರುವ ನಷ್ಟ ಭರಿಸಲು, ಪುನರ್ವಸತಿ, ಪುನರುಜ್ಜೀವನ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ಅನುದಾನವೇ ಆಸರೆ ಎನಿಸಿದೆ. ಈಗಾಗಲೇ 7000 ಕೋಟಿ ರೂ. ನಷ್ಟದ ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರ ಅನುದಾನ ನೀಡಿದರಷ್ಟೇ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸಾಧ್ಯ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದರು.

ಜನವರಿಯಲ್ಲಿ ಬಜೆಟ್‌?
ಇನ್ನೊಂದು ಮೂಲಗಳ ಪ್ರಕಾರ, ಕೇಂದ್ರ ಸರ್ಕಾರ ಜನವರಿಯಲ್ಲೇ ಬಜೆಟ್‌ ಮಂಡಿಸುವ ವ್ಯವಸ್ಥೆ ತರುವ ಬಗ್ಗೆ ಚಿಂತಿಸಿದ್ದು, ಒಂದೊಮ್ಮೆ ಮುಂದಿನ ವರ್ಷದಿಂದಲೇ ಜಾರಿಗೊಳಿಸಲು ಮುಂದಾದರೆ
ಆಗ ರಾಜ್ಯ ಸರ್ಕಾರದ ವತಿಯಿಂದ ಮಧ್ಯಂತರ ಬಜೆಟ್‌ಗಿಂತಲೂ ಜನವರಿ ಹೊತ್ತಿಗೆ ಬಜೆಟ್‌ ಮಂಡಿಸುವ ನಿರ್ಧಾರ ಕೈಗೊಂಡರೂ ಆಶ್ಚರ್ಯವಿಲ್ಲ. ಪರಿಹಾರ ಹಾಗೂ ಪುನರುಜ್ಜೀವನ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ ಸೆಪ್ಟೆಂಬರ್‌ ಎರಡನೇ ವಾರದಿಂದ ಬಜೆಟ್‌ ತಯಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ಹೇಳಿವೆ.

ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.